<p><strong>ಟೆಲ್ ಅವಿವ್:</strong> ಅಗತ್ಯ ಇರುವವರೆಗೂ ಗಾಜಾ ಪಟ್ಟಿಯಲ್ಲಿ ಇಸ್ರೇಲ್ನ ದಾಳಿ ಮುಂದುವರೆಯಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.</p>.<p>ಈ ವಿಚಾರವಾಗಿ ಶನಿವಾರ ಮಾತನಾಡಿರುವ ಅವರು, 'ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಹಮಸ್ನ ಬಂಡುಕೋರ ನಾಯಕರು ಕಾರಣವಾಗಿದ್ದಾರೆ. ರಾಕೆಟ್ ದಾಳಿಯಲ್ಲಿ ನಾಗರಿಕರ ಸಾವುನೋವುಗಳನ್ನು ತಪ್ಪಿಸಲು ನನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ' ಎಂದು ತಿಳಿಸಿದ್ದಾರೆ.</p>.<p>'ಪ್ರಸ್ತುತ ಏರ್ಪಟ್ಟಿರುವ ಸಂಘರ್ಷಕ್ಕೆ ನಾವು ಹೊಣೆಗಾರರಲ್ಲ. ಈ ಬಗ್ಗೆ ನಮಗೆ ಯಾವುದೇ ಅಪರಾಧಿ ಭಾವನೆಯೂ ಇಲ್ಲ. ನಮ್ಮ ಮೇಲೆ ಆಕ್ರಮಣ ಮಾಡಿದವರಿಗೆ ಅಪರಾಧಿ ಭಾವನೆ ಇರಬೇಕು' ನೆತನ್ಯಾಹು ಹೇಳಿದ್ದಾರೆ.</p>.<p>'ನಾವು ಇನ್ನೂ ಈ ಕಾರ್ಯಾಚರಣೆಯ ಮಧ್ಯದಲ್ಲಿದ್ದೇವೆ. ಅದು ಇನ್ನೂ ಮುಕ್ತಾಯವಾಗಿಲ್ಲ. ಅಗತ್ಯ ಇರುವವರೆಗೂ ಕಾರ್ಯಾಚರಣೆಯನ್ನು ನಡೆಸಲಿದ್ದೇವೆ' ಎಂದು ಇಸ್ರೇಲ್ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.</p>.<p>'ನಾವು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದೇವೆ. ಹಮಸ್ ಬಂಡುಕೋರರು ನಾಗರಿಕರ ಹಿಂದೆ ಅಡಗಿ ನಾಗರಿಕರ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ನಾವು ನಾಗರಿಕರ ಪ್ರಾಣ ಹಾನಿ ಆಗದಂತೆ ಎಚ್ಚರ ವಹಿಸಿದ್ದೇವೆ.' ನೆತನ್ಯಾಹು ತಿಳಿಸಿದ್ದಾರೆ.</p>.<p>ಜೆರುಸಲೇಂನ ಅಲ್-ಅಕ್ಸಾ ಮಸೀದಿಯು ವಿವಾದದ ಕೇಂದ್ರ ಬಿಂದುವಾಗಿದ್ದು, ಮುಸ್ಲಿಂ ಹಾಗೂ ಯಹೂದಿಗಳ ಪವಿತ್ರವಾದ ಸ್ಥಳವಾಗಿದೆ. ಇಲ್ಲಿ ಉಂಟಾದ ಸಂಘರ್ಷವನ್ನು ತಡೆಯಲು ಪೊಲೀಸಲು ಅಶ್ರುವಾಯು ಹಾಗೂ ಗ್ರೆನೇಡ್ ಪ್ರಯೋಗಿಸಿದ್ದರು. ಇದು ಈಗ ಗಾಜಾ ಪಟ್ಟಿಯಲ್ಲಿ ಭಾರಿ ಸಂಘರ್ಷಕ್ಕೆ ತಿರುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೆಲ್ ಅವಿವ್:</strong> ಅಗತ್ಯ ಇರುವವರೆಗೂ ಗಾಜಾ ಪಟ್ಟಿಯಲ್ಲಿ ಇಸ್ರೇಲ್ನ ದಾಳಿ ಮುಂದುವರೆಯಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ.