<p><strong>ಕಠ್ಮಂಡು(ನೇಪಾಳ):</strong> ರಾಷ್ಟ್ರದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆ 2026ರ ಮಾರ್ಚ್ 5ರಂದು ನಡೆಯಲಿದೆ ಎಂದು ಅಧ್ಯಕ್ಷ ರಾಮಚಂದ್ರ ಪೌದೆಲ್ ಅವರ ಕಚೇರಿ ಘೋಷಿಸಿದೆ. </p>.<p>ಹಂಗಾಮಿ ಪ್ರಧಾನಿ ಸುಶೀಲಾ ಕಾರ್ಕಿ ಅವರ ಶಿಫಾರಸಿನ ಮೇರೆಗೆ ಶುಕ್ರವಾರ ತಡರಾತ್ರಿಯೇ ಸಂಸತ್ತನ್ನು ಅಧ್ಯಕ್ಷ ಪೌದೆಲ್ ವಿಸರ್ಜಿಸಿದ್ದರು.</p>.<p>ಈ ಸಂಬಂಧ ಅಧ್ಯಕ್ಷರ ಕಚೇರಿ ಪ್ರಕಟಣೆ ಹೊರಡಿಸಿದೆ. 2025ರ ಸೆಪ್ಟೆಂಬರ್ 12ರ ರಾತ್ರಿ 11 ರಿಂದ ಅನ್ವಯವಾಗುವಂತೆ ಸಂಸತ್ ಅನ್ನು ವಿಸರ್ಜಿಸಲಾಗುತ್ತಿದ್ದು, 2026ರ ಮಾರ್ಚ್ 5ಕ್ಕೆ ಸಾರ್ವತ್ರಿಕ ಚುನಾವಣೆಯನ್ನು ನಿಗದಿ ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. </p>.<h2>ನಾಳೆ ಸಂಪುಟ ರಚನೆ: </h2><p>ನೂತನ ಹಂಗಾಮಿ ಪ್ರಧಾನಿ ಆಗಿರುವ ಸುಶೀಲಾ ಕಾರ್ಕಿ ಅವರು ಗೃಹ ಸಚಿವರು, ವಿದೇಶಾಂಗ ಹಾಗೂ ರಕ್ಷಣಾ ಸಚಿವರು ಸೇರಿದಂತೆ ಕೆಲವೇ ಸಚಿವರನ್ನು ಒಳಗೊಂಡ ಸಂಪುಟವನ್ನು ನಾಳೆ(ಭಾನುವಾರ) ರಚಿಸಲಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಮೂಲಗಳು ತಿಳಿಸಿವೆ.</p>.<p>ಅಲ್ಲದೇ, ‘ಜೆನ್–ಝೀ’ ಪ್ರತಿಭಟನೆ ವೇಳೆ ಪ್ರಧಾನಿ ಕಚೇರಿಯ ಕಟ್ಟಡವೂ ಬೆಂಕಿಗೆ ಆಹುತಿಯಾಗಿರುವ ಕಾರಣ ಸಿಂಗದರ್ಬಾರ್ ಸಂಕೀರ್ಣದಲ್ಲಿ ಗೃಹ ಸಚಿವಾಲಯಕ್ಕಾಗಿ ನೂತನವಾಗಿ ನಿರ್ಮಿಸಿರುವ ಕಚೇರಿಯನ್ನೇ ಪ್ರಧಾನಿ ಕಚೇರಿಯನ್ನಾಗಿ ಮಾರ್ಪಾಡು ಮಾಡಲಾಗುತ್ತಿದೆ ಎಂದೂ ತಿಳಿದುಬಂದಿದೆ. </p>.