<p><strong>ಇಸ್ಲಾಮಾಬಾದ್:</strong> ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಬಾಕಿಯಿರುವ ಎಲ್ಲ ವಿವಾದಗಳನ್ನು ಬಗೆಹರಿಸಲು ಭಾರತದೊಂದಿಗೆ ಅರ್ಥಪೂರ್ಣ ಮಾತುಕತೆ ನಡೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ.</p><p>ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಂಗಳವಾರ ನಡೆಸಿದ ದೂರವಾಣಿ ಸಂಭಾಷಣೆ ವೇಳೆ ಷರೀಫ್ ಅವರು ಭಾರತದೊಂದಿಗಿನ ಮಾತುಕತೆಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p><p>‘ಜಮ್ಮು ಮತ್ತು ಕಾಶ್ಮೀರ, ನೀರು ಹಂಚಿಕೆ ಹಾಗೂ ಭಯೋತ್ಪಾದನೆ ಸೇರಿದಂತೆ ಎಲ್ಲ ವಿವಾದಿತ ವಿಷಯಗಳ ಕುರಿತು ಭಾರತದ ಜತೆ ಮಾತುಕತೆಗೆ ಸಿದ್ಧವಿರುವುದಾಗಿ ಷರೀಫ್ ಅವರು ಸಲ್ಮಾನ್ ಅವರಿಗೆ ತಿಳಿಸಿದ್ದಾರೆ’ ಎಂದು ರೇಡಿಯೊ ಪಾಕಿಸ್ತಾನ ವರದಿ ಮಾಡಿದೆ.</p><p>ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಪಾಕಿಸ್ತಾನದ ಜತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿತ್ತು.</p><p>ಷರೀಫ್ ಅವರು ಕಳೆದ ತಿಂಗಳು ಇರಾನ್ ಮತ್ತು ಅಜರ್ಬೈಜಾನ್ ಭೇಟಿಯ ಸಂದರ್ಭದಲ್ಲೂ ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸುವ ಇಚ್ಛೆ ವ್ಯಕ್ತಪಡಿಸಿದ್ದರು.</p><p>ಆದರೆ, ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಭಯೋತ್ಪಾದನೆಯ ವಿಚಾರವಾಗಿ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಾಗಿ ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಬಾಕಿಯಿರುವ ಎಲ್ಲ ವಿವಾದಗಳನ್ನು ಬಗೆಹರಿಸಲು ಭಾರತದೊಂದಿಗೆ ಅರ್ಥಪೂರ್ಣ ಮಾತುಕತೆ ನಡೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ.</p><p>ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಂಗಳವಾರ ನಡೆಸಿದ ದೂರವಾಣಿ ಸಂಭಾಷಣೆ ವೇಳೆ ಷರೀಫ್ ಅವರು ಭಾರತದೊಂದಿಗಿನ ಮಾತುಕತೆಯ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p><p>‘ಜಮ್ಮು ಮತ್ತು ಕಾಶ್ಮೀರ, ನೀರು ಹಂಚಿಕೆ ಹಾಗೂ ಭಯೋತ್ಪಾದನೆ ಸೇರಿದಂತೆ ಎಲ್ಲ ವಿವಾದಿತ ವಿಷಯಗಳ ಕುರಿತು ಭಾರತದ ಜತೆ ಮಾತುಕತೆಗೆ ಸಿದ್ಧವಿರುವುದಾಗಿ ಷರೀಫ್ ಅವರು ಸಲ್ಮಾನ್ ಅವರಿಗೆ ತಿಳಿಸಿದ್ದಾರೆ’ ಎಂದು ರೇಡಿಯೊ ಪಾಕಿಸ್ತಾನ ವರದಿ ಮಾಡಿದೆ.</p><p>ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಪಾಕಿಸ್ತಾನದ ಜತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿತ್ತು.</p><p>ಷರೀಫ್ ಅವರು ಕಳೆದ ತಿಂಗಳು ಇರಾನ್ ಮತ್ತು ಅಜರ್ಬೈಜಾನ್ ಭೇಟಿಯ ಸಂದರ್ಭದಲ್ಲೂ ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸುವ ಇಚ್ಛೆ ವ್ಯಕ್ತಪಡಿಸಿದ್ದರು.</p><p>ಆದರೆ, ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಭಯೋತ್ಪಾದನೆಯ ವಿಚಾರವಾಗಿ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಾಗಿ ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>