<p><strong>ಕಠ್ಮಂಡು</strong>: ನೇಪಾಳದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಜೆನ್–ಝಿ ಗುಂಪು ಶನಿವಾರ ಘೋಷಿಸಿದೆ.</p><p>ನೇಪಾಳ ಸಂಸತ್ತಿಗೆ 2026ರ ಮಾರ್ಚ್ 5ರಂದು ಚುನಾವಣೆ ನಿಗದಿಯಾಗಿದೆ.</p><p>ಆಡಳಿತದಲ್ಲಿನ ಭ್ರಷ್ಟಾಚಾರ ಹಾಗೂ ಸಾಮಾಜಿಕ ಮಾಧ್ಯಮದ ಮೇಲೆ ನಿರ್ಬಂಧ ಹೇರಿದ್ದನ್ನು ಖಂಡಿಸಿ ಜೆನ್–ಝಿ ಗುಂಪು ಸರ್ಕಾರದ ವಿರುದ್ಧ ಕಳೆದ ತಿಂಗಳು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿತ್ತು. ಇದರ ಪರಿಣಾಮವಾಗಿ ಕೆ.ಪಿ. ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡಿತ್ತು.</p><p>ಬಳಿಕ ರಚನೆಯಾಗಿರುವ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಸೆಪ್ಟೆಂಬರ್ 12ರಂದು ಅಧಿಕಾರ ವಹಿಸಿಕೊಂಡಿದ್ದಾರೆ.</p><p>ಜೆನ್–ಝಿ ಹೋರಾಟದ ನೇತೃತ್ವ ವಹಿಸಿದ್ದ ಮಿರಾಜ್ ಧುಂಗನಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದಾರೆ. ಸರ್ಕಾರದ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ್ದ ಜೆನ್–ಝಿ ಯುವ ಸಮೂಹವನ್ನು ಒಗ್ಗೂಡಿಸಲು ರಾಜಕೀಯ ಪಕ್ಷ ಅತ್ಯಗತ್ಯ ಎಂದು ಪ್ರತಿಪಾದಿಸಿದ್ದಾರೆ.</p><p>ವಿದೇಶದಲ್ಲಿ ವಾಸಿಸುವ ನೇಪಾಳಿಗರಿಗೆ ಮತದಾನದ ಹಕ್ಕು, ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ನಾಗರಿಕರ ನೇತೃತ್ವದ ತನಿಖಾ ಸಮಿತಿ ರಚನೆ ಹಾಗೂ ಆರ್ಥಿಕ ಪರಿವರ್ತನೆ ಕುರಿತು ಸ್ಪಷ್ಟ ನೀತಿಯನ್ನು ಅಳವಡಿಸಿಕೊಳ್ಳುವುದನ್ನು ಪಕ್ಷದ ಕಾರ್ಯಸೂಚಿಯಲ್ಲಿ ಸೇರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.</p><p>'ಭ್ರಷ್ಟಾಚಾರ ರಹಿತ, ಪಾರದರ್ಶಕ, ಉತ್ತಮ ಆಡಳಿತಕ್ಕಾಗಿನ ಹೋರಾಟ ಮುಂದುವರಿಯಲಿದೆ. ಜೆನ್–ಝಿ ಯುವಕರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ' ಎಂದು ಒತ್ತಿ ಹೇಳಿರುವ ಅವರು, ರಾಷ್ಟ್ರ ನಿರ್ಮಾಣಕ್ಕಾಗಿ ಸಾಮೂಹಿಕ ಬದ್ಧತೆ ಮತ್ತು ಸಹಕಾರಕ್ಕೆ ಕರೆ ನೀಡಿದ್ದಾರೆ.