ಬ್ಯಾಂಕಾಕ್: ಆಗ್ನೇಯ ಲಾವೋಸ್ನಲ್ಲಿ ಅಣೆಕಟ್ಟೆ ದುರಂತದಲ್ಲಿ 19 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಸುಮಾರು 3,000 ಜನರನ್ನು ಪ್ರವಾಹಪೀಡಿತ ಪ್ರದೇಶಗಳಿಂದ ರಕ್ಷಿಸಬೇಕಿದೆ. 2,500ಕ್ಕೂ ಹೆಚ್ಚು ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯಾಡಳಿತ ತಿಳಿಸಿದೆ.ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಉತ್ಪಾದನಾ ಅಣೆಕಟ್ಟೆ ಭಾರಿ ಮಳೆಯಿಂದಾಗಿ ಸೋಮವಾರ ಸಂಜೆ ಒಡೆದ ಪರಿಣಾಮ ಹತ್ತಾರು ಗ್ರಾಮಗಳು ಭಾಗಶಃ ನೀರಿನಲ್ಲಿ ಮುಳುಗಡೆಯಾಗಿದ್ದವು.