<p><strong>ತಿಯಾನ್ಜಿನ್:</strong> ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. </p><p>ತಿಯಾನ್ಜಿನ್ನಲ್ಲಿ ನಡೆಯುತ್ತಿರುವ ಎಸ್ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಪಹಲ್ಗಾಮ್ನಲ್ಲಿ ನಡೆದ ದಾಳಿ ಕೇವಲ ಭಾರತದ ಮೇಲಿನ ದಾಳಿಯಲ್ಲ, ಮಾನವೀಯತೆಯ ಮೇಲೆ ನಂಬಿಕೆಯನ್ನಿಡುವ ದೇಶಗಳಿಗೂ ಬಹಿರಂಗ ಸವಾಲಾಗಿತ್ತು' ಎಂದು ಹೇಳಿದ್ದಾರೆ. </p><p>ಇದೇ ಸಂದರ್ಭದಲ್ಲಿ 'ಭಯೋತ್ಪಾದನೆ ವಿರುದ್ಧ ದ್ವಂದ ನೀತಿ, ನಿಲುವುಗಳನ್ನು ಎಲ್ಲರೂ ಒಮ್ಮತದಿಂದ ತಿರಸ್ಕರಿಸಬೇಕು. ಇದು ಮಾನವೀಯತೆಯತ್ತ ನಮ್ಮ ಕರ್ತವ್ಯವಾಗಿದೆ' ಎಂದು ಹೇಳಿದ್ದಾರೆ. </p><p>'ಕೆಲವು ದೇಶಗಳು ಭಯೋತ್ಪಾದನೆಗೆ ಬಹಿರಂಗವಾಗಿ ಬೆಂಬಲಿಸುವುದನ್ನು ಒಪ್ಪಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸುವುದು ಸಹಜ' ಎಂದು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸಿದೆಯೇ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. </p><p>'ಭಾರತ ಕಳೆದ ನಾಲ್ಕು ದಶಕಗಳಿಂದ ಭಯೋತ್ಪಾದನೆಯ ನೋವನ್ನು ಅನುಭವಿಸುತ್ತಿದೆ. ಅನೇಕ ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ. ಅನೇಕ ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ' ಎಂದು ಅವರು ಹೇಳಿದ್ದಾರೆ. </p>.<p>'ಭಯೋತ್ಪಾದನೆ ಎದುರಿಸುವಲ್ಲಿ ದ್ವಂದ ನೀತಿ ಇರಬಾರದು. ನಾವೆಲ್ಲರೂ ಸ್ಪಷ್ಟ ಹಾಗೂ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>ಪಹಲ್ಗಾಮ್ ದಾಳಿಯ ನಂತರ ಭಾರತದೊಂದಿಗೆ ನಿಂತ ಮಿತ್ರ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 'ಯಾವುದೇ ರಾಷ್ಟ್ರದ ಶಾಂತಿ, ಸಮೃದ್ಧಿ, ಸ್ಥಿರತೆಗೆ ಭಯೋತ್ಪಾದನೆ, ಪತ್ಯೇಕತಾವಾದ ಹಾಗೂ ಉಗ್ರವಾದ ಸವಾಲಾಗಿವೆ' ಎಂದು ಅವರು ಉಲ್ಲೇಖಿಸಿದ್ದಾರೆ. </p>.VIDEO: ಶಾಂಘೈಯಲ್ಲಿ ಗಮನ ಸೆಳೆದ ಮೋದಿ, ಪುಟಿನ್, ಜಿನ್ಪಿಂಗ್ ಭೇಟಿ.