</p>.<p>ಈ ವಿಚಾರವಾಗಿ ಶನಿವಾರ ಮಾತನಾಡಿರುವ ಅವರು, 'ಗಾಜಾ ಪಟ್ಟಿಯಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಹಮಸ್ನ ಬಂಡುಕೋರ ನಾಯಕರು ಕಾರಣವಾಗಿದ್ದಾರೆ. ರಾಕೆಟ್ ದಾಳಿಯಲ್ಲಿ ನಾಗರಿಕರ ಸಾವುನೋವುಗಳನ್ನು ತಪ್ಪಿಸಲು ನನ್ನ ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ' ಎಂದು ತಿಳಿಸಿದ್ದಾರೆ.</p>.<p>'ಪ್ರಸ್ತುತ ಏರ್ಪಟ್ಟಿರುವ ಸಂಘರ್ಷಕ್ಕೆ ನಾವು ಹೊಣೆಗಾರರಲ್ಲ. ಈ ಬಗ್ಗೆ ನಮಗೆ ಯಾವುದೇ ಅಪರಾಧಿ ಭಾವನೆಯೂ ಇಲ್ಲ. ನಮ್ಮ ಮೇಲೆ ಆಕ್ರಮಣ ಮಾಡಿದವರಿಗೆ ಅಪರಾಧಿ ಭಾವನೆ ಇರಬೇಕು' ನೆತನ್ಯಾಹು ಹೇಳಿದ್ದಾರೆ.</p>.<p>'ನಾವು ಇನ್ನೂ ಈ ಕಾರ್ಯಾಚರಣೆಯ ಮಧ್ಯದಲ್ಲಿದ್ದೇವೆ. ಅದು ಇನ್ನೂ ಮುಕ್ತಾಯವಾಗಿಲ್ಲ. ಅಗತ್ಯ ಇರುವವರೆಗೂ ಕಾರ್ಯಾಚರಣೆಯನ್ನು ನಡೆಸಲಿದ್ದೇವೆ' ಎಂದು ಇಸ್ರೇಲ್ ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.</p>.<p>'ನಾವು ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದೇವೆ. ಹಮಸ್ ಬಂಡುಕೋರರು ನಾಗರಿಕರ ಹಿಂದೆ ಅಡಗಿ ನಾಗರಿಕರ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ನಾವು ನಾಗರಿಕರ ಪ್ರಾಣ ಹಾನಿ ಆಗದಂತೆ ಎಚ್ಚರ ವಹಿಸಿದ್ದೇವೆ.' ನೆತನ್ಯಾಹು ತಿಳಿಸಿದ್ದಾರೆ.</p>.<p>ಜೆರುಸಲೇಂನ ಅಲ್-ಅಕ್ಸಾ ಮಸೀದಿಯು ವಿವಾದದ ಕೇಂದ್ರ ಬಿಂದುವಾಗಿದ್ದು, ಮುಸ್ಲಿಂ ಹಾಗೂ ಯಹೂದಿಗಳ ಪವಿತ್ರವಾದ ಸ್ಥಳವಾಗಿದೆ. ಇಲ್ಲಿ ಉಂಟಾದ ಸಂಘರ್ಷವನ್ನು ತಡೆಯಲು ಪೊಲೀಸಲು ಅಶ್ರುವಾಯು ಹಾಗೂ ಗ್ರೆನೇಡ್ ಪ್ರಯೋಗಿಸಿದ್ದರು. ಇದು ಈಗ ಗಾಜಾ ಪಟ್ಟಿಯಲ್ಲಿ ಭಾರಿ ಸಂಘರ್ಷಕ್ಕೆ ತಿರುಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>