<p><strong>ಕಠ್ಮಂಡು:</strong> ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ನೇಪಾಳದ ಫೆಡರಲ್ ವ್ಯವಹಾರ ಮತ್ತು ಸಾಮಾನ್ಯ ಆಡಳಿತ ಸಚಿವ ರಾಜ್ಕುಮಾರ್ ಗುಪ್ತಾ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. </p><p>ರಾಜ್ಕುಮಾರ್ ಗುಪ್ತಾ ಅವರು ಸರ್ಕಾರಿ ಅಧಿಕಾರಿಗಳ ನೇಮಕಾತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಹಣ ಪಡೆಯುವ ಕುರಿತು ಮಾತನಾಡುತ್ತಿರುವ ಆಡಿಯೊಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. </p><p>ಎರಡು ಬ್ಯಾಗ್ಗಳಲ್ಲಿ ಭ್ರಷ್ಟಾಚಾರದ ಹಣವಿರುವ ಚಿತ್ರ ಸಹಿತ ಅವರ ವಿರುದ್ಧ ಅಧಿಕಾರ ದುರುಪಯೋಗದ ತನಿಖಾ ಆಯೋಗ(ಸಿಐಎಎ)ದಲ್ಲಿ ದೂರು ಸಲ್ಲಿಸಲಾಗಿತ್ತು. </p><p>ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಕುಮಾರ್ ಗುಪ್ತಾ ‘ಇದು ಸುಳ್ಳು ಆರೋಪವಾಗಿದೆ. ಕೆಲವು ಬಾರಿ ನಾವು ಸೇವಿಸದ ವಿಷವು ಕೂಡ ನಮಗೆ ಹಾನಿ ಮಾಡುತ್ತದೆ. ಪ್ರಕರಣದ ಪಾರದರ್ಶಕ ತನಿಖೆಗಾಗಿ ಪ್ರಧಾನಿ ಕೆ.ಪಿ. ಓಲಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ’ಎಂದಿದ್ದಾರೆ. </p><p>ಭ್ರಷ್ಟಾಚಾರದ ಆಡಿಯೊ ಪ್ರಸಾರವಾದ ನಂತರ, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಗುಪ್ತಾ ಅವರ ರಾಜೀನಾಮೆಗೆ ಆಗ್ರಹಿಸಿದ್ದವು. </p><p>ಪ್ರಧಾನ ಮಂತ್ರಿ ಕೆ.ಪಿ. ಓಲಿ ಅವರು ರಾಜ್ಕುಮಾರ್ ಗುಪ್ತಾ ಅವರನ್ನು ತಮ್ಮ ಅಧಿಕೃತ ನಿವಾಸಕ್ಕೆ ಕರೆಸಿಕೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಿಳಿಸಿದ್ದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ನೇಪಾಳದ ಫೆಡರಲ್ ವ್ಯವಹಾರ ಮತ್ತು ಸಾಮಾನ್ಯ ಆಡಳಿತ ಸಚಿವ ರಾಜ್ಕುಮಾರ್ ಗುಪ್ತಾ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. </p><p>ರಾಜ್ಕುಮಾರ್ ಗುಪ್ತಾ ಅವರು ಸರ್ಕಾರಿ ಅಧಿಕಾರಿಗಳ ನೇಮಕಾತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಹಣ ಪಡೆಯುವ ಕುರಿತು ಮಾತನಾಡುತ್ತಿರುವ ಆಡಿಯೊಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. </p><p>ಎರಡು ಬ್ಯಾಗ್ಗಳಲ್ಲಿ ಭ್ರಷ್ಟಾಚಾರದ ಹಣವಿರುವ ಚಿತ್ರ ಸಹಿತ ಅವರ ವಿರುದ್ಧ ಅಧಿಕಾರ ದುರುಪಯೋಗದ ತನಿಖಾ ಆಯೋಗ(ಸಿಐಎಎ)ದಲ್ಲಿ ದೂರು ಸಲ್ಲಿಸಲಾಗಿತ್ತು. </p><p>ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಕುಮಾರ್ ಗುಪ್ತಾ ‘ಇದು ಸುಳ್ಳು ಆರೋಪವಾಗಿದೆ. ಕೆಲವು ಬಾರಿ ನಾವು ಸೇವಿಸದ ವಿಷವು ಕೂಡ ನಮಗೆ ಹಾನಿ ಮಾಡುತ್ತದೆ. ಪ್ರಕರಣದ ಪಾರದರ್ಶಕ ತನಿಖೆಗಾಗಿ ಪ್ರಧಾನಿ ಕೆ.ಪಿ. ಓಲಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ’ಎಂದಿದ್ದಾರೆ. </p><p>ಭ್ರಷ್ಟಾಚಾರದ ಆಡಿಯೊ ಪ್ರಸಾರವಾದ ನಂತರ, ಆಡಳಿತ ಮತ್ತು ವಿರೋಧ ಪಕ್ಷಗಳೆರಡೂ ಗುಪ್ತಾ ಅವರ ರಾಜೀನಾಮೆಗೆ ಆಗ್ರಹಿಸಿದ್ದವು. </p><p>ಪ್ರಧಾನ ಮಂತ್ರಿ ಕೆ.ಪಿ. ಓಲಿ ಅವರು ರಾಜ್ಕುಮಾರ್ ಗುಪ್ತಾ ಅವರನ್ನು ತಮ್ಮ ಅಧಿಕೃತ ನಿವಾಸಕ್ಕೆ ಕರೆಸಿಕೊಂಡು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಿಳಿಸಿದ್ದರು ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>