<p><strong>ಢಾಕಾ:</strong> ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳಿಗೆ ಹೊಸ ಪಠ್ಯ ಪರಿಚಯಿಸಿದ್ದು, 1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯವನ್ನು ಘೋಷಿಸಿದ್ದು ಜಿಯಾವುರ್ ರೆಹಮಾನ್ ಎಂದು ಉಲ್ಲೇಖಿಸಿದೆ.</p>.<p>ಈ ಹಿಂದೆ ಬಾಂಗ್ಲಾದ ಪಿತಾಮಹ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರು ಈ ಕುರಿತು ಘೋಷಣೆ ಮಾಡಿದ್ದರು ಎಂದು ಉಲ್ಲೇಖಿಸಲಾಗಿತ್ತು. ಅದನ್ನು ಹೊಸ ಪಠ್ಯದಲ್ಲಿ ಬದಲಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.</p>.<p>ಮುಜಿಬುರ್ ರೆಹಮಾನ್ ಅವರಿಗಿದ್ದ ರಾಷ್ಟ್ರಪಿತ ಬಿರುದನ್ನು ತೆಗೆದಿರುವುದೂ ಸೇರಿದಂತೆ ಕೆಲ ಬದಲಾವಣೆಗಳನ್ನು ಹೊಸ ಪಠ್ಯದಲ್ಲಿ ಮಾಡಲಾಗಿದೆ ಎಂದು ‘ಡೈಲಿ ಸ್ಟಾರ್’ ವರದಿ ಮಾಡಿದೆ.</p>.<p>ಬಾಂಗ್ಲಾದೇಶದ ನೋಟುಗಳಲ್ಲಿ ಶೇಖ್ ಮುಜಿಬುರ್ ರೆಹಮಾನ್ ಅವರ ಚಿತ್ರವನ್ನು ಅಳಿಸಲು ಇತ್ತೀಚೆಗೆ ಬಾಂಗ್ಲಾ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಹಳೆಯ ನೋಟುಗಳನ್ನು ಹಂತ ಹಂತವಾಗಿ ರದ್ದುಗೊಳಿಸಲು ತೀರ್ಮಾನಿಸಿದೆ.</p>.<p>ಮುಜಿಬುರ್ ರೆಹಮಾನ್ ಅವರು ಹತ್ಯೆಯಾದ ದಿನವಾದ ಆಗಸ್ಟ್ 15 ಈ ಮೊದಲು ರಾಷ್ಟ್ರೀಯ ರಜಾದಿನ ಆಗಿತ್ತು. ಅದನ್ನೂ ಮಧ್ಯಂತರ ಸರ್ಕಾರ ರದ್ದುಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳಿಗೆ ಹೊಸ ಪಠ್ಯ ಪರಿಚಯಿಸಿದ್ದು, 1971ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯವನ್ನು ಘೋಷಿಸಿದ್ದು ಜಿಯಾವುರ್ ರೆಹಮಾನ್ ಎಂದು ಉಲ್ಲೇಖಿಸಿದೆ.</p>.<p>ಈ ಹಿಂದೆ ಬಾಂಗ್ಲಾದ ಪಿತಾಮಹ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರು ಈ ಕುರಿತು ಘೋಷಣೆ ಮಾಡಿದ್ದರು ಎಂದು ಉಲ್ಲೇಖಿಸಲಾಗಿತ್ತು. ಅದನ್ನು ಹೊಸ ಪಠ್ಯದಲ್ಲಿ ಬದಲಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.</p>.<p>ಮುಜಿಬುರ್ ರೆಹಮಾನ್ ಅವರಿಗಿದ್ದ ರಾಷ್ಟ್ರಪಿತ ಬಿರುದನ್ನು ತೆಗೆದಿರುವುದೂ ಸೇರಿದಂತೆ ಕೆಲ ಬದಲಾವಣೆಗಳನ್ನು ಹೊಸ ಪಠ್ಯದಲ್ಲಿ ಮಾಡಲಾಗಿದೆ ಎಂದು ‘ಡೈಲಿ ಸ್ಟಾರ್’ ವರದಿ ಮಾಡಿದೆ.</p>.<p>ಬಾಂಗ್ಲಾದೇಶದ ನೋಟುಗಳಲ್ಲಿ ಶೇಖ್ ಮುಜಿಬುರ್ ರೆಹಮಾನ್ ಅವರ ಚಿತ್ರವನ್ನು ಅಳಿಸಲು ಇತ್ತೀಚೆಗೆ ಬಾಂಗ್ಲಾ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ಹಳೆಯ ನೋಟುಗಳನ್ನು ಹಂತ ಹಂತವಾಗಿ ರದ್ದುಗೊಳಿಸಲು ತೀರ್ಮಾನಿಸಿದೆ.</p>.<p>ಮುಜಿಬುರ್ ರೆಹಮಾನ್ ಅವರು ಹತ್ಯೆಯಾದ ದಿನವಾದ ಆಗಸ್ಟ್ 15 ಈ ಮೊದಲು ರಾಷ್ಟ್ರೀಯ ರಜಾದಿನ ಆಗಿತ್ತು. ಅದನ್ನೂ ಮಧ್ಯಂತರ ಸರ್ಕಾರ ರದ್ದುಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>