<p><strong>ಬೀಜಿಂಗ್:</strong> ಪಹಲ್ಗಾಮ್ ದಾಳಿ ಕುರಿತಾಗಿ ‘ತ್ವರಿತವಾಗಿ, ನ್ಯಾಯಸಮ್ಮತವಾಗಿ ತನಿಖೆ’ ಆಗಬೇಕು ಎಂದು ಚೀನಾ ಹೇಳಿದೆ.</p><p>ಮಿತ್ರ ರಾಷ್ಟ್ರವಾದ ಪಾಕಿಸ್ತಾನಕ್ಕೆ ತನ್ನ ಸಾರ್ವಭೌಮತ್ವ ಮತ್ತು ರಕ್ಷಣಾ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವುದಕ್ಕೆ ಅಗತ್ಯವಿರುವ ಬೆಂಬಲ ಒದಗಿಸುವುದಾಗಿಯೂ ಚೀನಾ ಭರವಸೆ ಇತ್ತಿದೆ.</p><p>ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಪಾಕಿಸ್ತಾನದ ಉಪ ಮುಖ್ಯಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ಡಾರ್ ಅವರ ಜೊತೆ ಭಾನುವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದರು ಎಂದು ಚೀನಾದ ಕ್ಸಿನ್ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.</p><p>ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ನಂತರದಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವೆ ಉಂಟಾಗಿರುವ ಬಿಗುವಿನ ಪರಿಸ್ಥಿತಿ ಬಗ್ಗೆ ಡಾರ್ ಅವರು ವಾಂಗ್ ಯಿ ಅವರಿಗೆ ಮಾಹಿತಿ ನೀಡಿದರು ಎಂದು ಆ ವರದಿಯು ಹೇಳಿದೆ.</p><p>‘ಬಿಕ್ಕಟ್ಟಿನಿಂದ ಭಾರತ ಅಥವಾ ಪಾಕಿಸ್ತಾನದ ಮೂಲಭೂತ ಹಿತಾಸಕ್ತಿ ಗಳಿಗೆ ಒಳಿತಾಗುವುದು ಏನೂ ಇಲ್ಲ. ಬಿಕ್ಕಟ್ಟಿನಿಂದ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಕೂಡ ಪ್ರಯೋಜನ ಇಲ್ಲ’ ಎಂದು ವಾಗ್ ಹೇಳಿದರು.</p><p>ಭಾರತ ಮತ್ತು ಪಾಕಿಸ್ತಾನ ಬಿಕ್ಕಟ್ಟು ಶಮನಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತವೆ ಎಂಬ ಆಶಾಭಾವನೆಯನ್ನು ಚೀನಾ ವ್ಯಕ್ತಪಡಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.Pahalgam Terror Attack | ತನಿಖಾ ತಂಡದಲ್ಲಿ ರಷ್ಯಾ,ಚೀನಾ ಇರಲಿ: ಪಾಕ್ ಒತ್ತಾಯ.Pahalgam Terror Attack | ಹಂತಕರಿಗಾಗಿ ಮುಂದುವರಿದ ಶೋಧ; ಇನ್ನೂ ಸಿಗದ ಸುಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್:</strong> ಪಹಲ್ಗಾಮ್ ದಾಳಿ ಕುರಿತಾಗಿ ‘ತ್ವರಿತವಾಗಿ, ನ್ಯಾಯಸಮ್ಮತವಾಗಿ ತನಿಖೆ’ ಆಗಬೇಕು ಎಂದು ಚೀನಾ ಹೇಳಿದೆ.</p><p>ಮಿತ್ರ ರಾಷ್ಟ್ರವಾದ ಪಾಕಿಸ್ತಾನಕ್ಕೆ ತನ್ನ ಸಾರ್ವಭೌಮತ್ವ ಮತ್ತು ರಕ್ಷಣಾ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವುದಕ್ಕೆ ಅಗತ್ಯವಿರುವ ಬೆಂಬಲ ಒದಗಿಸುವುದಾಗಿಯೂ ಚೀನಾ ಭರವಸೆ ಇತ್ತಿದೆ.</p><p>ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಪಾಕಿಸ್ತಾನದ ಉಪ ಮುಖ್ಯಮಂತ್ರಿ ಮತ್ತು ವಿದೇಶಾಂಗ ಸಚಿವ ಇಶಾಕ್ ಡಾರ್ ಅವರ ಜೊತೆ ಭಾನುವಾರ ದೂರವಾಣಿ ಮೂಲಕ ಮಾತುಕತೆ ನಡೆಸಿದರು ಎಂದು ಚೀನಾದ ಕ್ಸಿನ್ಹುವಾ ಸುದ್ದಿಸಂಸ್ಥೆ ವರದಿ ಮಾಡಿದೆ.</p><p>ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ನಂತರದಲ್ಲಿ ಪಾಕಿಸ್ತಾನ ಮತ್ತು ಭಾರತ ನಡುವೆ ಉಂಟಾಗಿರುವ ಬಿಗುವಿನ ಪರಿಸ್ಥಿತಿ ಬಗ್ಗೆ ಡಾರ್ ಅವರು ವಾಂಗ್ ಯಿ ಅವರಿಗೆ ಮಾಹಿತಿ ನೀಡಿದರು ಎಂದು ಆ ವರದಿಯು ಹೇಳಿದೆ.</p><p>‘ಬಿಕ್ಕಟ್ಟಿನಿಂದ ಭಾರತ ಅಥವಾ ಪಾಕಿಸ್ತಾನದ ಮೂಲಭೂತ ಹಿತಾಸಕ್ತಿ ಗಳಿಗೆ ಒಳಿತಾಗುವುದು ಏನೂ ಇಲ್ಲ. ಬಿಕ್ಕಟ್ಟಿನಿಂದ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಕೂಡ ಪ್ರಯೋಜನ ಇಲ್ಲ’ ಎಂದು ವಾಗ್ ಹೇಳಿದರು.</p><p>ಭಾರತ ಮತ್ತು ಪಾಕಿಸ್ತಾನ ಬಿಕ್ಕಟ್ಟು ಶಮನಗೊಳಿಸಲು ಒಟ್ಟಾಗಿ ಕೆಲಸ ಮಾಡುತ್ತವೆ ಎಂಬ ಆಶಾಭಾವನೆಯನ್ನು ಚೀನಾ ವ್ಯಕ್ತಪಡಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.Pahalgam Terror Attack | ತನಿಖಾ ತಂಡದಲ್ಲಿ ರಷ್ಯಾ,ಚೀನಾ ಇರಲಿ: ಪಾಕ್ ಒತ್ತಾಯ.Pahalgam Terror Attack | ಹಂತಕರಿಗಾಗಿ ಮುಂದುವರಿದ ಶೋಧ; ಇನ್ನೂ ಸಿಗದ ಸುಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>