ನೇಪಾಳ: ನೂತನ ಪ್ರಧಾನಿಯಾಗಿ ಸುಶೀಲಾ ಕಾರ್ಕಿ ಪ್ರಮಾಣವಚನ ಸ್ವೀಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು(ನೇಪಾಳ):</strong> ರಾಷ್ಟ್ರದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆ 2026ರ ಮಾರ್ಚ್ 5ರಂದು ನಡೆಯಲಿದೆ ಎಂದು ಅಧ್ಯಕ್ಷ ರಾಮಚಂದ್ರ ಪೌದೆಲ್ ಅವರ ಕಚೇರಿ ಘೋಷಿಸಿದೆ. </p>.<p>ಹಂಗಾಮಿ ಪ್ರಧಾನಿ ಸುಶೀಲಾ ಕಾರ್ಕಿ ಅವರ ಶಿಫಾರಸಿನ ಮೇರೆಗೆ ಶುಕ್ರವಾರ ತಡರಾತ್ರಿಯೇ ಸಂಸತ್ತನ್ನು ಅಧ್ಯಕ್ಷ ಪೌದೆಲ್ ವಿಸರ್ಜಿಸಿದ್ದರು.</p>.<p>ಈ ಸಂಬಂಧ ಅಧ್ಯಕ್ಷರ ಕಚೇರಿ ಪ್ರಕಟಣೆ ಹೊರಡಿಸಿದೆ. 2025ರ ಸೆಪ್ಟೆಂಬರ್ 12ರ ರಾತ್ರಿ 11 ರಿಂದ ಅನ್ವಯವಾಗುವಂತೆ ಸಂಸತ್ ಅನ್ನು ವಿಸರ್ಜಿಸಲಾಗುತ್ತಿದ್ದು, 2026ರ ಮಾರ್ಚ್ 5ಕ್ಕೆ ಸಾರ್ವತ್ರಿಕ ಚುನಾವಣೆಯನ್ನು ನಿಗದಿ ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. </p>.<h2>ನಾಳೆ ಸಂಪುಟ ರಚನೆ: </h2><p>ನೂತನ ಹಂಗಾಮಿ ಪ್ರಧಾನಿ ಆಗಿರುವ ಸುಶೀಲಾ ಕಾರ್ಕಿ ಅವರು ಗೃಹ ಸಚಿವರು, ವಿದೇಶಾಂಗ ಹಾಗೂ ರಕ್ಷಣಾ ಸಚಿವರು ಸೇರಿದಂತೆ ಕೆಲವೇ ಸಚಿವರನ್ನು ಒಳಗೊಂಡ ಸಂಪುಟವನ್ನು ನಾಳೆ(ಭಾನುವಾರ) ರಚಿಸಲಿದ್ದಾರೆ ಎಂದು ಅಧ್ಯಕ್ಷರ ಕಚೇರಿಯ ಮೂಲಗಳು ತಿಳಿಸಿವೆ.</p>.<p>ಅಲ್ಲದೇ, ‘ಜೆನ್–ಝೀ’ ಪ್ರತಿಭಟನೆ ವೇಳೆ ಪ್ರಧಾನಿ ಕಚೇರಿಯ ಕಟ್ಟಡವೂ ಬೆಂಕಿಗೆ ಆಹುತಿಯಾಗಿರುವ ಕಾರಣ ಸಿಂಗದರ್ಬಾರ್ ಸಂಕೀರ್ಣದಲ್ಲಿ ಗೃಹ ಸಚಿವಾಲಯಕ್ಕಾಗಿ ನೂತನವಾಗಿ ನಿರ್ಮಿಸಿರುವ ಕಚೇರಿಯನ್ನೇ ಪ್ರಧಾನಿ ಕಚೇರಿಯನ್ನಾಗಿ ಮಾರ್ಪಾಡು ಮಾಡಲಾಗುತ್ತಿದೆ ಎಂದೂ ತಿಳಿದುಬಂದಿದೆ. </p>.ನೇಪಾಳ: ನೂತನ ಪ್ರಧಾನಿಯಾಗಿ ಸುಶೀಲಾ ಕಾರ್ಕಿ ಪ್ರಮಾಣವಚನ ಸ್ವೀಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>