<p><strong>ನವದೆಹಲಿ:</strong> ಟರ್ಕಿಯಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಒಬ್ಬ ಭಾರತೀಯ ನಾಪತ್ತೆಯಾಗಿದ್ದು, 10 ಮಂದಿ ಹಾನಿಗೊಳಗಾದ ಪ್ರದೇಶದಲ್ಲಿ ಸಿಲುಕಿಕೊಂಡಿಕೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.</p>.<p>ಟರ್ಕಿಗೆ ಉದ್ಯಮ ಪ್ರವಾಸ ಕೈಗೊಂಡಿರುವ ಬೆಂಗಳೂರು ಮೂಲದ ಕಂಪನಿಯ ಸಿಬ್ಬಂದಿ ಕಾಣೆಯಾಗಿದ್ದಾರೆ. 10 ಮಂದಿ ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪಶ್ಚಿಮ) ಸಂಜಯ್ ವರ್ಮಾ ತಿಳಿಸಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/detail/earthquake-epicentre-turkey-1013654.html" itemprop="url">ಆಳ–ಅಗಲ: ಭೂಕಂಪ– ನಡುಕ ಹುಟ್ಟಿಸುವ ಭೂಮಿಯಾಳದ ಕದಲಿಕೆ </a></p>.<p>ಕಾಣೆಯಾದ ವ್ಯಕ್ತಿಯ ಕುಟುಂಬ ಮತ್ತು ಕಂಪನಿಯ ಜತೆ ನಮ್ಮ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಭೂಕಂಪ ಪೀಡಿತ ಸಂತ್ರಸ್ತರ ನೆರವಿಗೆ 'ಆಪರೇಷನ್ ದೋಸ್ತ್', ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅದನಾದಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಮೂವರು ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು.</p>.<p>ಇದುವರೆಗೆ ರಾಯಭಾರ ಕಚೇರಿಗೆ ಮಾಹಿತಿ ಹಾಗೂ ಸಹಾಯವನ್ನು ಕೋರಿ 75 ಮಂದಿ ಕರೆ ಮಾಡಿದ್ದಾರೆ ಎಂದು ಹೇಳಿದರು.</p>.<p>ಅಧಿಕೃತ ಮಾಹಿತಿಯ ಪ್ರಕಾರ, ಟರ್ಕಿಯಲ್ಲಿ ಸುಮಾರು 3,000 ಭಾರತೀಯರು ನೆಲೆಸಿದ್ದಾರೆ. ಇಸ್ತಾನ್ಬುಲ್ನಲ್ಲಿ ಅಂದಾಜು 1,800, ಅಂಕಾರಾದಲ್ಲಿ 250 ಮತ್ತು ಉಳಿದವರು ದೇಶದ ವಿವಿಧ ಭಾಗಗಳಲ್ಲಿ ವಾಸಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದುವರೆಗೆ ವೈದ್ಯಕೀಯ ನೆರವು, ಔಷಧ, ರಕ್ಷಣಾ ಸಿಬ್ಬಂದಿ ತಂಡ ಹಾಗೂ ಪರಿಹಾರ ಸಾಮಗ್ರಿಗಳನ್ನು ಒಳಗೊಂಡ ಭಾರತೀಯ ವಾಯುಪಡೆಯ ಬೃಹತ್ ಗಾತ್ರದ ಆರು ವಿಮಾನಗಳನ್ನು ಟರ್ಕಿಗೆ ರವಾನಿಸಲಾಗಿದೆ. ಆರು ಟನ್ ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ ಮತ್ತೊಂದು ಸಿ-130 ಜೆ ವಿಮಾನ ಸಿರಿಯಾಕ್ಕೆ ತೆರಳಿದೆ.</p>.<p>ಸಿರಿಯಾ ಮೇಲೆ ಅಮೆರಿಕ ನಿರ್ಬಂಧದ ಹೊರತಾಗಿಯೂ ಭಾರತದ ನೆರವಿನ ಬಗ್ಗೆ ಕೇಳಿದಾಗ, ಭಾರತವು ಜಿ20ಯ 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ' ಮಂತ್ರವನ್ನು ಅನುಸರಿಸುತ್ತದೆ. ಮಾನವೀಯತೆಯ ನೆರವಿಗೆ ನಿರ್ಬಂಧ ಬಾಧಕವಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಟರ್ಕಿಯಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಒಬ್ಬ ಭಾರತೀಯ ನಾಪತ್ತೆಯಾಗಿದ್ದು, 10 ಮಂದಿ ಹಾನಿಗೊಳಗಾದ ಪ್ರದೇಶದಲ್ಲಿ ಸಿಲುಕಿಕೊಂಡಿಕೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.