<p><strong>ನವದೆಹಲಿ:</strong> ಹಿಂಸಾಚಾರ ಪೀಡಿತ ಸುಡಾನ್ನಿಂದ ಈವರೆಗೆ 530 ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. </p><p>ಸುಡಾನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ 'ಆಪರೇಷನ್ ಕಾವೇರಿ' ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿತ್ತು. ಇದರ ಬೆನ್ನಲ್ಲೇ ಭಾರತೀಯರನ್ನು ಕರೆತರಲು ನೌಕಾಪಡೆ ಹಾಗೂ ವಾಯುಪಡೆ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದೆ. </p><p>ಮೊದಲ ತಂಡದಲ್ಲಿ 278 ಜನರನ್ನು ಹೊತ್ತ ‘ಐಎನ್ಎಸ್ ಸುಮೇಧ’ ನೌಕೆಯು ಮಂಗಳವಾರ ಪೋರ್ಟ್ ಸುಡಾನ್ನಿಂದ ಸೌದಿ ಅರೇಬಿಯಾದ ಜಿದ್ದಾದತ್ತ ಹೊರಟಿತ್ತು. </p><p>ಮತ್ತೊಂದೆಡೆ ವಾಯುಪಡೆಯ C130J ವಿಮಾನದ ಮೂಲಕ 250 ಮಂದಿ ಭಾರತೀಯರನ್ನು ರಕ್ಷಿಸಲಾಗಿದೆ. </p>. <p>ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾಹಿತಿ ನೀಡಿದ್ದು, ಮೊದಲ ಸಿ-130ಜೆ ವಿಮಾನವು 121 ಮಂದಿ ಮತ್ತು ಎರಡನೇ ವಿಮಾನದ ಮೂಲಕ 135 ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. </p><p>ಸಂಘರ್ಷ ಪೀಡಿತ ಸುಡಾನ್ನಲ್ಲಿ ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರವು, ಸುಡಾನ್ ಆಡಳಿತದ ಹೊರತಾಗಿ ಭಾರತೀಯ ರಾಯಭಾರ, ಅಮೆರಿಕ, ಸೌದಿ ಅರೇಬಿಯಾ, ಯುಇಎ, ಈಜಿಪ್ಟ್ ಹಾಗೂ ವಿಶ್ವಸಂಸ್ಥೆಯ ಜೊತೆ ನಿರಂತರ ಸಂಪರ್ಕದಲ್ಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿಂಸಾಚಾರ ಪೀಡಿತ ಸುಡಾನ್ನಿಂದ ಈವರೆಗೆ 530 ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. </p><p>ಸುಡಾನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ 'ಆಪರೇಷನ್ ಕಾವೇರಿ' ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿತ್ತು. ಇದರ ಬೆನ್ನಲ್ಲೇ ಭಾರತೀಯರನ್ನು ಕರೆತರಲು ನೌಕಾಪಡೆ ಹಾಗೂ ವಾಯುಪಡೆ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದೆ. </p><p>ಮೊದಲ ತಂಡದಲ್ಲಿ 278 ಜನರನ್ನು ಹೊತ್ತ ‘ಐಎನ್ಎಸ್ ಸುಮೇಧ’ ನೌಕೆಯು ಮಂಗಳವಾರ ಪೋರ್ಟ್ ಸುಡಾನ್ನಿಂದ ಸೌದಿ ಅರೇಬಿಯಾದ ಜಿದ್ದಾದತ್ತ ಹೊರಟಿತ್ತು. </p><p>ಮತ್ತೊಂದೆಡೆ ವಾಯುಪಡೆಯ C130J ವಿಮಾನದ ಮೂಲಕ 250 ಮಂದಿ ಭಾರತೀಯರನ್ನು ರಕ್ಷಿಸಲಾಗಿದೆ. </p>. <p>ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮಾಹಿತಿ ನೀಡಿದ್ದು, ಮೊದಲ ಸಿ-130ಜೆ ವಿಮಾನವು 121 ಮಂದಿ ಮತ್ತು ಎರಡನೇ ವಿಮಾನದ ಮೂಲಕ 135 ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. </p><p>ಸಂಘರ್ಷ ಪೀಡಿತ ಸುಡಾನ್ನಲ್ಲಿ ಭಾರತೀಯರ ರಕ್ಷಣೆಗಾಗಿ ಕೇಂದ್ರ ಸರ್ಕಾರವು, ಸುಡಾನ್ ಆಡಳಿತದ ಹೊರತಾಗಿ ಭಾರತೀಯ ರಾಯಭಾರ, ಅಮೆರಿಕ, ಸೌದಿ ಅರೇಬಿಯಾ, ಯುಇಎ, ಈಜಿಪ್ಟ್ ಹಾಗೂ ವಿಶ್ವಸಂಸ್ಥೆಯ ಜೊತೆ ನಿರಂತರ ಸಂಪರ್ಕದಲ್ಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>