<p><strong>ಮಾಲೆ</strong>: ‘ದೇಶದ ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯ ರಕ್ಷಿಸುವುದೇ ಮಾಲ್ದೀವ್ಸ್ ನಾಗರಿಕರ ಬಯಕೆಯಾಗಿದೆ ಎನ್ನುವುದನ್ನು ಸಂಸತ್ ಚುನಾವಣೆಯು ಸಾಬೀತುಪಡಿಸಿದೆ’ ಎಂದು ಅಧ್ಯಕ್ಷ ಮೊಹಮದ್ ಮುಯಿಝು ಪ್ರತಿಪಾದಿಸಿದ್ದಾರೆ.</p>.<p>ಮಾಲ್ದೀವ್ಸ್ ಸಂಸತ್ ಚುನಾವಣೆಯಲ್ಲಿ ಮೊಹಮದ್ ಮುಯಿಝು ನೇತೃತ್ವದ ಪಕ್ಷವು ಸ್ಪಷ್ಟ ಬಹುಮತ ಪಡೆದ ಬಳಿಕ ಮಂಗಳವಾರ ನಡೆದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ದೇಶದ ಆಂತರಿಕ ವಿಷಯಗಳಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪಕ್ಕೆ ಅವಕಾಶ ನೀಡುವುದಿಲ್ಲ ಎನ್ನುವ ಸಂದೇಶ ನೀಡಿದರು.</p>.<p>‘ನಮಗೆ ಸಂಬಂಧಿಸಿದ ವಿಷಯಗಳನ್ನು ನಾವೇ ನಿರ್ಧರಿಸುತ್ತೇವೆ ಎನ್ನುವುದನ್ನು ಅಂತರರಾಷ್ಟ್ರೀಯ ಸಮುದಾಯಕ್ಕೆ ಸ್ಪಷ್ಟಪಡಿಸುತ್ತಿದ್ದೇವೆ’ ಎಂದು ಮುಯಿಝು ಹೇಳಿದರು.</p>.<p>‘ಮಾಲ್ದೀವ್ಸ್ ನಿಲುವು ಕುರಿತು ಅಂತರರಾಷ್ಟ್ರೀಯ ಸಮುದಾಯಕ್ಕೂ ಈಗ ಮನವರಿಕೆಯಾಗಿದೆ. ಯಾವುದೇ ವಿದೇಶಿ ಶಕ್ತಿಗಳ ಹಸ್ತಕ್ಷೇಪ ಇಲ್ಲದೆಯೇ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಸಂಪೂರ್ಣ ಸ್ವಾಯತ್ತತೆ ಇರಬೇಕು ಎನ್ನುವುದನ್ನು ಮಾಲ್ದೀವ್ಸ್ ನಾಗರಿಕರು ಬಯಸುತ್ತಿದ್ದಾರೆ ಎನ್ನುವುದು ಈ ಚುನಾವಣೆಯ ಫಲಿತಾಂಶದಿಂದ ಗೊತ್ತಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೆ</strong>: ‘ದೇಶದ ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯ ರಕ್ಷಿಸುವುದೇ ಮಾಲ್ದೀವ್ಸ್ ನಾಗರಿಕರ ಬಯಕೆಯಾಗಿದೆ ಎನ್ನುವುದನ್ನು ಸಂಸತ್ ಚುನಾವಣೆಯು ಸಾಬೀತುಪಡಿಸಿದೆ’ ಎಂದು ಅಧ್ಯಕ್ಷ ಮೊಹಮದ್ ಮುಯಿಝು ಪ್ರತಿಪಾದಿಸಿದ್ದಾರೆ.</p>.<p>ಮಾಲ್ದೀವ್ಸ್ ಸಂಸತ್ ಚುನಾವಣೆಯಲ್ಲಿ ಮೊಹಮದ್ ಮುಯಿಝು ನೇತೃತ್ವದ ಪಕ್ಷವು ಸ್ಪಷ್ಟ ಬಹುಮತ ಪಡೆದ ಬಳಿಕ ಮಂಗಳವಾರ ನಡೆದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ದೇಶದ ಆಂತರಿಕ ವಿಷಯಗಳಲ್ಲಿ ವಿದೇಶಿ ಶಕ್ತಿಗಳ ಹಸ್ತಕ್ಷೇಪಕ್ಕೆ ಅವಕಾಶ ನೀಡುವುದಿಲ್ಲ ಎನ್ನುವ ಸಂದೇಶ ನೀಡಿದರು.</p>.<p>‘ನಮಗೆ ಸಂಬಂಧಿಸಿದ ವಿಷಯಗಳನ್ನು ನಾವೇ ನಿರ್ಧರಿಸುತ್ತೇವೆ ಎನ್ನುವುದನ್ನು ಅಂತರರಾಷ್ಟ್ರೀಯ ಸಮುದಾಯಕ್ಕೆ ಸ್ಪಷ್ಟಪಡಿಸುತ್ತಿದ್ದೇವೆ’ ಎಂದು ಮುಯಿಝು ಹೇಳಿದರು.</p>.<p>‘ಮಾಲ್ದೀವ್ಸ್ ನಿಲುವು ಕುರಿತು ಅಂತರರಾಷ್ಟ್ರೀಯ ಸಮುದಾಯಕ್ಕೂ ಈಗ ಮನವರಿಕೆಯಾಗಿದೆ. ಯಾವುದೇ ವಿದೇಶಿ ಶಕ್ತಿಗಳ ಹಸ್ತಕ್ಷೇಪ ಇಲ್ಲದೆಯೇ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಸಂಪೂರ್ಣ ಸ್ವಾಯತ್ತತೆ ಇರಬೇಕು ಎನ್ನುವುದನ್ನು ಮಾಲ್ದೀವ್ಸ್ ನಾಗರಿಕರು ಬಯಸುತ್ತಿದ್ದಾರೆ ಎನ್ನುವುದು ಈ ಚುನಾವಣೆಯ ಫಲಿತಾಂಶದಿಂದ ಗೊತ್ತಾಗಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>