ರಷ್ಯಾ ಅಧ್ಯಕ್ಷರ ಭೇಟಿಗೆ ತರಾತುರಿ; ಟ್ರೋಲ್ಗೆ ಗುರಿಯಾದ ಪಾಕ್ ಪ್ರಧಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಯಾನ್ಜಿನ್:</strong> ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯ ವೇಳೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರ ಎದುರಲ್ಲೇ ಭಯೋತ್ಪಾದನೆ ಹಾಗೂ ಪಹಲ್ಗಾಮ್ ದಾಳಿ ವಿಚಾರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. </p><p>ತಿಯಾನ್ಜಿನ್ನಲ್ಲಿ ನಡೆಯುತ್ತಿರುವ ಎಸ್ಸಿಒ ವಾರ್ಷಿಕ ಶೃಂಗದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಪಹಲ್ಗಾಮ್ನಲ್ಲಿ ನಡೆದ ದಾಳಿ ಕೇವಲ ಭಾರತದ ಮೇಲಿನ ದಾಳಿಯಲ್ಲ, ಮಾನವೀಯತೆಯ ಮೇಲೆ ನಂಬಿಕೆಯನ್ನಿಡುವ ದೇಶಗಳಿಗೂ ಬಹಿರಂಗ ಸವಾಲಾಗಿತ್ತು' ಎಂದು ಹೇಳಿದ್ದಾರೆ. </p><p>ಇದೇ ಸಂದರ್ಭದಲ್ಲಿ 'ಭಯೋತ್ಪಾದನೆ ವಿರುದ್ಧ ದ್ವಂದ ನೀತಿ, ನಿಲುವುಗಳನ್ನು ಎಲ್ಲರೂ ಒಮ್ಮತದಿಂದ ತಿರಸ್ಕರಿಸಬೇಕು. ಇದು ಮಾನವೀಯತೆಯತ್ತ ನಮ್ಮ ಕರ್ತವ್ಯವಾಗಿದೆ' ಎಂದು ಹೇಳಿದ್ದಾರೆ. </p><p>'ಕೆಲವು ದೇಶಗಳು ಭಯೋತ್ಪಾದನೆಗೆ ಬಹಿರಂಗವಾಗಿ ಬೆಂಬಲಿಸುವುದನ್ನು ಒಪ್ಪಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸುವುದು ಸಹಜ' ಎಂದು ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸಿದೆಯೇ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. </p><p>'ಭಾರತ ಕಳೆದ ನಾಲ್ಕು ದಶಕಗಳಿಂದ ಭಯೋತ್ಪಾದನೆಯ ನೋವನ್ನು ಅನುಭವಿಸುತ್ತಿದೆ. ಅನೇಕ ತಾಯಂದಿರು ತಮ್ಮ ಮಕ್ಕಳನ್ನು ಕಳೆದುಕೊಂಡಿದ್ದಾರೆ. ಅನೇಕ ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿದ್ದಾರೆ' ಎಂದು ಅವರು ಹೇಳಿದ್ದಾರೆ. </p>.<p>'ಭಯೋತ್ಪಾದನೆ ಎದುರಿಸುವಲ್ಲಿ ದ್ವಂದ ನೀತಿ ಇರಬಾರದು. ನಾವೆಲ್ಲರೂ ಸ್ಪಷ್ಟ ಹಾಗೂ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಎಲ್ಲ ರೀತಿಯ ಭಯೋತ್ಪಾದನೆಯನ್ನು ವಿರೋಧಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>ಪಹಲ್ಗಾಮ್ ದಾಳಿಯ ನಂತರ ಭಾರತದೊಂದಿಗೆ ನಿಂತ ಮಿತ್ರ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 'ಯಾವುದೇ ರಾಷ್ಟ್ರದ ಶಾಂತಿ, ಸಮೃದ್ಧಿ, ಸ್ಥಿರತೆಗೆ ಭಯೋತ್ಪಾದನೆ, ಪತ್ಯೇಕತಾವಾದ ಹಾಗೂ ಉಗ್ರವಾದ ಸವಾಲಾಗಿವೆ' ಎಂದು ಅವರು ಉಲ್ಲೇಖಿಸಿದ್ದಾರೆ. </p>.VIDEO: ಶಾಂಘೈಯಲ್ಲಿ ಗಮನ ಸೆಳೆದ ಮೋದಿ, ಪುಟಿನ್, ಜಿನ್ಪಿಂಗ್ ಭೇಟಿ.ರಷ್ಯಾ ಅಧ್ಯಕ್ಷರ ಭೇಟಿಗೆ ತರಾತುರಿ; ಟ್ರೋಲ್ಗೆ ಗುರಿಯಾದ ಪಾಕ್ ಪ್ರಧಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>