<p><strong>ಕಠ್ಮಂಡು: ಆ</strong>ಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಕ್ಷದಲ್ಲಿನ (ಎನ್ಸಿಪಿ) ಬಣ ಜಗಳ ತಾರಕಕ್ಕೇರಿದ್ದು, ಪಕ್ಷವು ಇಬ್ಭಾಗವಾಗುವ ಲಕ್ಷಣಗಳು ಗೋಚರಿಸುತ್ತಿವೆ.</p>.<p>ಸಂಸತ್ ವಿಸರ್ಜಿಸಿರುವುದು ಅಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿರುವ ಕಾರಣ ಪ್ರಧಾನಿ ಕೆ.ಪಿ.ಶರ್ಮಾ ಒಲಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೋಮವಾರ ನಡೆದಿದ್ದ ಪಕ್ಷದ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.</p>.<p>ಇದರ ಬೆನ್ನಲ್ಲೇ ಪಕ್ಷದಲ್ಲಿ ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಮುಂದಾಗಿರುವ ಒಲಿ ಅವರು ಆಪ್ತರ ಜೊತೆಮಂಗಳವಾರ ಪ್ರತ್ಯೇಕ ಸಭೆ ನಡೆಸಿ 1,199 ಮಂದಿಯನ್ನೊಳಗೊಂಡ ಹೊಸ ಸಮಿತಿಯೊಂದನ್ನು ರಚಿಸಿದ್ದಾರೆ.</p>.<p>‘ನೂತನ ಸದಸ್ಯರೆಲ್ಲರೂ ಪ್ರಧಾನಿಯವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾರಾಯಣ ಕಾಜಿ ಶ್ರೇಷ್ಠ ಅವರನ್ನು ಪಕ್ಷದ ವಕ್ತಾರ ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಆ ಜವಾಬ್ದಾರಿಯನ್ನು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಪ್ರದೀಪ್ ಗ್ಯಾವಾಲಿ ಅವರಿಗೆ ವಹಿಸಲಾಗಿದೆ’ ಎಂದು ಸ್ಥಾಯಿ ಸಮಿತಿ ಸದಸ್ಯ ವಿನೋದ್ ಶ್ರೇಷ್ಠ ಹೇಳಿದ್ದಾರೆ.</p>.<p>‘ಪಕ್ಷದ ಮೇಲೆ ಬಿಗಿ ಹಿಡಿತ ಸಾಧಿಸುವ ಉದ್ದೇಶದಿಂದ ಒಲಿ ಈ ನಡೆ ಅನುಸರಿಸಿದ್ದಾರೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>ಕೆಲ ನಾಯಕರು ಪಕ್ಷ ತ್ಯಜಿಸಿದರೆ ಅದರಿಂದ ಏನೂ ನಷ್ಟವಾಗುವುದಿಲ್ಲ ಎಂದು ಒಲಿ ಅವರು ಸಭೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.</p>.<p>ಮುಂದಿನ ವರ್ಷದ ನವೆಂಬರ್ 18ರಿಂದ 23ರವರೆಗೆ ಕಠ್ಮಂಡುವಿನಲ್ಲಿ ಪಕ್ಷದ ಸಮಾವೇಶ ಆಯೋಜಿಸುವ ಇಂಗಿತವನ್ನೂ ಒಲಿ ವ್ಯಕ್ತಪಡಿಸಿದ್ದಾರೆ. 2021ರ ಏಪ್ರಿಲ್ 7ರಿಂದ 12ರವರೆಗೆ ಸಮಾವೇಶ ನಡೆಸಲು ಈ ಮೊದಲು ತೀರ್ಮಾನಿಸಲಾಗಿತ್ತು.</p>.<p>ಇನ್ನೊಂದೆಡೆ ಒಲಿ ಅವರ ವಿರೋಧಿ ಪಾಳಯದ ನಾಯಕ ಪುಷ್ಪ ಕಮಲ್ ದಹಾಲ್ (ಪ್ರಚಂಡ) ಅವರೂ ತಮ್ಮ ಆಪ್ತರ ಜೊತೆ ಕಠ್ಮಂಡುವಿನಲ್ಲಿ ಸಭೆ ನಡೆಸಿದ್ದಾರೆ. ಮಾಜಿ ಪ್ರಧಾನಿಗಳಾದ ಮಾಧವಕುಮಾರ್ ನೇಪಾಳ್ ಮತ್ತು ಜಲನಾಥ್ ಖಾನಲ್, ಈ ಹಿಂದೆ ಕೃಷಿ ಸಚಿವರಾಗಿದ್ದ ಘನಶ್ಯಾಮ್ ಭೂಷಾಲ್ ಅವರು ಈ ಸಭೆಯಲ್ಲಿ ಪಾಲ್ಗೊಂಡ ಪ್ರಮುಖರಾಗಿದ್ದಾರೆ.</p>.