<p><strong>ನಿಯಾಮೆ:</strong> ನೈಗರ್ನ ರಾಜಧಾನಿ ನಿಯಾಮೆ ನಗರದ ವಿಮಾನ ನಿಲ್ದಾಣದ ಬಳಿ ಗುರುವಾರ ಮುಂಜಾನೆ ಭಾರಿ ಸ್ಫೋಟ ಮತ್ತು ಗುಂಡಿನ ಸದ್ದು ಕೇಳಿ ಬಂತು ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ. ಸಂಘರ್ಷ ಪೀಡಿತ ದೇಶದಲ್ಲಿ ಶಸ್ತ್ರಧಾರಿ ಗುಂಪುಗಳು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.</p>.<p>ಮಧ್ಯರಾತ್ರಿ ಸುಮಾರಿಗೆ ಡಿಯೋರಿ ಹಮಾನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಫೋಟದ ಭಾರಿ ಸದ್ದು ಮತ್ತು ಆಗಸದಲ್ಲಿ ಬೆಳಕು ಆವರಿಸಿದ ದೃಶ್ಯಗಳು ಕಂಡುಬಂದವು. ಸುಮಾರು ಎರಡು ಗಂಟೆಗಳವರೆಗೂ ಇದು ಮುಂದುವರಿದಿತ್ತು. ಈ ಪ್ರದೇಶ ನೈಜೀರಿಯಾ ಸೇನೆಯ ಪ್ರಮುಖ ಕೇಂದ್ರವೂ ಆಗಿದೆ.</p>.<p>ದಾಳಿ ಮತ್ತು ಸ್ಫೋಟಕ್ಕೆ ಕಾರಣ ಏನು ಎನ್ನುವುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸಾವು–ನೋವಿನ ಬಗ್ಗೆಯೂ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸ್ಥಳೀಯರೊಬ್ಬರ ಪ್ರಕಾರ ‘ಶಸ್ತ್ರ ಸಜ್ಜಿತರು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಿದರು. ಯೋಧರು ಪ್ರತ್ಯುತ್ತರ ನೀಡಿದರು. ಗುರುವಾರ ಬೆಳಗ್ಗೆ ನಂತರ ನಗರವು ಸಹಜ ಸ್ಥಿತಿಗೆ ಮರಳಿದೆ’ ಎಂದು ತಿಳಿಸಿದ್ದಾರೆ. ಆದರೆ ನೈಗರ್ನ ಸೇನೆ ದಾಳಿ ಬಗ್ಗೆ ಏನನ್ನೂ ಹೇಳಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಯಾಮೆ:</strong> ನೈಗರ್ನ ರಾಜಧಾನಿ ನಿಯಾಮೆ ನಗರದ ವಿಮಾನ ನಿಲ್ದಾಣದ ಬಳಿ ಗುರುವಾರ ಮುಂಜಾನೆ ಭಾರಿ ಸ್ಫೋಟ ಮತ್ತು ಗುಂಡಿನ ಸದ್ದು ಕೇಳಿ ಬಂತು ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ. ಸಂಘರ್ಷ ಪೀಡಿತ ದೇಶದಲ್ಲಿ ಶಸ್ತ್ರಧಾರಿ ಗುಂಪುಗಳು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ.</p>.<p>ಮಧ್ಯರಾತ್ರಿ ಸುಮಾರಿಗೆ ಡಿಯೋರಿ ಹಮಾನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಫೋಟದ ಭಾರಿ ಸದ್ದು ಮತ್ತು ಆಗಸದಲ್ಲಿ ಬೆಳಕು ಆವರಿಸಿದ ದೃಶ್ಯಗಳು ಕಂಡುಬಂದವು. ಸುಮಾರು ಎರಡು ಗಂಟೆಗಳವರೆಗೂ ಇದು ಮುಂದುವರಿದಿತ್ತು. ಈ ಪ್ರದೇಶ ನೈಜೀರಿಯಾ ಸೇನೆಯ ಪ್ರಮುಖ ಕೇಂದ್ರವೂ ಆಗಿದೆ.</p>.<p>ದಾಳಿ ಮತ್ತು ಸ್ಫೋಟಕ್ಕೆ ಕಾರಣ ಏನು ಎನ್ನುವುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸಾವು–ನೋವಿನ ಬಗ್ಗೆಯೂ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಸ್ಥಳೀಯರೊಬ್ಬರ ಪ್ರಕಾರ ‘ಶಸ್ತ್ರ ಸಜ್ಜಿತರು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಿದರು. ಯೋಧರು ಪ್ರತ್ಯುತ್ತರ ನೀಡಿದರು. ಗುರುವಾರ ಬೆಳಗ್ಗೆ ನಂತರ ನಗರವು ಸಹಜ ಸ್ಥಿತಿಗೆ ಮರಳಿದೆ’ ಎಂದು ತಿಳಿಸಿದ್ದಾರೆ. ಆದರೆ ನೈಗರ್ನ ಸೇನೆ ದಾಳಿ ಬಗ್ಗೆ ಏನನ್ನೂ ಹೇಳಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>