<p><strong>ಟೆಲ್ ಅವಿಲ್:</strong> ಗಾಜಾದಲ್ಲಿ ಹಮಾಸ್ ಬಂಡುಕೋರರು ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಕದನ ವಿರಾಮ ಮಾಡುವ ಪ್ರಶ್ನೆಯೇ ಇಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. </p><p>ಆ ಮೂಲಕ ಕದನ ವಿರಾಮ ನಿರ್ಣಯ ಪ್ರಸ್ತಾಪವನ್ನು ಮಗದೊಮ್ಮೆ ತಿರಸ್ಕರಿಸಿದ್ದಾರೆ. </p><p>'ಎಲ್ಲ ವದಂತಿಗಳಿಗೆ ವಿರಾಮ ಹಾಡಲು ಬಯಸುತ್ತೇನೆ. ಗಾಜಾದಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಕದನ ವಿರಾಮ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಪುನರುಚ್ಚರಿಸುತ್ತೇನೆ' ಎಂದು ಅವರು ಹೇಳಿದ್ದಾರೆ. </p><p>ಕೆಲವು ಒತ್ತೆಯಾಳುಗಳ ಬಿಡುಗಡೆ ಸೇರಿದಂತೆ ಮಾನವೀಯ ನೆಲೆಯಲ್ಲಿ ಯುದ್ಧಕ್ಕೆ ಸಣ್ಣ ವಿರಾಮ ನೀಡುವ ಕುರಿತು ಇಸ್ರೇಲ್ ಪರಿಗಣಿಸಲಿದೆ ಎಂದು ವರದಿಯಾಗಿತ್ತು. ಆದರೆ ಇಂತಹ ಮಧ್ಯಸ್ಥಿಕೆ ಮಾತುಕತೆಯನ್ನು ಇಸ್ರೇಲ್ ಪ್ರಧಾನಿ ತಳ್ಳಿ ಹಾಕಿದ್ದಾರೆ. </p><p>ಅಕ್ಟೋಬರ್ 7ರಂದು ಹಮಾಸ್ ಬಂಡುಕೋರರು ನಡೆಸಿದ ದಾಳಿಯಲ್ಲಿ 1,400ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, 239 ಮಂದಿಯನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. </p><p>ಮತ್ತೊಂದೆಡೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಾಜಾದಲ್ಲಿ ಈವರೆಗೆ 10,569 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೆಲ್ ಅವಿಲ್:</strong> ಗಾಜಾದಲ್ಲಿ ಹಮಾಸ್ ಬಂಡುಕೋರರು ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಕದನ ವಿರಾಮ ಮಾಡುವ ಪ್ರಶ್ನೆಯೇ ಇಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. </p><p>ಆ ಮೂಲಕ ಕದನ ವಿರಾಮ ನಿರ್ಣಯ ಪ್ರಸ್ತಾಪವನ್ನು ಮಗದೊಮ್ಮೆ ತಿರಸ್ಕರಿಸಿದ್ದಾರೆ. </p><p>'ಎಲ್ಲ ವದಂತಿಗಳಿಗೆ ವಿರಾಮ ಹಾಡಲು ಬಯಸುತ್ತೇನೆ. ಗಾಜಾದಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡದೆ ಕದನ ವಿರಾಮ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಪುನರುಚ್ಚರಿಸುತ್ತೇನೆ' ಎಂದು ಅವರು ಹೇಳಿದ್ದಾರೆ. </p><p>ಕೆಲವು ಒತ್ತೆಯಾಳುಗಳ ಬಿಡುಗಡೆ ಸೇರಿದಂತೆ ಮಾನವೀಯ ನೆಲೆಯಲ್ಲಿ ಯುದ್ಧಕ್ಕೆ ಸಣ್ಣ ವಿರಾಮ ನೀಡುವ ಕುರಿತು ಇಸ್ರೇಲ್ ಪರಿಗಣಿಸಲಿದೆ ಎಂದು ವರದಿಯಾಗಿತ್ತು. ಆದರೆ ಇಂತಹ ಮಧ್ಯಸ್ಥಿಕೆ ಮಾತುಕತೆಯನ್ನು ಇಸ್ರೇಲ್ ಪ್ರಧಾನಿ ತಳ್ಳಿ ಹಾಕಿದ್ದಾರೆ. </p><p>ಅಕ್ಟೋಬರ್ 7ರಂದು ಹಮಾಸ್ ಬಂಡುಕೋರರು ನಡೆಸಿದ ದಾಳಿಯಲ್ಲಿ 1,400ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದು, 239 ಮಂದಿಯನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. </p><p>ಮತ್ತೊಂದೆಡೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಾಜಾದಲ್ಲಿ ಈವರೆಗೆ 10,569 ಮಂದಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>