<p><strong>ಕೊಲಂಬೊ</strong>: ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾದಿಂದ ಹಿಂಪಡೆದುಕೊಳ್ಳಲು ಯಾವುದೇ ಆಧಾರವಿಲ್ಲ ಎಂದು ಶ್ರೀಲಂಕಾದ ಮೀನುಗಾರಿಕೆ ಸಚಿವ ದೌಗ್ಲಾಸ್ ದೇವಾನಂದ ಹೇಳಿದ್ದಾರೆ.</p><p>1974ರಲ್ಲಿ ದೇಶದ ಹಿತಾಸಕ್ತಿಯನ್ನು ಬದಿಗಿಟ್ಟು ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಡಲಾಗಿದೆ ಎಂದು ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಲಂಕಾದಿಂದ ಈ ಪ್ರತಿಕ್ರಿಯೆ ಬಂದಿದೆ.</p><p>ಕಚ್ಚತೀವು ದ್ವೀಪದ ಸುತ್ತ ಮೀನುಗಾರಿಕೆ ನಡೆಸಲು ಬಯಸುತ್ತಿರುವ ಮೀನುಗಾರರ ಹಕ್ಕುಗಳನ್ನು ಕಾಯುವಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ವಿಫಲವಾಗಿವೆ ಎಂದೂ ಬಿಜೆಪಿ ವಾಗ್ದಾಳಿ ನಡೆಸಿದೆ.</p><p>‘ಭಾರತದಲ್ಲಿ ಈಗ ಚುನಾವಣೆಯ ಸಮಯ. ಹಾಗಾಗಿ, ಕಚ್ಚತೀವು ಹಿಂಪಡೆವ ಕುರಿತಾದ ಮಾತುಗಳು ಕೇಳಿಬರುವುದು ವಿಶೇಷವೇನಲ್ಲ’ ಎಂದೂ ಶ್ರೀಲಂಕಾ ಸಚಿವ ದೇವಾನಂದ ಹೇಳಿದ್ಧಾರೆ.</p><p>''ಈ ಪ್ರದೇಶಕ್ಕೆ ಶ್ರೀಲಂಕಾ ಮೀನುಗಾರರಿಗೆ ನಿರ್ಬಂಧ ಹಾಗೂ ಸಂಪದ್ಭರಿತ ಪ್ರದೇಶದ ಮೇಲೆ ಶ್ರೀಲಂಕಾ ಯಾವುದೇ ಹಕ್ಕುಗಳನ್ನು ಹೊಂದಿರದಂತೆ ನೋಡಿಕೊಳ್ಳುವ ತನ್ನ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಭಾವಿಸುತ್ತೇನೆ’ ಎಂಬುದಾಗಿಯೂ ಅವರು ಹೇಳಿದ್ದಾರೆ.</p><p>‘1974ರ ಒಪ್ಪಂದದ ಪ್ರಕಾರ, ಎರಡೂ ದೇಶಗಳು ದ್ವೀಪದ ಬಳಿ ತಮ್ಮ ತಮ್ಮ ವ್ಯಾಪ್ತಿಗೆ ಬರುವ ಜಲಪ್ರದೇಶಗಳಲ್ಲಿ ಮೀನುಗಾರಿಕೆ ನಡೆಸಬಹುದಾಗಿತ್ತು. ಬಳಿಕ, 1976ರಲ್ಲಿ ಒಪ್ಪಂದದ ತಿದ್ದುಪಡಿಯಾಗಿದೆ. ಅದರನ್ವಯ, ದ್ವೀಪದ ನೆರೆಯ ಸಾಗರದಲ್ಲಿ ಎರಡೂ ಕಡೆಯವರು ಮೀನುಗಾರಿಕೆ ನಡೆಸುವುದನ್ನು ನಿಷೇಧಿಸಲಾಗಿದೆ’ಎಂದು ದೇವಾನಂದ ಹೇಳಿದ್ದಾರೆ.</p><p>ಈ ಪ್ರದೇಶದಲ್ಲಿ ಭಾರತದ ಮೀನುಗಾರರು ಅಕ್ರಮ ಮೀನುಗಾರಿಕೆ ವಿರೋಧಿಸಿ ಇತ್ತೀಚೆಗೆ ಶ್ರೀಲಂಕಾದ ಮೀನುಗಾರರು ಸರಣಿ ಪ್ರತಿಭಟನೆ ನಡೆಸಿದ್ದರು.</p><p>ಈ ವರ್ಷ ಅಕ್ರಮ ಮೀನುಗಾರಿಕೆ ಆರೋಪದಡಿ ಭಾರತದ 178ಕ್ಕೂ ಅಧಿಕ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.</p> .ಕಚ್ಚತೀವು ದ್ವೀಪ: ಸರ್ಕಾರ ಹೇಳಿದ್ದೇ ಒಂದು: ಮೋದಿ ಹೇಳುತ್ತಿರುವುದೇ ಇನ್ನೊಂದು.