<p><strong>ಕಾಠ್ಮಂಡು:</strong> ಬಹುಮತದ ಸರ್ಕಾರ ರಚಿಸಲು ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಸರ್ವ ಪಕ್ಷಗಳನ್ನು ಆಹ್ವಾನಿಸಿದ್ದಾರೆ.</p>.<p>'ಪ್ರಧಾನ ಮಂತ್ರಿ ಸ್ಥಾನಕ್ಕೆ ಗುರುವಾರ ರಾತ್ರಿ 9ರೊಳಗೆ ಅಭ್ಯರ್ಥಿಯ ಹೆಸರು ಅಂತಿಮಗೊಳಿಸುವಂತೆ ಪಕ್ಷದ ಮುಖಂಡರಿಗೆ ರಾಷ್ಟ್ರಪತಿ ವಿದ್ಯಾ ದೇವಿ ಸೂಚಿಸಿದ್ದಾರೆ' ಎಂದು ರಾಷ್ಟ್ರಪತಿ ಭವನ ತಿಳಿಸಿದೆ.</p>.<p>ಪಕ್ಷಗಳು ಮೈತ್ರಿ ಸರ್ಕಾರ ರಚಿಸಲು ರಾಷ್ಟ್ರಪತಿ ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ.</p>.<p>ನೇಪಾಳದ ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಒಲಿ ನೇತೃತ್ವದ ಸರ್ಕಾರ ಪದಚ್ಯುತಗೊಂಡಿದ್ದು, ಅವರು ವಿಶ್ವಾಸಮತ ಕಳೆದುಕೊಂಡಿದ್ದಾರೆ. ಪುಷ್ಪಕಮಲ್ ದಾಹಲ್ ನೇತೃತ್ವದ ಸಿಪಿಎನ್ (ಮಾವೋವಾದಿ ಕೇಂದ್ರ) ಬೆಂಬಲ ಹಿಂತೆಗೆದುಕೊಂಡ ನಂತರ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು.</p>.<p>275 ಸದಸ್ಯ ಬಲದ ಸಂಸತ್ತಿನಲ್ಲಿ ಬಹುಮತ ಸಾಬೀತುಪಡಿಸಲು ಕನಿಷ್ಠ 136 ಮತಗಳು ಅಗತ್ಯವಿತ್ತು. ನಾಲ್ಕು ಸದಸ್ಯರು ಅಮಾನತ್ತಿನಲ್ಲಿ ಇದ್ದು, 124 ಸದಸ್ಯರು ಒಲಿ ಸರ್ಕಾರದ ವಿರುದ್ಧ ಮತ ಚಲಾಯಿಸಿದರು. ಕೇವಲ 93 ಸದಸ್ಯ ಬೆಂಬಲ ಪಡೆಯಲಷ್ಟೇ ಪ್ರಧಾನಿ ಅಲಿ ಶಕ್ತರಾದರು.</p>.<p>ಪ್ರಧಾನಿ ಒಲಿ ಅವರ ಶಿಫಾರಸಿನಂತೆ ಕಳೆದ ಡಿಸೆಂಬರ್ 20ರಂದು ರಾಷ್ಟ್ರಪತಿ ಸಂಸತ್ತನ್ನು ವಿಸರ್ಜಿಸಿದ್ದು, ಹೊಸದಾಗಿ ಚುನಾವಣೆಗೆ ಆದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಠ್ಮಂಡು:</strong> ಬಹುಮತದ ಸರ್ಕಾರ ರಚಿಸಲು ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಸರ್ವ ಪಕ್ಷಗಳನ್ನು ಆಹ್ವಾನಿಸಿದ್ದಾರೆ.</p>.<p>'ಪ್ರಧಾನ ಮಂತ್ರಿ ಸ್ಥಾನಕ್ಕೆ ಗುರುವಾರ ರಾತ್ರಿ 9ರೊಳಗೆ ಅಭ್ಯರ್ಥಿಯ ಹೆಸರು ಅಂತಿಮಗೊಳಿಸುವಂತೆ ಪಕ್ಷದ ಮುಖಂಡರಿಗೆ ರಾಷ್ಟ್ರಪತಿ ವಿದ್ಯಾ ದೇವಿ ಸೂಚಿಸಿದ್ದಾರೆ' ಎಂದು ರಾಷ್ಟ್ರಪತಿ ಭವನ ತಿಳಿಸಿದೆ.</p>.<p>ಪಕ್ಷಗಳು ಮೈತ್ರಿ ಸರ್ಕಾರ ರಚಿಸಲು ರಾಷ್ಟ್ರಪತಿ ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ.</p>.<p>ನೇಪಾಳದ ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಒಲಿ ನೇತೃತ್ವದ ಸರ್ಕಾರ ಪದಚ್ಯುತಗೊಂಡಿದ್ದು, ಅವರು ವಿಶ್ವಾಸಮತ ಕಳೆದುಕೊಂಡಿದ್ದಾರೆ. ಪುಷ್ಪಕಮಲ್ ದಾಹಲ್ ನೇತೃತ್ವದ ಸಿಪಿಎನ್ (ಮಾವೋವಾದಿ ಕೇಂದ್ರ) ಬೆಂಬಲ ಹಿಂತೆಗೆದುಕೊಂಡ ನಂತರ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು.</p>.<p>275 ಸದಸ್ಯ ಬಲದ ಸಂಸತ್ತಿನಲ್ಲಿ ಬಹುಮತ ಸಾಬೀತುಪಡಿಸಲು ಕನಿಷ್ಠ 136 ಮತಗಳು ಅಗತ್ಯವಿತ್ತು. ನಾಲ್ಕು ಸದಸ್ಯರು ಅಮಾನತ್ತಿನಲ್ಲಿ ಇದ್ದು, 124 ಸದಸ್ಯರು ಒಲಿ ಸರ್ಕಾರದ ವಿರುದ್ಧ ಮತ ಚಲಾಯಿಸಿದರು. ಕೇವಲ 93 ಸದಸ್ಯ ಬೆಂಬಲ ಪಡೆಯಲಷ್ಟೇ ಪ್ರಧಾನಿ ಅಲಿ ಶಕ್ತರಾದರು.</p>.<p>ಪ್ರಧಾನಿ ಒಲಿ ಅವರ ಶಿಫಾರಸಿನಂತೆ ಕಳೆದ ಡಿಸೆಂಬರ್ 20ರಂದು ರಾಷ್ಟ್ರಪತಿ ಸಂಸತ್ತನ್ನು ವಿಸರ್ಜಿಸಿದ್ದು, ಹೊಸದಾಗಿ ಚುನಾವಣೆಗೆ ಆದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>