<p><strong>ಕಠ್ಮಂಡು(ನೇಪಾಳ):</strong> ಪ್ರತಿಭಟನೆಯ ಲಾಭ ಪಡೆದುಕೊಂಡ ಕೈದಿಗಳು ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ದೇಶದಾದ್ಯಂತ (ನೇಪಾಳ) ವಿವಿಧ ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.<p>ಗುರುವಾರ ಬೆಳಿಗ್ಗೆ, ಮಾಧೇಶ್ ಪ್ರಾಂತ್ಯದ ರಾಮೆಚಾಪ್ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಈ ವೇಳೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದು, ಮೂವರು ಕೈದಿಗಳು ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮೆಚಾಪ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಪ್ರಾಥಮಿಕ ಮೂಲಗಳ ಪ್ರಕಾರ, 25ಕ್ಕೂ ಹೆಚ್ಚು ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ದಿ ಕಠ್ಮಂಡು ಪೋಸ್ಟ್' ಪತ್ರಿಕೆ ವರದಿ ಮಾಡಿದೆ.</p>.<p>ಇದಕ್ಕೂ ಮುನ್ನ (ಮಂಗಳವಾರ) ಪಶ್ಚಿಮ ನೇಪಾಳದಲ್ಲಿನ ಜೈಲಿನಲ್ಲಿ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ, ಕಾನೂನು ಸಂಘರ್ಷಕ್ಕೆ ಒಳಗಾದ ಐವರು ಬಾಲಕರು ಮೃತಪಟ್ಟಿದ್ದರು.</p>.Nepal Unrest: ನೇಪಾಳದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ ಸೇನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು(ನೇಪಾಳ):</strong> ಪ್ರತಿಭಟನೆಯ ಲಾಭ ಪಡೆದುಕೊಂಡ ಕೈದಿಗಳು ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ದೇಶದಾದ್ಯಂತ (ನೇಪಾಳ) ವಿವಿಧ ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.</p>.<p>ಗುರುವಾರ ಬೆಳಿಗ್ಗೆ, ಮಾಧೇಶ್ ಪ್ರಾಂತ್ಯದ ರಾಮೆಚಾಪ್ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಈ ವೇಳೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದು, ಮೂವರು ಕೈದಿಗಳು ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮೆಚಾಪ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಪ್ರಾಥಮಿಕ ಮೂಲಗಳ ಪ್ರಕಾರ, 25ಕ್ಕೂ ಹೆಚ್ಚು ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ದಿ ಕಠ್ಮಂಡು ಪೋಸ್ಟ್' ಪತ್ರಿಕೆ ವರದಿ ಮಾಡಿದೆ.</p>.<p>ಇದಕ್ಕೂ ಮುನ್ನ (ಮಂಗಳವಾರ) ಪಶ್ಚಿಮ ನೇಪಾಳದಲ್ಲಿನ ಜೈಲಿನಲ್ಲಿ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ, ಕಾನೂನು ಸಂಘರ್ಷಕ್ಕೆ ಒಳಗಾದ ಐವರು ಬಾಲಕರು ಮೃತಪಟ್ಟಿದ್ದರು.</p>.Nepal Unrest: ನೇಪಾಳದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಿದ ಸೇನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>