</p><p>ಹೊಸ ಪಕ್ಷಕ್ಕೆ ಸೂಕ್ತ ಹೆಸರಿಗಾಗಿ ಆಲೋಚನೆ ಮುಂದುವರಿದಿದ್ದು, ಸಲಹೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದೂ ಹೇಳಿದ್ದಾರೆ.</p><p><strong>'ಭಾರತ, ಚೀನಾ ಗುರಿ'<br></strong>ಉದ್ಯೊಗಕ್ಕಾಗಿ ವಿದೇಶಗಳಿಗೆ ತೆರಳುತ್ತಿರುವ ಯುವಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ ಎಂದಿರುವ ಧುಂಗನಾ, ಇಂತಹ ಸಮಸ್ಯೆಗಳನ್ನು ಹಿಂದಿನ ಸರ್ಕಾರಗಳು ಸರಿಪಡಿಸಬೇಕಿತ್ತು ಎಂದು ಹೇಳಿದ್ದಾರೆ.</p><p>ದೇಶದ ಆರ್ಥಿಕತೆಗೆ ಸಂಬಂಧಿಸಿದಂತೆ, 'ನಾವು 300 ಕೋಟಿ ಜನಸಂಖ್ಯೆ ಹೊಂದಿರುವ ಎರಡು ಬೃಹತ್ ದೇಶಗಳ (ಭಾರತ, ಚೀನಾ) ನಡುವೆ ಇದ್ದೇವೆ. ಆ ದೇಶಗಳ ಮಾರುಕಟ್ಟೆಗಳನ್ನು ಗಮನದಲ್ಲಿರಿಸಿ ಉತ್ಪಾದನೆಯನ್ನು ಹೆಚ್ಚಿಸಬೇಕಿದೆ' ಎಂದಿದ್ದಾರೆ.</p><p>ಸ್ಥಗಿತಗೊಂಡಿರುವ ಕೈಗಾರಿಕೆಗಳನ್ನು ಮತ್ತೆ ತೆರೆಯುವ ಹಾಗೂ ಉದ್ಯೋಗ ಸೃಷ್ಟಿ ಕೆಲಸವನ್ನು ಸರ್ಕಾರ ತಕ್ಷಣವೇ ಆರಂಭಿಸಬೇಕು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂದೂ ಸಲಹೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ನೇಪಾಳದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಜೆನ್–ಝಿ ಗುಂಪು ಶನಿವಾರ ಘೋಷಿಸಿದೆ.</p><p>ನೇಪಾಳ ಸಂಸತ್ತಿಗೆ 2026ರ ಮಾರ್ಚ್ 5ರಂದು ಚುನಾವಣೆ ನಿಗದಿಯಾಗಿದೆ.</p><p>ಆಡಳಿತದಲ್ಲಿನ ಭ್ರಷ್ಟಾಚಾರ ಹಾಗೂ ಸಾಮಾಜಿಕ ಮಾಧ್ಯಮದ ಮೇಲೆ ನಿರ್ಬಂಧ ಹೇರಿದ್ದನ್ನು ಖಂಡಿಸಿ ಜೆನ್–ಝಿ ಗುಂಪು ಸರ್ಕಾರದ ವಿರುದ್ಧ ಕಳೆದ ತಿಂಗಳು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿತ್ತು. ಇದರ ಪರಿಣಾಮವಾಗಿ ಕೆ.ಪಿ. ಶರ್ಮಾ ಓಲಿ ನೇತೃತ್ವದ ಸರ್ಕಾರ ಪತನಗೊಂಡಿತ್ತು.</p><p>ಬಳಿಕ ರಚನೆಯಾಗಿರುವ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಸೆಪ್ಟೆಂಬರ್ 12ರಂದು ಅಧಿಕಾರ ವಹಿಸಿಕೊಂಡಿದ್ದಾರೆ.</p><p>ಜೆನ್–ಝಿ ಹೋರಾಟದ ನೇತೃತ್ವ ವಹಿಸಿದ್ದ ಮಿರಾಜ್ ಧುಂಗನಾ ಅವರು ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿದ್ದಾರೆ. ಸರ್ಕಾರದ ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ್ದ ಜೆನ್–ಝಿ ಯುವ ಸಮೂಹವನ್ನು ಒಗ್ಗೂಡಿಸಲು ರಾಜಕೀಯ ಪಕ್ಷ ಅತ್ಯಗತ್ಯ ಎಂದು ಪ್ರತಿಪಾದಿಸಿದ್ದಾರೆ.