</p>.<p>ಟರ್ಕಿಗೆ ಉದ್ಯಮ ಪ್ರವಾಸ ಕೈಗೊಂಡಿರುವ ಬೆಂಗಳೂರು ಮೂಲದ ಕಂಪನಿಯ ಸಿಬ್ಬಂದಿ ಕಾಣೆಯಾಗಿದ್ದಾರೆ. 10 ಮಂದಿ ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪಶ್ಚಿಮ) ಸಂಜಯ್ ವರ್ಮಾ ತಿಳಿಸಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/detail/earthquake-epicentre-turkey-1013654.html" itemprop="url">ಆಳ–ಅಗಲ: ಭೂಕಂಪ– ನಡುಕ ಹುಟ್ಟಿಸುವ ಭೂಮಿಯಾಳದ ಕದಲಿಕೆ </a></p>.<p>ಕಾಣೆಯಾದ ವ್ಯಕ್ತಿಯ ಕುಟುಂಬ ಮತ್ತು ಕಂಪನಿಯ ಜತೆ ನಮ್ಮ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಭೂಕಂಪ ಪೀಡಿತ ಸಂತ್ರಸ್ತರ ನೆರವಿಗೆ 'ಆಪರೇಷನ್ ದೋಸ್ತ್', ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಅದನಾದಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಮೂವರು ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು.</p>.<p>ಇದುವರೆಗೆ ರಾಯಭಾರ ಕಚೇರಿಗೆ ಮಾಹಿತಿ ಹಾಗೂ ಸಹಾಯವನ್ನು ಕೋರಿ 75 ಮಂದಿ ಕರೆ ಮಾಡಿದ್ದಾರೆ ಎಂದು ಹೇಳಿದರು.</p>.<p>ಅಧಿಕೃತ ಮಾಹಿತಿಯ ಪ್ರಕಾರ, ಟರ್ಕಿಯಲ್ಲಿ ಸುಮಾರು 3,000 ಭಾರತೀಯರು ನೆಲೆಸಿದ್ದಾರೆ. ಇಸ್ತಾನ್ಬುಲ್ನಲ್ಲಿ ಅಂದಾಜು 1,800, ಅಂಕಾರಾದಲ್ಲಿ 250 ಮತ್ತು ಉಳಿದವರು ದೇಶದ ವಿವಿಧ ಭಾಗಗಳಲ್ಲಿ ವಾಸಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಇದುವರೆಗೆ ವೈದ್ಯಕೀಯ ನೆರವು, ಔಷಧ, ರಕ್ಷಣಾ ಸಿಬ್ಬಂದಿ ತಂಡ ಹಾಗೂ ಪರಿಹಾರ ಸಾಮಗ್ರಿಗಳನ್ನು ಒಳಗೊಂಡ ಭಾರತೀಯ ವಾಯುಪಡೆಯ ಬೃಹತ್ ಗಾತ್ರದ ಆರು ವಿಮಾನಗಳನ್ನು ಟರ್ಕಿಗೆ ರವಾನಿಸಲಾಗಿದೆ. ಆರು ಟನ್ ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತೀಯ ವಾಯುಪಡೆಯ ಮತ್ತೊಂದು ಸಿ-130 ಜೆ ವಿಮಾನ ಸಿರಿಯಾಕ್ಕೆ ತೆರಳಿದೆ.</p>.<p>ಸಿರಿಯಾ ಮೇಲೆ ಅಮೆರಿಕ ನಿರ್ಬಂಧದ ಹೊರತಾಗಿಯೂ ಭಾರತದ ನೆರವಿನ ಬಗ್ಗೆ ಕೇಳಿದಾಗ, ಭಾರತವು ಜಿ20ಯ 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ' ಮಂತ್ರವನ್ನು ಅನುಸರಿಸುತ್ತದೆ. ಮಾನವೀಯತೆಯ ನೆರವಿಗೆ ನಿರ್ಬಂಧ ಬಾಧಕವಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>