<p><strong>ಕಠ್ಮಂಡು:</strong> ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು, ತಮ್ಮ ಜನ್ಮದಿನಾಚರಣೆ ಸಮಾರಂಭದಲ್ಲಿ ದೇಶದ ಭೂಪಟದ ಚಿತ್ರವಿರುವ ಕೇಕ್ ಕತ್ತರಿಸಿ ವಿವಾದಕ್ಕೀಡಾಗಿದ್ದಾರೆ.</p>.<p>ಭಾನುವಾರ ನಡೆದ ಪ್ರಧಾನಿಯ 69ನೇ ಜನ್ಮದಿನಾಚರಣೆಯಲ್ಲಿ ಅವರ ಪತ್ನಿ, ಆಪ್ತರು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು. ಪ್ರಧಾನಿಯ ಸ್ವಗ್ರಾಮ ಪೂರ್ವ ನೇಪಾಳದ ಟೆರ್ಹಾತುಮ್ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ದೇಶದ ಭೂಪಟದ ಚಿತ್ರವಿರುವ ಕೇಕ್ ಅನ್ನು ಕಠ್ಮಂಡುವಿನಿಂದ ಹೆಲಿಕಾಪ್ಟರ್ನಲ್ಲಿ ಸಮಾರಂಭಕ್ಕೆ ತರಲಾಗಿತ್ತು. ಕೇಕ್ ಕತ್ತರಿಸಿ ಸಮಾರಂಭದಲ್ಲಿ ಭಾಗವಹಿಸಿದವರಿಗೆ ಹಂಚುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.</p>.<p>‘ನೇಪಾಳದ ನಕ್ಷೆಯನ್ನು ಕೇಕ್ ರೂಪದಲ್ಲಿ ಕತ್ತರಿಸಿರುವುದು ಸರಿಯಲ್ಲ. ಇದುದೇಶವನ್ನು ವಿಭಜಿಸುವ ಉದ್ದೇಶವನ್ನು ಸೂಚಿಸುತ್ತದೆ’ ಎಂದು ಹಿರಿಯ ವಕೀಲ ದಿನೇಶ್ ತ್ರಿಪಾಠಿ ಅವರು, ಆನ್ಲೈನ್ ಪೋರ್ಟಲ್ ಹಮ್ರಾಕೂರ್.ಕಾಮ್ನಲ್ಲಿ ಉಲ್ಲೇಖಿಸಿದ್ದಾರೆ. ಪ್ರಧಾನಿಯವರು ಕ್ಷಮೆ ಕೋರಬೇಕೆಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು, ತಮ್ಮ ಜನ್ಮದಿನಾಚರಣೆ ಸಮಾರಂಭದಲ್ಲಿ ದೇಶದ ಭೂಪಟದ ಚಿತ್ರವಿರುವ ಕೇಕ್ ಕತ್ತರಿಸಿ ವಿವಾದಕ್ಕೀಡಾಗಿದ್ದಾರೆ.</p>.<p>ಭಾನುವಾರ ನಡೆದ ಪ್ರಧಾನಿಯ 69ನೇ ಜನ್ಮದಿನಾಚರಣೆಯಲ್ಲಿ ಅವರ ಪತ್ನಿ, ಆಪ್ತರು ಮತ್ತು ಶಾಲಾ ಮಕ್ಕಳು ಭಾಗವಹಿಸಿದ್ದರು. ಪ್ರಧಾನಿಯ ಸ್ವಗ್ರಾಮ ಪೂರ್ವ ನೇಪಾಳದ ಟೆರ್ಹಾತುಮ್ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ದೇಶದ ಭೂಪಟದ ಚಿತ್ರವಿರುವ ಕೇಕ್ ಅನ್ನು ಕಠ್ಮಂಡುವಿನಿಂದ ಹೆಲಿಕಾಪ್ಟರ್ನಲ್ಲಿ ಸಮಾರಂಭಕ್ಕೆ ತರಲಾಗಿತ್ತು. ಕೇಕ್ ಕತ್ತರಿಸಿ ಸಮಾರಂಭದಲ್ಲಿ ಭಾಗವಹಿಸಿದವರಿಗೆ ಹಂಚುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.</p>.<p>‘ನೇಪಾಳದ ನಕ್ಷೆಯನ್ನು ಕೇಕ್ ರೂಪದಲ್ಲಿ ಕತ್ತರಿಸಿರುವುದು ಸರಿಯಲ್ಲ. ಇದುದೇಶವನ್ನು ವಿಭಜಿಸುವ ಉದ್ದೇಶವನ್ನು ಸೂಚಿಸುತ್ತದೆ’ ಎಂದು ಹಿರಿಯ ವಕೀಲ ದಿನೇಶ್ ತ್ರಿಪಾಠಿ ಅವರು, ಆನ್ಲೈನ್ ಪೋರ್ಟಲ್ ಹಮ್ರಾಕೂರ್.ಕಾಮ್ನಲ್ಲಿ ಉಲ್ಲೇಖಿಸಿದ್ದಾರೆ. ಪ್ರಧಾನಿಯವರು ಕ್ಷಮೆ ಕೋರಬೇಕೆಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>