<p><strong>ಮಾಲೆ:</strong> ಭಾರತ ಸೇನೆಯ ಹೆಲಿಕಾಪ್ಟರ್ ಪೈಲಟ್ಗಳು ಮಾಲ್ದೀವ್ಸ್ನಲ್ಲಿಯೇ ನೆಲೆಯೂರಿದ್ದು, 2019ರಿಂದಲೂ ಅನಧಿಕೃತವಾಗಿ ಕಾರ್ಯಾಚರಣೆ ನಡೆಸಿದ್ದಾರೆ ಎಂಬ ಮಾಲ್ದೀವ್ಸ್ ರಕ್ಷಣಾ ಸಚಿವರ ಹೇಳಿಕೆಯನ್ನು ಭಾರತ ಮಂಗಳವಾರ ತಲ್ಳಿಹಾಕಿದೆ.</p>.<p>ಈ ಕುರಿತು ಹೇಳಿಕೆ ನೀಡಿರುವ ಭಾರತದ ರಾಯಭಾರ ಕಚೇರಿಯು ಮಾಲ್ದೀವ್ಸ್ನಲ್ಲಿ ಭಾರತೀಯ ವೈಮಾನಿಕ ಸಿಬ್ಬಂದಿಯು ಎಂದಿಗೂ ಅಗತ್ಯ ಅನುಮತಿಯೊಂದಿಗೆ ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ತಿಳಿಸಿದೆ.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಕ್ಷಣಾ ಸಚಿವ ಘಸ್ಶಾನ್ ಅವರು, ದೇಶದಲ್ಲಿ ಅನಧಿಕೃತ ಕಾರ್ಯಾಚರಣೆ ನಡೆಯುತ್ತಿರುವ ಕುರಿತು ತಮಗೆ ಮಾಹಿತಿ ಇದೆ ಎಂದು ತಿಳಿಸಿದ್ದರು. ತಿಮರಾಫುಶಿಯಲ್ಲಿ ಅನುಮತಿಯಿಲ್ಲದೇ ಹೆಲಿಕಾಪ್ಟರ್ ಇಳಿದಿತ್ತು ಎಂಬುದನ್ನು ಉಲ್ಲೇಖಿಸಿದ್ದರು.</p>.<p>ಈ ಹೇಳಿಕೆಯನ್ನು ಭಾರತ ತಳ್ಳಿಹಾಕಿದೆ. ಮಾಲ್ದೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಯ (ಎಂಎನ್ಡಿಎಫ್) ಅನುಮೋದನೆಯೊಂದಿಗೆ ಅಗತ್ಯ ಕಾರ್ಯಾಚರಣೆ ನಡೆಸಲಿದೆ ಎಂದು ರಾಯಭಾರ ಕಚೇರಿಯು ತಿಳಿಸಿದೆ. ಸಚಿವರು ಸುದ್ದಿಗೋಷ್ಠಿಯಲ್ಲಿ ಉಲ್ಲೇಖಿಸಿದ್ದ ಹೆಲಿಕಾಪ್ಟರ್ ಕೂಡಾ ಪೂರ್ನ ಅನುಮೋದನೆಯೊಂದಿಗೆ ಕಾರ್ಯಾಚರಣೆ ನಡೆಸಿತ್ತು ಎಂದು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೆ:</strong> ಭಾರತ ಸೇನೆಯ ಹೆಲಿಕಾಪ್ಟರ್ ಪೈಲಟ್ಗಳು ಮಾಲ್ದೀವ್ಸ್ನಲ್ಲಿಯೇ ನೆಲೆಯೂರಿದ್ದು, 2019ರಿಂದಲೂ ಅನಧಿಕೃತವಾಗಿ ಕಾರ್ಯಾಚರಣೆ ನಡೆಸಿದ್ದಾರೆ ಎಂಬ ಮಾಲ್ದೀವ್ಸ್ ರಕ್ಷಣಾ ಸಚಿವರ ಹೇಳಿಕೆಯನ್ನು ಭಾರತ ಮಂಗಳವಾರ ತಲ್ಳಿಹಾಕಿದೆ.</p>.<p>ಈ ಕುರಿತು ಹೇಳಿಕೆ ನೀಡಿರುವ ಭಾರತದ ರಾಯಭಾರ ಕಚೇರಿಯು ಮಾಲ್ದೀವ್ಸ್ನಲ್ಲಿ ಭಾರತೀಯ ವೈಮಾನಿಕ ಸಿಬ್ಬಂದಿಯು ಎಂದಿಗೂ ಅಗತ್ಯ ಅನುಮತಿಯೊಂದಿಗೆ ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ತಿಳಿಸಿದೆ.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಕ್ಷಣಾ ಸಚಿವ ಘಸ್ಶಾನ್ ಅವರು, ದೇಶದಲ್ಲಿ ಅನಧಿಕೃತ ಕಾರ್ಯಾಚರಣೆ ನಡೆಯುತ್ತಿರುವ ಕುರಿತು ತಮಗೆ ಮಾಹಿತಿ ಇದೆ ಎಂದು ತಿಳಿಸಿದ್ದರು. ತಿಮರಾಫುಶಿಯಲ್ಲಿ ಅನುಮತಿಯಿಲ್ಲದೇ ಹೆಲಿಕಾಪ್ಟರ್ ಇಳಿದಿತ್ತು ಎಂಬುದನ್ನು ಉಲ್ಲೇಖಿಸಿದ್ದರು.</p>.<p>ಈ ಹೇಳಿಕೆಯನ್ನು ಭಾರತ ತಳ್ಳಿಹಾಕಿದೆ. ಮಾಲ್ದೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಯ (ಎಂಎನ್ಡಿಎಫ್) ಅನುಮೋದನೆಯೊಂದಿಗೆ ಅಗತ್ಯ ಕಾರ್ಯಾಚರಣೆ ನಡೆಸಲಿದೆ ಎಂದು ರಾಯಭಾರ ಕಚೇರಿಯು ತಿಳಿಸಿದೆ. ಸಚಿವರು ಸುದ್ದಿಗೋಷ್ಠಿಯಲ್ಲಿ ಉಲ್ಲೇಖಿಸಿದ್ದ ಹೆಲಿಕಾಪ್ಟರ್ ಕೂಡಾ ಪೂರ್ನ ಅನುಮೋದನೆಯೊಂದಿಗೆ ಕಾರ್ಯಾಚರಣೆ ನಡೆಸಿತ್ತು ಎಂದು ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>