ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಗುಲಗಳ ವಿರುದ್ಧದ ದ್ವೇಷ ದಾಳಿಯಾಗಿ ಮಾರ್ಪಟ್ಟಿದೆ, ಮುಂದೇನು? ಚಂದ್ರ ಆರ್ಯ

ಕೆನಡಾದ ಗೌರಿ ಶಂಕರ ಮಂದಿರದ ಮೇಲೆ ದಾಳಿ, ಹಿಂದೂ ವಿರೋಧಿ ಬರಹಗಳ ಮೂಲಕ ಅವಹೇಳನ
Last Updated 31 ಜನವರಿ 2023, 9:51 IST
ಅಕ್ಷರ ಗಾತ್ರ

ಟೊರೊಂಟೊ: ಕೆನಡಾದ ಬ್ರಾಂಪ್ಟನ್‌ ಪ್ರದೇಶದಲ್ಲಿ ದುಷ್ಕರ್ಮಿಗಳು ಹಿಂದೂ ದೇಗುಲವನ್ನು ವಿರೂಪಗೊಳಿಸಿರುವುದಕ್ಕೆ ಭಾರತ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಆಕ್ರೋಶಗೊಂಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಸಾಮಾಜಿಕ ಮಾಧ್ಯಮಕ್ಕೆ ಸೀಮಿತಗೊಂಡಿದ್ದ ದ್ವೇಷವು, ಈಗ ತೋಳ್ಬಲದ ದಾಳಿಯಾಗಿ ಮಾರ್ಪಟ್ಟಿದೆ. ಮುಂದೇನು? ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

‘ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಗುಂಪುಗಳ ಹಿಂದೂ ದೇಗುಲಗಳ ಮೇಲಿನ ದಾಳಿಯ ಸರಣಿಗೆ ಬ್ರಾಂಪ್ಟನ್‌ನಲ್ಲಿರುವ ಗೌರಿ ಶಂಕರ ಮಂದಿರದ ಮೇಲಿನ ದಾಳಿ ಸೇರ್ಪಡೆಯಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿದ್ದ ದ್ವೇಷ, ಈಗ ಹಿಂದೂ ದೇವಾಲಯಗಳ ಮೇಲಿನ ತೋಳ್ಬಲದ ದಾಳಿಯಾಗಿ ಮಾರ್ಪಟ್ಟಿದೆ. ಮುಂದೇನು? ಇದನ್ನು ಗಂಭೀರವಾಗಿ ಪರಿಗಣಿಸುವಂತೆ ನಾನು ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಬ್ರಾಂಪ್ಟನ್‌ನಲ್ಲಿರುವ ಗೌರಿ ಶಂಕರ ಮಂದಿರದ ಮೇಲಿನ ದಾಳಿಯನ್ನು ಖಂಡಿಸಿ ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಮಂಗಳವಾರ ಹೇಳಿಕೆಯನ್ನೂ ಬಿಡುಗಡೆ ಮಾಡಿದೆ.

‘ವಿಧ್ವಂಸಕ ಕೃತ್ಯವು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳನ್ನು ತೀವ್ರವಾಗಿ ಘಾಸಿಗೊಳಿಸಿದೆ. ಕೆನಡಾದ ಅಧಿಕಾರಿಗಳಿಗೆ ನಮ್ಮ ಆತಂಕವನ್ನು ತಿಳಿಸಿದ್ದೇವೆ’ ಎಂದು ಕಾನ್ಸುಲೇಟ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಇವುಗಳನ್ನು ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT