<p><strong>ಕಠ್ಮಂಡು:</strong> ‘ನೇಪಾಳದ ಸಂಸತ್ತನ್ನು ವಿಸರ್ಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂಕೋರ್ಟ್ನ ಹೊಸ ಸಾಂವಿಧಾನಿಕ ಪೀಠವನ್ನು ಭಾನುವಾರ ರಚಿಸಲಾಗಿದೆ’ ಎಂದು ಮಾಧ್ಯಮ ವರದಿಗಳು ಹೇಳಿವೆ.</p>.<p>ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶಂಷೇರ್ ರಾಣಾ ಅವರು, ಹಿರಿತನ ಮತ್ತು ಪರಿಣಿತಿಯ ಆಧಾರದ ಮೇರೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನೊಳಗೊಂಡ ನೂತನ ಸಾಂವಿಧಾನಿಕ ಪೀಠವನ್ನು ರಚಿಸಿದ್ದಾರೆ.</p>.<p>‘ಈ ಪೀಠವು ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ, ನ್ಯಾಯಮೂರ್ತಿಗಳಾದ ದೀಪಕ್ ಕುಮಾರ್ ಕರ್ಕಿ, ಆನಂದ್ ಮೋಹನ್, ಮೀರಾ ಧುಂಗಾನಾ, ಈಶ್ವರ್ ಪ್ರಸಾದ್ ಖತಿವಾಡಾ ಅವರನ್ನೊಳಗೊಂಡಿದೆ’ ಎಂದು ದಿ ಹಿಮಾಲಯನ್ ಟೈಮ್ಸ್ ವರದಿ ಮಾಡಿದೆ.</p>.<p>ಮೇ 22ರಂದು ರಾಷ್ಟ್ರಪತಿ ವಿದ್ಯಾದೇವಿ ಅವರು 275 ಸದಸ್ಯರನ್ನೊಳಗೊಂಡ ಜನಪ್ರತಿನಿಧಿಗಳ ಸಭೆಯನ್ನು ವಿಸರ್ಜಿಸಿದರು. ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಸಲಹೆಯ ಮೇರೆಗೆ ನವೆಂಬರ್ನಲ್ಲಿ ಸಾರ್ವತ್ರಿಕ ಚುನಾವಣೆಯನ್ನೂ ಅವರು ಘೋಷಿಸಿದರು.</p>.<p>ಸಂಸತ್ ವಿಸರ್ಜನೆಯನ್ನು ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಲು ಈ ಹಿಂದೆಯೂ ಸಂವಿಧಾನಿಕ ಪೀಠವನ್ನು ರೂಪಿಸಲಾಗಿತ್ತು. ಆದರೆ ನ್ಯಾಯಮೂರ್ತಿಗಳ ಆಯ್ಕೆಯಲ್ಲಿ ಉಂಟಾದ ವಿವಾದದಿಂದಾಗಿ ವಿಚಾರಣೆಯಲ್ಲಿ ಅಡಚಣೆ ಉಂಟಾಗಿತ್ತು. ಇದೀಗ ಹೊಸ ಸಂವಿಧಾನಿಕ ಪೀಠವನ್ನು ರಚಿಸಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/9-27-lakh-severely-acute-malnourished-children-identified-till-november-last-year-rti-836488.html" target="_blank">9.27 ಲಕ್ಷ ಮಕ್ಕಳಲ್ಲಿ ತೀವ್ರ ಸ್ವರೂಪದ ಅಪೌಷ್ಟಿಕತೆ: ಮಕ್ಕಳ ಅಭಿವೃದ್ಧಿ ಸಚಿವಾಲಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ‘ನೇಪಾಳದ ಸಂಸತ್ತನ್ನು ವಿಸರ್ಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂಕೋರ್ಟ್ನ ಹೊಸ ಸಾಂವಿಧಾನಿಕ ಪೀಠವನ್ನು ಭಾನುವಾರ ರಚಿಸಲಾಗಿದೆ’ ಎಂದು ಮಾಧ್ಯಮ ವರದಿಗಳು ಹೇಳಿವೆ.</p>.<p>ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ ಶಂಷೇರ್ ರಾಣಾ ಅವರು, ಹಿರಿತನ ಮತ್ತು ಪರಿಣಿತಿಯ ಆಧಾರದ ಮೇರೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನೊಳಗೊಂಡ ನೂತನ ಸಾಂವಿಧಾನಿಕ ಪೀಠವನ್ನು ರಚಿಸಿದ್ದಾರೆ.</p>.<p>‘ಈ ಪೀಠವು ಮುಖ್ಯ ನ್ಯಾಯಮೂರ್ತಿ ಚೋಳೇಂದ್ರ, ನ್ಯಾಯಮೂರ್ತಿಗಳಾದ ದೀಪಕ್ ಕುಮಾರ್ ಕರ್ಕಿ, ಆನಂದ್ ಮೋಹನ್, ಮೀರಾ ಧುಂಗಾನಾ, ಈಶ್ವರ್ ಪ್ರಸಾದ್ ಖತಿವಾಡಾ ಅವರನ್ನೊಳಗೊಂಡಿದೆ’ ಎಂದು ದಿ ಹಿಮಾಲಯನ್ ಟೈಮ್ಸ್ ವರದಿ ಮಾಡಿದೆ.</p>.<p>ಮೇ 22ರಂದು ರಾಷ್ಟ್ರಪತಿ ವಿದ್ಯಾದೇವಿ ಅವರು 275 ಸದಸ್ಯರನ್ನೊಳಗೊಂಡ ಜನಪ್ರತಿನಿಧಿಗಳ ಸಭೆಯನ್ನು ವಿಸರ್ಜಿಸಿದರು. ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಸಲಹೆಯ ಮೇರೆಗೆ ನವೆಂಬರ್ನಲ್ಲಿ ಸಾರ್ವತ್ರಿಕ ಚುನಾವಣೆಯನ್ನೂ ಅವರು ಘೋಷಿಸಿದರು.</p>.<p>ಸಂಸತ್ ವಿಸರ್ಜನೆಯನ್ನು ವಿರೋಧಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಲು ಈ ಹಿಂದೆಯೂ ಸಂವಿಧಾನಿಕ ಪೀಠವನ್ನು ರೂಪಿಸಲಾಗಿತ್ತು. ಆದರೆ ನ್ಯಾಯಮೂರ್ತಿಗಳ ಆಯ್ಕೆಯಲ್ಲಿ ಉಂಟಾದ ವಿವಾದದಿಂದಾಗಿ ವಿಚಾರಣೆಯಲ್ಲಿ ಅಡಚಣೆ ಉಂಟಾಗಿತ್ತು. ಇದೀಗ ಹೊಸ ಸಂವಿಧಾನಿಕ ಪೀಠವನ್ನು ರಚಿಸಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/9-27-lakh-severely-acute-malnourished-children-identified-till-november-last-year-rti-836488.html" target="_blank">9.27 ಲಕ್ಷ ಮಕ್ಕಳಲ್ಲಿ ತೀವ್ರ ಸ್ವರೂಪದ ಅಪೌಷ್ಟಿಕತೆ: ಮಕ್ಕಳ ಅಭಿವೃದ್ಧಿ ಸಚಿವಾಲಯ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>