</p><p>ವಿದೇಶದಲ್ಲಿ ವಾಸಿಸುವ ನೇಪಾಳಿಗರಿಗೆ ಮತದಾನದ ಹಕ್ಕು, ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ನಾಗರಿಕರ ನೇತೃತ್ವದ ತನಿಖಾ ಸಮಿತಿ ರಚನೆ ಹಾಗೂ ಆರ್ಥಿಕ ಪರಿವರ್ತನೆ ಕುರಿತು ಸ್ಪಷ್ಟ ನೀತಿಯನ್ನು ಅಳವಡಿಸಿಕೊಳ್ಳುವುದನ್ನು ಪಕ್ಷದ ಕಾರ್ಯಸೂಚಿಯಲ್ಲಿ ಸೇರಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.</p><p>'ಭ್ರಷ್ಟಾಚಾರ ರಹಿತ, ಪಾರದರ್ಶಕ, ಉತ್ತಮ ಆಡಳಿತಕ್ಕಾಗಿನ ಹೋರಾಟ ಮುಂದುವರಿಯಲಿದೆ. ಜೆನ್–ಝಿ ಯುವಕರ ತ್ಯಾಗ ವ್ಯರ್ಥವಾಗಲು ಬಿಡುವುದಿಲ್ಲ' ಎಂದು ಒತ್ತಿ ಹೇಳಿರುವ ಅವರು, ರಾಷ್ಟ್ರ ನಿರ್ಮಾಣಕ್ಕಾಗಿ ಸಾಮೂಹಿಕ ಬದ್ಧತೆ ಮತ್ತು ಸಹಕಾರಕ್ಕೆ ಕರೆ ನೀಡಿದ್ದಾರೆ.</p><p>ಹೊಸ ಪಕ್ಷಕ್ಕೆ ಸೂಕ್ತ ಹೆಸರಿಗಾಗಿ ಆಲೋಚನೆ ಮುಂದುವರಿದಿದ್ದು, ಸಲಹೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದೂ ಹೇಳಿದ್ದಾರೆ.</p><p><strong>'ಭಾರತ, ಚೀನಾ ಗುರಿ'<br></strong>ಉದ್ಯೊಗಕ್ಕಾಗಿ ವಿದೇಶಗಳಿಗೆ ತೆರಳುತ್ತಿರುವ ಯುವಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ದೇಶದ ಆರ್ಥಿಕ ಬೆಳವಣಿಗೆ ಕುಂಠಿತವಾಗಿದೆ ಎಂದಿರುವ ಧುಂಗನಾ, ಇಂತಹ ಸಮಸ್ಯೆಗಳನ್ನು ಹಿಂದಿನ ಸರ್ಕಾರಗಳು ಸರಿಪಡಿಸಬೇಕಿತ್ತು ಎಂದು ಹೇಳಿದ್ದಾರೆ.</p><p>ದೇಶದ ಆರ್ಥಿಕತೆಗೆ ಸಂಬಂಧಿಸಿದಂತೆ, 'ನಾವು 300 ಕೋಟಿ ಜನಸಂಖ್ಯೆ ಹೊಂದಿರುವ ಎರಡು ಬೃಹತ್ ದೇಶಗಳ (ಭಾರತ, ಚೀನಾ) ನಡುವೆ ಇದ್ದೇವೆ. ಆ ದೇಶಗಳ ಮಾರುಕಟ್ಟೆಗಳನ್ನು ಗಮನದಲ್ಲಿರಿಸಿ ಉತ್ಪಾದನೆಯನ್ನು ಹೆಚ್ಚಿಸಬೇಕಿದೆ' ಎಂದಿದ್ದಾರೆ.</p><p>ಸ್ಥಗಿತಗೊಂಡಿರುವ ಕೈಗಾರಿಕೆಗಳನ್ನು ಮತ್ತೆ ತೆರೆಯುವ ಹಾಗೂ ಉದ್ಯೋಗ ಸೃಷ್ಟಿ ಕೆಲಸವನ್ನು ಸರ್ಕಾರ ತಕ್ಷಣವೇ ಆರಂಭಿಸಬೇಕು. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು ಎಂದೂ ಸಲಹೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>