<p><strong>ಇಸ್ಲಾಮಾಬಾದ್:</strong> ‘ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಭಯೋತ್ಪಾದಕ ದಾಳಿಯ ನಂತರ ಭಾರತವು ದಾಳಿಗೆ ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ನಡೆಯುವ ಸಾಧ್ಯತೆ ಇದೆ’ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್ ಹೇಳಿದ್ದಾರೆ.</p><p>ಪಹಲ್ಗಾಮ್ ದಾಳಿಯ ಹೊಣೆ ಹೊತ್ತಿರುವ ದಿ ರೆಸಿಸ್ಟಂಟ್ ಫ್ರಂಟ್ಗೆ ಪಾಕಿಸ್ತಾನ ಮೂಲಕ ನಿಷೇಧಿತ ಜೈಶ್ ಎ ಮೊಹಮ್ಮದ್ ಸಂಘಟನೆಯ ಬೆಂಬಲವಿದೆ ಎಂದು ಭಾರತ ವಾದಿಸಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರನ್ನೂ ಹುಡುಕಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.</p><p>ಪಾಕಿಸ್ತಾನದ ಸೇನೆಯ ಸಿದ್ಧತೆ ಕುರಿತು ಮಾತನಾಡಿರುವ ಸಚಿವ ಆಸಿಫ್, ‘ಕಾಲ ಸನ್ನಿಹಿತವಾಗಿದೆ. ಹೀಗಾಗಿ ನಮ್ಮ ಸೇನೆಯನ್ನು ಬಲಪಡಿಸುತ್ತಿದ್ದೇವೆ. ಸಂದಿಗ್ಧ ಸಂದರ್ಭದಲ್ಲಿ ಪ್ರಮುಖ ಕಾರ್ಯತಂತ್ರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವೆಲ್ಲವನ್ನೂ ತೆಗೆದುಕೊಳ್ಳಲಾಗಿದೆ’ ಎಂದಿದ್ದಾರೆ.</p><p>‘ವಾಗ್ಯುದ್ಧಗಳು ಹೆಚ್ಚಾಗಿವೆ. ಭಾರತದ ದಾಳಿಯ ಸಾಧ್ಯತೆ ಕುರಿತು ಸರ್ಕಾರಕ್ಕೆ ಸೇನೆ ಮಾಹಿತಿ ನೀಡಿದೆ. ನಮ್ಮ ಅಸ್ತಿತ್ವಕ್ಕೆ ನೇರ ಅಪಾಯ ಎದುರಾದರೆ ಮಾತ್ರ ಅಣ್ವಸ್ತ್ರ ಉಪಯೋಗಿಸಲಾಗುವುದು’ ಎಂದಿದ್ದಾರೆ.</p><p>ಭಾರತ ಮತ್ತು ಪಾಕಿಸ್ತಾನ ನಡುವೆ ಈವರೆಗೂ ಎರಡು ಪ್ರಮುಖ ಯುದ್ಧಗಳು ನಡೆದಿವೆ. ಪಹಲ್ಗಾಮ್ ದಾಳಿಯಲ್ಲಿ ಪಾಲ್ಗೊಂಡ ಇಬ್ಬರು ಭಯೋತ್ಪಾದಕರು ಪಾಕಿಸ್ತಾನದವರು ಎಂದು ಭಾರತ ಹೇಳಿದೆ. ಈ ಆರೋಪವನ್ನು ಪಾಕಿಸ್ತಾನ ತಳ್ಳಿಹಾಕಿದೆ. ಜತೆಗೆ ಘಟನೆ ಕುರಿತು ತಟಸ್ಥ ತನಿಖೆಗೆ ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ‘ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಭಯೋತ್ಪಾದಕ ದಾಳಿಯ ನಂತರ ಭಾರತವು ದಾಳಿಗೆ ಸಜ್ಜಾಗಿದ್ದು, ಯಾವುದೇ ಕ್ಷಣದಲ್ಲಿ ನಡೆಯುವ ಸಾಧ್ಯತೆ ಇದೆ’ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಮೊಹಮ್ಮದ್ ಆಸಿಫ್ ಹೇಳಿದ್ದಾರೆ.</p><p>ಪಹಲ್ಗಾಮ್ ದಾಳಿಯ ಹೊಣೆ ಹೊತ್ತಿರುವ ದಿ ರೆಸಿಸ್ಟಂಟ್ ಫ್ರಂಟ್ಗೆ ಪಾಕಿಸ್ತಾನ ಮೂಲಕ ನಿಷೇಧಿತ ಜೈಶ್ ಎ ಮೊಹಮ್ಮದ್ ಸಂಘಟನೆಯ ಬೆಂಬಲವಿದೆ ಎಂದು ಭಾರತ ವಾದಿಸಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರನ್ನೂ ಹುಡುಕಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ.</p><p>ಪಾಕಿಸ್ತಾನದ ಸೇನೆಯ ಸಿದ್ಧತೆ ಕುರಿತು ಮಾತನಾಡಿರುವ ಸಚಿವ ಆಸಿಫ್, ‘ಕಾಲ ಸನ್ನಿಹಿತವಾಗಿದೆ. ಹೀಗಾಗಿ ನಮ್ಮ ಸೇನೆಯನ್ನು ಬಲಪಡಿಸುತ್ತಿದ್ದೇವೆ. ಸಂದಿಗ್ಧ ಸಂದರ್ಭದಲ್ಲಿ ಪ್ರಮುಖ ಕಾರ್ಯತಂತ್ರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವೆಲ್ಲವನ್ನೂ ತೆಗೆದುಕೊಳ್ಳಲಾಗಿದೆ’ ಎಂದಿದ್ದಾರೆ.</p><p>‘ವಾಗ್ಯುದ್ಧಗಳು ಹೆಚ್ಚಾಗಿವೆ. ಭಾರತದ ದಾಳಿಯ ಸಾಧ್ಯತೆ ಕುರಿತು ಸರ್ಕಾರಕ್ಕೆ ಸೇನೆ ಮಾಹಿತಿ ನೀಡಿದೆ. ನಮ್ಮ ಅಸ್ತಿತ್ವಕ್ಕೆ ನೇರ ಅಪಾಯ ಎದುರಾದರೆ ಮಾತ್ರ ಅಣ್ವಸ್ತ್ರ ಉಪಯೋಗಿಸಲಾಗುವುದು’ ಎಂದಿದ್ದಾರೆ.</p><p>ಭಾರತ ಮತ್ತು ಪಾಕಿಸ್ತಾನ ನಡುವೆ ಈವರೆಗೂ ಎರಡು ಪ್ರಮುಖ ಯುದ್ಧಗಳು ನಡೆದಿವೆ. ಪಹಲ್ಗಾಮ್ ದಾಳಿಯಲ್ಲಿ ಪಾಲ್ಗೊಂಡ ಇಬ್ಬರು ಭಯೋತ್ಪಾದಕರು ಪಾಕಿಸ್ತಾನದವರು ಎಂದು ಭಾರತ ಹೇಳಿದೆ. ಈ ಆರೋಪವನ್ನು ಪಾಕಿಸ್ತಾನ ತಳ್ಳಿಹಾಕಿದೆ. ಜತೆಗೆ ಘಟನೆ ಕುರಿತು ತಟಸ್ಥ ತನಿಖೆಗೆ ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>