<p><strong>ನ್ಯೂಯಾರ್ಕ್:</strong> ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಜಾಗತಿಕ ಮಟ್ಟದಲ್ಲಿ ಆಕ್ರೋಶ ಹೆಚ್ಚುತ್ತಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಸದಸ್ಯ ರಾಷ್ಟ್ರಗಳು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಸಂಬಂಧ ಪಾಕಿಸ್ತಾನದ ಮೇಲೆ ಛೀಮಾರಿ ಹಾಕಿವೆ.</p><p>15 ರಾಷ್ಟ್ರಗಳನ್ನು ಒಳಗೊಂಡ ಭದ್ರತಾ ಮಂಡಳಿಯ ಸಭೆ ರಹಸ್ಯ ಕೊಠಡಿಯಲ್ಲಿ ನಡೆಯಿತು. ಆದರೆ ಈ ಸಂಬಂಧ ಪ್ರಕಟಣೆ ಹೊರಡಿಸಲಿಲ್ಲ. ಸದಸ್ಯ ರಾಷ್ಟ್ರಗಳು ಪಾಕಿಸ್ತಾನದ ವಿರುದ್ಧ ಕಠಿಣ ಪ್ರಶ್ನೆಗಳನ್ನು ಎತ್ತಿವೆ.</p><p>ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿವೆ. ದಾಳಿಕೋರರನ್ನು ಶಿಕ್ಷೆಗೆ ಗುರಿಪಡಿಸುವಂತೆ ಒಮ್ಮತದ ಅಭಿಪ್ರಾಯ ಮೂಡಿಬಂದಿದೆ. </p><p>ಸಭೆಯಲ್ಲಿ ಪಾಕಿಸ್ತಾನ ತನಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ವಿಫಲವಾಗಿದೆ. ಭದ್ರತಾ ಮಂಡಳಿಯ ಸದಸ್ಯರು ಅನೌಪಚಾರಿಕ ಅಧಿವೇಶನದಲ್ಲಿ ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಎತ್ತಿದ್ದಾರೆ. </p><p>ಭಾರತದೊಂದಿಗಿನ ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆಯೂ ಸಲಹೆ ನೀಡಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ. </p><p>ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಉದ್ವಿಗ್ನ ಶಮನಕ್ಕೆ ಯತ್ನಿಸಬೇಕು ಎಂದು ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಸಲಹೆ ನೀಡಿದ್ದಾರೆ. </p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ಕೃತ್ಯದ ಹಿಂದಿನ ದಾಳಿಕೋರರನ್ನು ಹಾಗೂ ಬೆಂಬಲಿಸಿದವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಭಾರತ ಹೇಳಿದೆ. </p><p>ದಾಳಿ ಬೆನ್ನಲ್ಲೇ ಪಾಕಿಸ್ತಾನ ಜೊತೆಗಿನ ಎಲ್ಲ ರಾಜತಾಂತ್ರಿಕ ಬಾಂಧವ್ಯವನ್ನು ಭಾರತ ಕಡಿದುಕೊಂಡಿತ್ತು. ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತುಗೊಳಿಸಿತ್ತು. </p>.ಭಾರತ ಮತ್ತು ಪಾಕಿಸ್ತಾನ ಗರಿಷ್ಠ ಸಂಯಮ ಕಾಯ್ದುಕೊಳ್ಳಬೇಕು: ವಿಶ್ವಸಂಸ್ಥೆ.ಅಣ್ವಸ್ತ್ರದಿಂದ ತಿರುಗೇಟು ಕೊಡುತ್ತೇವೆ: ಭಾರತಕ್ಕೆ ಪಾಕಿಸ್ತಾನ ಬೆದರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್:</strong> ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ವಿರುದ್ಧ ಜಾಗತಿಕ ಮಟ್ಟದಲ್ಲಿ ಆಕ್ರೋಶ ಹೆಚ್ಚುತ್ತಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಸದಸ್ಯ ರಾಷ್ಟ್ರಗಳು ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಸಂಬಂಧ ಪಾಕಿಸ್ತಾನದ ಮೇಲೆ ಛೀಮಾರಿ ಹಾಕಿವೆ.</p><p>15 ರಾಷ್ಟ್ರಗಳನ್ನು ಒಳಗೊಂಡ ಭದ್ರತಾ ಮಂಡಳಿಯ ಸಭೆ ರಹಸ್ಯ ಕೊಠಡಿಯಲ್ಲಿ ನಡೆಯಿತು. ಆದರೆ ಈ ಸಂಬಂಧ ಪ್ರಕಟಣೆ ಹೊರಡಿಸಲಿಲ್ಲ. ಸದಸ್ಯ ರಾಷ್ಟ್ರಗಳು ಪಾಕಿಸ್ತಾನದ ವಿರುದ್ಧ ಕಠಿಣ ಪ್ರಶ್ನೆಗಳನ್ನು ಎತ್ತಿವೆ.</p><p>ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿವೆ. ದಾಳಿಕೋರರನ್ನು ಶಿಕ್ಷೆಗೆ ಗುರಿಪಡಿಸುವಂತೆ ಒಮ್ಮತದ ಅಭಿಪ್ರಾಯ ಮೂಡಿಬಂದಿದೆ. </p><p>ಸಭೆಯಲ್ಲಿ ಪಾಕಿಸ್ತಾನ ತನಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ವಿಫಲವಾಗಿದೆ. ಭದ್ರತಾ ಮಂಡಳಿಯ ಸದಸ್ಯರು ಅನೌಪಚಾರಿಕ ಅಧಿವೇಶನದಲ್ಲಿ ಪಾಕಿಸ್ತಾನಕ್ಕೆ ಕಠಿಣ ಪ್ರಶ್ನೆಗಳನ್ನು ಎತ್ತಿದ್ದಾರೆ. </p><p>ಭಾರತದೊಂದಿಗಿನ ದ್ವಿಪಕ್ಷೀಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆಯೂ ಸಲಹೆ ನೀಡಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ. </p><p>ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಉದ್ವಿಗ್ನ ಶಮನಕ್ಕೆ ಯತ್ನಿಸಬೇಕು ಎಂದು ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಸಲಹೆ ನೀಡಿದ್ದಾರೆ. </p><p>ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ಕೃತ್ಯದ ಹಿಂದಿನ ದಾಳಿಕೋರರನ್ನು ಹಾಗೂ ಬೆಂಬಲಿಸಿದವರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಭಾರತ ಹೇಳಿದೆ. </p><p>ದಾಳಿ ಬೆನ್ನಲ್ಲೇ ಪಾಕಿಸ್ತಾನ ಜೊತೆಗಿನ ಎಲ್ಲ ರಾಜತಾಂತ್ರಿಕ ಬಾಂಧವ್ಯವನ್ನು ಭಾರತ ಕಡಿದುಕೊಂಡಿತ್ತು. ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತುಗೊಳಿಸಿತ್ತು. </p>.ಭಾರತ ಮತ್ತು ಪಾಕಿಸ್ತಾನ ಗರಿಷ್ಠ ಸಂಯಮ ಕಾಯ್ದುಕೊಳ್ಳಬೇಕು: ವಿಶ್ವಸಂಸ್ಥೆ.ಅಣ್ವಸ್ತ್ರದಿಂದ ತಿರುಗೇಟು ಕೊಡುತ್ತೇವೆ: ಭಾರತಕ್ಕೆ ಪಾಕಿಸ್ತಾನ ಬೆದರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>