<p>ಎನ್ಸಿಪಿ ಇಬ್ಭಾಗ ಸಂಬಂಧ ಶೀಘ್ರವೇ ಪ್ರಕಟಣೆ ಹೊರಬೀಳುವ ನಿರೀಕ್ಷೆ ಇದೆ ಎಂದೂ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು: ಆ</strong>ಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಕ್ಷದಲ್ಲಿನ (ಎನ್ಸಿಪಿ) ಬಣ ಜಗಳ ತಾರಕಕ್ಕೇರಿದ್ದು, ಪಕ್ಷವು ಇಬ್ಭಾಗವಾಗುವ ಲಕ್ಷಣಗಳು ಗೋಚರಿಸುತ್ತಿವೆ.</p>.<p>ಸಂಸತ್ ವಿಸರ್ಜಿಸಿರುವುದು ಅಸಾಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿರುವ ಕಾರಣ ಪ್ರಧಾನಿ ಕೆ.ಪಿ.ಶರ್ಮಾ ಒಲಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೋಮವಾರ ನಡೆದಿದ್ದ ಪಕ್ಷದ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.</p>.<p>ಇದರ ಬೆನ್ನಲ್ಲೇ ಪಕ್ಷದಲ್ಲಿ ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಮುಂದಾಗಿರುವ ಒಲಿ ಅವರು ಆಪ್ತರ ಜೊತೆಮಂಗಳವಾರ ಪ್ರತ್ಯೇಕ ಸಭೆ ನಡೆಸಿ 1,199 ಮಂದಿಯನ್ನೊಳಗೊಂಡ ಹೊಸ ಸಮಿತಿಯೊಂದನ್ನು ರಚಿಸಿದ್ದಾರೆ.</p>.<p>‘ನೂತನ ಸದಸ್ಯರೆಲ್ಲರೂ ಪ್ರಧಾನಿಯವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾರಾಯಣ ಕಾಜಿ ಶ್ರೇಷ್ಠ ಅವರನ್ನು ಪಕ್ಷದ ವಕ್ತಾರ ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಆ ಜವಾಬ್ದಾರಿಯನ್ನು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಪ್ರದೀಪ್ ಗ್ಯಾವಾಲಿ ಅವರಿಗೆ ವಹಿಸಲಾಗಿದೆ’ ಎಂದು ಸ್ಥಾಯಿ ಸಮಿತಿ ಸದಸ್ಯ ವಿನೋದ್ ಶ್ರೇಷ್ಠ ಹೇಳಿದ್ದಾರೆ.</p>.<p>‘ಪಕ್ಷದ ಮೇಲೆ ಬಿಗಿ ಹಿಡಿತ ಸಾಧಿಸುವ ಉದ್ದೇಶದಿಂದ ಒಲಿ ಈ ನಡೆ ಅನುಸರಿಸಿದ್ದಾರೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>ಕೆಲ ನಾಯಕರು ಪಕ್ಷ ತ್ಯಜಿಸಿದರೆ ಅದರಿಂದ ಏನೂ ನಷ್ಟವಾಗುವುದಿಲ್ಲ ಎಂದು ಒಲಿ ಅವರು ಸಭೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.</p>.<p>ಮುಂದಿನ ವರ್ಷದ ನವೆಂಬರ್ 18ರಿಂದ 23ರವರೆಗೆ ಕಠ್ಮಂಡುವಿನಲ್ಲಿ ಪಕ್ಷದ ಸಮಾವೇಶ ಆಯೋಜಿಸುವ ಇಂಗಿತವನ್ನೂ ಒಲಿ ವ್ಯಕ್ತಪಡಿಸಿದ್ದಾರೆ. 2021ರ ಏಪ್ರಿಲ್ 7ರಿಂದ 12ರವರೆಗೆ ಸಮಾವೇಶ ನಡೆಸಲು ಈ ಮೊದಲು ತೀರ್ಮಾನಿಸಲಾಗಿತ್ತು.</p>.<p>ಇನ್ನೊಂದೆಡೆ ಒಲಿ ಅವರ ವಿರೋಧಿ ಪಾಳಯದ ನಾಯಕ ಪುಷ್ಪ ಕಮಲ್ ದಹಾಲ್ (ಪ್ರಚಂಡ) ಅವರೂ ತಮ್ಮ ಆಪ್ತರ ಜೊತೆ ಕಠ್ಮಂಡುವಿನಲ್ಲಿ ಸಭೆ ನಡೆಸಿದ್ದಾರೆ. ಮಾಜಿ ಪ್ರಧಾನಿಗಳಾದ ಮಾಧವಕುಮಾರ್ ನೇಪಾಳ್ ಮತ್ತು ಜಲನಾಥ್ ಖಾನಲ್, ಈ ಹಿಂದೆ ಕೃಷಿ ಸಚಿವರಾಗಿದ್ದ ಘನಶ್ಯಾಮ್ ಭೂಷಾಲ್ ಅವರು ಈ ಸಭೆಯಲ್ಲಿ ಪಾಲ್ಗೊಂಡ ಪ್ರಮುಖರಾಗಿದ್ದಾರೆ.</p>.<p>ಎನ್ಸಿಪಿ ಇಬ್ಭಾಗ ಸಂಬಂಧ ಶೀಘ್ರವೇ ಪ್ರಕಟಣೆ ಹೊರಬೀಳುವ ನಿರೀಕ್ಷೆ ಇದೆ ಎಂದೂ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>