<p><strong>ಕಠ್ಮಂಡು: </strong>ಆಡಳಿತಾರೂಢ ಪಕ್ಷವುತಮ್ಮ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಕೈಗೊಂಡ ನಿರ್ಣಯವನ್ನು ತಿರಸ್ಕರಿಸುವುದಾಗಿ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಹೇಳಿದ್ದಾರೆ.</p>.<p>ಸಂಸತ್ ವಿಸರ್ಜಿಸಿರುವುದು ಅಸಾಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ ಮತ್ತು ಸ್ವಾರ್ಥದ ಕ್ರಮವಾಗಿದೆ. ಹೀಗಾಗಿ, ಒಲಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವಂತೆ ಶಿಫಾರಸು ಮಾಡಿ ನೇಪಾಳದ ಆಡಳಿತಾರೂಢ ಕಮ್ಯೂನಿಸ್ಟ್ ಪಕ್ಷದ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.</p>.<p>ಈ ನಿರ್ಣಯಕ್ಕೆ ಪ್ರತಿಕ್ರಿಯಿಸಿರುವ ಒಲಿ, ’ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಶಕ್ತಿಗಳ ಜತೆ ಸೇರಿ ನನ್ನ ವಿರುದ್ಧ ಸಂಚು ರೂಪಿಸಲಾಗಿತ್ತು. ಆದ್ದರಿಂದ, ಒತ್ತಡದ ಪರಿಸ್ಥಿತಿಯಲ್ಲಿ ಸಂಸತ್ ವಿಸರ್ಜಿಸಲಾಯಿತು’ ಎಂದು ಸಮರ್ಥಿಸಿಕೊಂಡಿದ್ದಾರೆ</p>.<p>‘ಪಕ್ಷದ ನಿಯಮಗಳ ವಿರುದ್ಧವೇ ನನ್ನ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ. ಪಕ್ಷದ ಸಭೆಯನ್ನು ನಾನೇ ಕರೆಯಬೇಕಾಗಿತ್ತು ಮತ್ತು ಅಧ್ಯಕ್ಷತೆಯನ್ನು ವಹಿಸಬೇಕಾಗಿತ್ತು. ಈಗ ನಡೆದಿರುವ ಸಭೆಯ ಅಧ್ಯಕ್ಷತೆಯನ್ನು ಇನ್ನೊಬ್ಬರು ವಹಿಸಿಕೊಂಡಿರುವುದರಿಂದ ನಿಯಮಗಳ ಪ್ರಕಾರ ಮಾನ್ಯತೆ ಇಲ್ಲ’ ಎಂದು ಹೇಳಿದ್ದಾರೆ.</p>.<p>‘ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಅವರನ್ನು ವಾಗ್ದಾಂಡನೆಗೆ ಗುರಿಪಡಿಸುವ ಪ್ರಯತ್ನಗಳು ನಡೆದಿದ್ದವು ಮತ್ತು ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಯೋಜನೆ ರೂಪಿಸಲಾಗಿತ್ತು. ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಜನರ ಕ್ಷಮೆಯಾಚಿಸಿ ಹೊಸದಾಗಿ ಚುನಾವಣೆ ನಡೆಸಲೇಬೇಕಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು: </strong>ಆಡಳಿತಾರೂಢ ಪಕ್ಷವುತಮ್ಮ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಕೈಗೊಂಡ ನಿರ್ಣಯವನ್ನು ತಿರಸ್ಕರಿಸುವುದಾಗಿ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಹೇಳಿದ್ದಾರೆ.</p>.<p>ಸಂಸತ್ ವಿಸರ್ಜಿಸಿರುವುದು ಅಸಾಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ ಮತ್ತು ಸ್ವಾರ್ಥದ ಕ್ರಮವಾಗಿದೆ. ಹೀಗಾಗಿ, ಒಲಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವಂತೆ ಶಿಫಾರಸು ಮಾಡಿ ನೇಪಾಳದ ಆಡಳಿತಾರೂಢ ಕಮ್ಯೂನಿಸ್ಟ್ ಪಕ್ಷದ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.</p>.<p>ಈ ನಿರ್ಣಯಕ್ಕೆ ಪ್ರತಿಕ್ರಿಯಿಸಿರುವ ಒಲಿ, ’ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಶಕ್ತಿಗಳ ಜತೆ ಸೇರಿ ನನ್ನ ವಿರುದ್ಧ ಸಂಚು ರೂಪಿಸಲಾಗಿತ್ತು. ಆದ್ದರಿಂದ, ಒತ್ತಡದ ಪರಿಸ್ಥಿತಿಯಲ್ಲಿ ಸಂಸತ್ ವಿಸರ್ಜಿಸಲಾಯಿತು’ ಎಂದು ಸಮರ್ಥಿಸಿಕೊಂಡಿದ್ದಾರೆ</p>.<p>‘ಪಕ್ಷದ ನಿಯಮಗಳ ವಿರುದ್ಧವೇ ನನ್ನ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ. ಪಕ್ಷದ ಸಭೆಯನ್ನು ನಾನೇ ಕರೆಯಬೇಕಾಗಿತ್ತು ಮತ್ತು ಅಧ್ಯಕ್ಷತೆಯನ್ನು ವಹಿಸಬೇಕಾಗಿತ್ತು. ಈಗ ನಡೆದಿರುವ ಸಭೆಯ ಅಧ್ಯಕ್ಷತೆಯನ್ನು ಇನ್ನೊಬ್ಬರು ವಹಿಸಿಕೊಂಡಿರುವುದರಿಂದ ನಿಯಮಗಳ ಪ್ರಕಾರ ಮಾನ್ಯತೆ ಇಲ್ಲ’ ಎಂದು ಹೇಳಿದ್ದಾರೆ.</p>.<p>‘ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಅವರನ್ನು ವಾಗ್ದಾಂಡನೆಗೆ ಗುರಿಪಡಿಸುವ ಪ್ರಯತ್ನಗಳು ನಡೆದಿದ್ದವು ಮತ್ತು ನನ್ನ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಯೋಜನೆ ರೂಪಿಸಲಾಗಿತ್ತು. ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ. ಹೀಗಾಗಿ, ಜನರ ಕ್ಷಮೆಯಾಚಿಸಿ ಹೊಸದಾಗಿ ಚುನಾವಣೆ ನಡೆಸಲೇಬೇಕಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>