<p><strong>ಬೀಜಿಂಗ್: </strong>ಚೀನಾದ ಶಾಂಘೈ ಮತ್ತು ಗುವಾಂಗ್ಜೌನಲ್ಲಿರುವ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.</p><p>ಈ ವೇಳೆ ಅನಿವಾಸಿ ಭಾರತೀಯರೂ ರಾಜತಾಂತ್ರಿಕ ಅಧಿಕಾರಿಗಳಿಗೆ ಜೊತೆಯಾಗಿದ್ದಾರೆ.</p><p>ಶಾಂಘೈನಲ್ಲಿರುವ ರಾಯಭಾರ ಕಚೇರಿಯಲ್ಲಿ ಕಾನ್ಸುಲ್ ಜನರಲ್ ಪ್ರತೀಕ್ ಮಾಥುರ್ ಸೇರಿದಂತೆ ರಾಜತಾಂತ್ರಿಕ ಅಧಿಕಾರಿಗಳು, ಸಿಬ್ಬಂದಿ, ಸ್ನೇಹಿತರು, ಅನಿವಾಸಿ ಭಾರತೀಯರೊಂದಿಗೆ ಸೇರಿ ದುಃಖ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.</p><p>ಇದೇ ರೀತಿ ಗುವಾಂಗ್ಜೌನಲ್ಲಿಯೂ ಸಂತಾಪ ಸಭೆ ನಡೆಸಲಾಗಿದೆ. ದಾಳಿಯಲ್ಲಿ ಮೃತಪಟ್ಟವರ ಚಿತ್ರಗಳನ್ನೂ ಈ ವೇಳೆ ಪ್ರದರ್ಶಿಸಲಾಗಿದೆ.</p><p>ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗಿದೆ.</p><p>ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಸಮೀಪದಲ್ಲಿರುವ ಪ್ರವಾಸಿ ಸ್ಥಳದಲ್ಲಿ ಏಪ್ರಿಲ್ 22ರಂದು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ, 26 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</p><p>ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್–ಇ–ತಯಬಾ (ಎಲ್ಇಟಿ) ಸಂಘಟನೆಯ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ.</p>.Pahalgam Terror Attack: ಪಾಕಿಸ್ತಾನದಿಂದ ಆಮದಾಗುವ ಸರಕುಗಳಿಗೆ ಭಾರತ ನಿರ್ಬಂಧ.Pahalgam Terror attack | ಪ್ರತೀಕಾರ: ಸೇನೆಗೆ ಸಂಪೂರ್ಣ ಅಧಿಕಾರ- ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಜಿಂಗ್: </strong>ಚೀನಾದ ಶಾಂಘೈ ಮತ್ತು ಗುವಾಂಗ್ಜೌನಲ್ಲಿರುವ ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.</p><p>ಈ ವೇಳೆ ಅನಿವಾಸಿ ಭಾರತೀಯರೂ ರಾಜತಾಂತ್ರಿಕ ಅಧಿಕಾರಿಗಳಿಗೆ ಜೊತೆಯಾಗಿದ್ದಾರೆ.</p><p>ಶಾಂಘೈನಲ್ಲಿರುವ ರಾಯಭಾರ ಕಚೇರಿಯಲ್ಲಿ ಕಾನ್ಸುಲ್ ಜನರಲ್ ಪ್ರತೀಕ್ ಮಾಥುರ್ ಸೇರಿದಂತೆ ರಾಜತಾಂತ್ರಿಕ ಅಧಿಕಾರಿಗಳು, ಸಿಬ್ಬಂದಿ, ಸ್ನೇಹಿತರು, ಅನಿವಾಸಿ ಭಾರತೀಯರೊಂದಿಗೆ ಸೇರಿ ದುಃಖ ವ್ಯಕ್ತಪಡಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ.</p><p>ಇದೇ ರೀತಿ ಗುವಾಂಗ್ಜೌನಲ್ಲಿಯೂ ಸಂತಾಪ ಸಭೆ ನಡೆಸಲಾಗಿದೆ. ದಾಳಿಯಲ್ಲಿ ಮೃತಪಟ್ಟವರ ಚಿತ್ರಗಳನ್ನೂ ಈ ವೇಳೆ ಪ್ರದರ್ಶಿಸಲಾಗಿದೆ.</p><p>ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗಿದೆ.</p><p>ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಸಮೀಪದಲ್ಲಿರುವ ಪ್ರವಾಸಿ ಸ್ಥಳದಲ್ಲಿ ಏಪ್ರಿಲ್ 22ರಂದು ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ, 26 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.</p><p>ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್–ಇ–ತಯಬಾ (ಎಲ್ಇಟಿ) ಸಂಘಟನೆಯ ಅಂಗಸಂಸ್ಥೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ.</p>.Pahalgam Terror Attack: ಪಾಕಿಸ್ತಾನದಿಂದ ಆಮದಾಗುವ ಸರಕುಗಳಿಗೆ ಭಾರತ ನಿರ್ಬಂಧ.Pahalgam Terror attack | ಪ್ರತೀಕಾರ: ಸೇನೆಗೆ ಸಂಪೂರ್ಣ ಅಧಿಕಾರ- ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>