ಕಚ್ಚತೀವು ದ್ವೀಪ ವಿವಾದ: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಭಾರತವು ಕಚ್ಚತೀವು ದ್ವೀಪವನ್ನು ಶ್ರೀಲಂಕಾದಿಂದ ಹಿಂಪಡೆದುಕೊಳ್ಳಲು ಯಾವುದೇ ಆಧಾರವಿಲ್ಲ ಎಂದು ಶ್ರೀಲಂಕಾದ ಮೀನುಗಾರಿಕೆ ಸಚಿವ ದೌಗ್ಲಾಸ್ ದೇವಾನಂದ ಹೇಳಿದ್ದಾರೆ.</p><p>1974ರಲ್ಲಿ ದೇಶದ ಹಿತಾಸಕ್ತಿಯನ್ನು ಬದಿಗಿಟ್ಟು ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಡಲಾಗಿದೆ ಎಂದು ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಲಂಕಾದಿಂದ ಈ ಪ್ರತಿಕ್ರಿಯೆ ಬಂದಿದೆ.</p><p>ಕಚ್ಚತೀವು ದ್ವೀಪದ ಸುತ್ತ ಮೀನುಗಾರಿಕೆ ನಡೆಸಲು ಬಯಸುತ್ತಿರುವ ಮೀನುಗಾರರ ಹಕ್ಕುಗಳನ್ನು ಕಾಯುವಲ್ಲಿ ಕಾಂಗ್ರೆಸ್ ಮತ್ತು ಡಿಎಂಕೆ ವಿಫಲವಾಗಿವೆ ಎಂದೂ ಬಿಜೆಪಿ ವಾಗ್ದಾಳಿ ನಡೆಸಿದೆ.</p><p>‘ಭಾರತದಲ್ಲಿ ಈಗ ಚುನಾವಣೆಯ ಸಮಯ. ಹಾಗಾಗಿ, ಕಚ್ಚತೀವು ಹಿಂಪಡೆವ ಕುರಿತಾದ ಮಾತುಗಳು ಕೇಳಿಬರುವುದು ವಿಶೇಷವೇನಲ್ಲ’ ಎಂದೂ ಶ್ರೀಲಂಕಾ ಸಚಿವ ದೇವಾನಂದ ಹೇಳಿದ್ಧಾರೆ.</p><p>''ಈ ಪ್ರದೇಶಕ್ಕೆ ಶ್ರೀಲಂಕಾ ಮೀನುಗಾರರಿಗೆ ನಿರ್ಬಂಧ ಹಾಗೂ ಸಂಪದ್ಭರಿತ ಪ್ರದೇಶದ ಮೇಲೆ ಶ್ರೀಲಂಕಾ ಯಾವುದೇ ಹಕ್ಕುಗಳನ್ನು ಹೊಂದಿರದಂತೆ ನೋಡಿಕೊಳ್ಳುವ ತನ್ನ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಭಾವಿಸುತ್ತೇನೆ’ ಎಂಬುದಾಗಿಯೂ ಅವರು ಹೇಳಿದ್ದಾರೆ.</p><p>‘1974ರ ಒಪ್ಪಂದದ ಪ್ರಕಾರ, ಎರಡೂ ದೇಶಗಳು ದ್ವೀಪದ ಬಳಿ ತಮ್ಮ ತಮ್ಮ ವ್ಯಾಪ್ತಿಗೆ ಬರುವ ಜಲಪ್ರದೇಶಗಳಲ್ಲಿ ಮೀನುಗಾರಿಕೆ ನಡೆಸಬಹುದಾಗಿತ್ತು. ಬಳಿಕ, 1976ರಲ್ಲಿ ಒಪ್ಪಂದದ ತಿದ್ದುಪಡಿಯಾಗಿದೆ. ಅದರನ್ವಯ, ದ್ವೀಪದ ನೆರೆಯ ಸಾಗರದಲ್ಲಿ ಎರಡೂ ಕಡೆಯವರು ಮೀನುಗಾರಿಕೆ ನಡೆಸುವುದನ್ನು ನಿಷೇಧಿಸಲಾಗಿದೆ’ಎಂದು ದೇವಾನಂದ ಹೇಳಿದ್ದಾರೆ.</p><p>ಈ ಪ್ರದೇಶದಲ್ಲಿ ಭಾರತದ ಮೀನುಗಾರರು ಅಕ್ರಮ ಮೀನುಗಾರಿಕೆ ವಿರೋಧಿಸಿ ಇತ್ತೀಚೆಗೆ ಶ್ರೀಲಂಕಾದ ಮೀನುಗಾರರು ಸರಣಿ ಪ್ರತಿಭಟನೆ ನಡೆಸಿದ್ದರು.</p><p>ಈ ವರ್ಷ ಅಕ್ರಮ ಮೀನುಗಾರಿಕೆ ಆರೋಪದಡಿ ಭಾರತದ 178ಕ್ಕೂ ಅಧಿಕ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ.</p> .ಕಚ್ಚತೀವು ದ್ವೀಪ: ಸರ್ಕಾರ ಹೇಳಿದ್ದೇ ಒಂದು: ಮೋದಿ ಹೇಳುತ್ತಿರುವುದೇ ಇನ್ನೊಂದು.ಕಚ್ಚತೀವು ದ್ವೀಪ ವಿವಾದ: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>