<p class="title"><strong>ಕಠ್ಮಂಡು :</strong>ಆಡಳಿತಾರೂಢ ಕಮ್ಯೂನಿಸ್ಟ್ ಪಕ್ಷ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಶೀಘ್ರದಲ್ಲಿಯೇ ವಿಭಜನೆಯಾಗಬಹುದು ಎಂಬ ಸೂಚನೆಯನ್ನುಪ್ರಧಾನಿ ಕೆ.ಪಿ.ಶರ್ಮಾ ಒಲಿ ಹೇಳಿದ್ದಾರೆ.</p>.<p class="title">ಪ್ರಧಾನಿ ಹುದ್ದೆ ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ತೀವ್ರ ಒತ್ತಡ ವ್ಯಕ್ತವಾಗಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.</p>.<p class="title">ತಮ್ಮ ಅಧಿಕೃತ ನಿವಾಸದಲ್ಲಿ ಸಂಪುಟದ ತುರ್ತು ಸಭೆ ನಡೆಸಿದ ಅವರು, ‘ನಮ್ಮ ಪಕ್ಷದ ಕೆಲವು ಸದಸ್ಯರುಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರನ್ನು ಪದಚ್ಯುತಗೊಳಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.</p>.<p class="title">‘ನನ್ನನ್ನು ಮತ್ತು ಪಕ್ಷದ ಅಧ್ಯಕ್ಷೆಯನ್ನು ಹುದ್ದೆಯಿಂದ ಕೆಳಗಿಳಿಸಲು ಪಿತೂರಿ ನಡೆಸಲಾಗುತ್ತಿದೆ. ಆದರೆ, ಅದನ್ನು ಸಾಧ್ಯವಾಗಿಸಲು ಬಿಡುವುದಿಲ್ಲ. ನನಗೆ ಬೆಂಬಲ ವ್ಯಕ್ತಪಡಿಸುತ್ತಿರೋ, ಇಲ್ಲವೋ ಎಂಬ ನಿಲುವನ್ನು ಸಚಿವರು ಸ್ಪಷ್ಟಪಡಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<p>ಈ ಸಭೆಗೂ ಮೊದಲು ಒಲಿ ಅವರು ಪಕ್ಷದ ಅಧ್ಯಕ್ಷೆ ಭಂಡಾರಿ ಅವರೊಂದಿಗೆ ಮಹಾರಾಜ್ಗುಂಜ್ನಲ್ಲಿರುವ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕಠ್ಮಂಡು :</strong>ಆಡಳಿತಾರೂಢ ಕಮ್ಯೂನಿಸ್ಟ್ ಪಕ್ಷ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಶೀಘ್ರದಲ್ಲಿಯೇ ವಿಭಜನೆಯಾಗಬಹುದು ಎಂಬ ಸೂಚನೆಯನ್ನುಪ್ರಧಾನಿ ಕೆ.ಪಿ.ಶರ್ಮಾ ಒಲಿ ಹೇಳಿದ್ದಾರೆ.</p>.<p class="title">ಪ್ರಧಾನಿ ಹುದ್ದೆ ಮತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ತೀವ್ರ ಒತ್ತಡ ವ್ಯಕ್ತವಾಗಿರುವ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ.</p>.<p class="title">ತಮ್ಮ ಅಧಿಕೃತ ನಿವಾಸದಲ್ಲಿ ಸಂಪುಟದ ತುರ್ತು ಸಭೆ ನಡೆಸಿದ ಅವರು, ‘ನಮ್ಮ ಪಕ್ಷದ ಕೆಲವು ಸದಸ್ಯರುಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರನ್ನು ಪದಚ್ಯುತಗೊಳಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.</p>.<p class="title">‘ನನ್ನನ್ನು ಮತ್ತು ಪಕ್ಷದ ಅಧ್ಯಕ್ಷೆಯನ್ನು ಹುದ್ದೆಯಿಂದ ಕೆಳಗಿಳಿಸಲು ಪಿತೂರಿ ನಡೆಸಲಾಗುತ್ತಿದೆ. ಆದರೆ, ಅದನ್ನು ಸಾಧ್ಯವಾಗಿಸಲು ಬಿಡುವುದಿಲ್ಲ. ನನಗೆ ಬೆಂಬಲ ವ್ಯಕ್ತಪಡಿಸುತ್ತಿರೋ, ಇಲ್ಲವೋ ಎಂಬ ನಿಲುವನ್ನು ಸಚಿವರು ಸ್ಪಷ್ಟಪಡಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.</p>.<p>ಈ ಸಭೆಗೂ ಮೊದಲು ಒಲಿ ಅವರು ಪಕ್ಷದ ಅಧ್ಯಕ್ಷೆ ಭಂಡಾರಿ ಅವರೊಂದಿಗೆ ಮಹಾರಾಜ್ಗುಂಜ್ನಲ್ಲಿರುವ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>