<p><strong>ಇಸ್ಲಾಮಾಬಾದ್:</strong> ಪಾಕಿಸ್ತಾನದಲ್ಲಿನ ಉಗ್ರನೆಲೆಗಳ ಮೇಲೆ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ನಡೆಸಿದ ಬಳಿಕ, ಪಾಕ್ನ ಭದ್ರತಾ ವ್ಯವಸ್ಥೆಯನ್ನು ತಿಳಿದುಕೊಳ್ಳಲು, ಪಾಕಿಸ್ತಾನದಲ್ಲಿ ಉನ್ನತ ಮಟ್ಟದ ರಕ್ಷಣಾ ಸಭೆಯನ್ನು ನಡೆಸಲಾಗಿದೆ.</p><p>‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಉಗ್ರನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿಮಾಡಲಾಗಿತ್ತು. </p><p>ಎರಡೂ ಗಂಟೆಗಳಿಗೂ ಅಧಿಕ ವೇಳೆ ಜರುಗಿದ ಪಾಕ್ನ ರಾಷ್ಟ್ರೀಯ ಭದ್ರತಾ ಮಂಡಳಿ(ಎನ್ಎಸ್ಸಿ) ಸಭೆಯಲ್ಲಿ ಪ್ರಧಾನಿ ಶಹಬಾಜ್ ಷರೀಫ್, ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸೇನಾ ಮುಖ್ಯಸ್ಥರು, ದೇಶದ ಭದ್ರತಾ ವ್ಯವಸ್ಥೆಯ ಬಗ್ಗೆ ವಿಸ್ತ್ರುತ ಚರ್ಚೆ ನಡೆಸಿದ್ದಾರೆ. </p><p>ಸಭೆಯಲ್ಲಿ ಯಾವುದೇ ಮಹತ್ವದ ನಿರ್ಧಾರವನ್ನು ಕೈಗೊಂಡಿಲ್ಲ. ಆದರೆ, ಇಂದು 3.30ಕ್ಕೆ ಮಂತ್ರಿಮಂಡಳ ಸಭೆಯನ್ನು ಕರೆಯಲಾಗಿದ್ದು, ನಂತರ ಸಂಸತ್ತಿನಲ್ಲಿ ಪಾಕ್ನ ಮುಂದಿನ ನಡೆಯ ಕುರಿತು ಮಹತ್ವದ ನಿರ್ಧಾರವಾಗುವ ಸಾಧ್ಯತೆಯಿದೆ ಎಂದು ಪಾಕ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರನೆಲೆಗಳ ಮೇಲಿನ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 46ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. </p><p>ಭಾರತೀಯ ವಾಯುಪಡೆಯು ಪಾಕಿಸ್ತಾನದೊಳಗೆ ಹಾಗೂ ಪಾಕ್ ವಾಯುಪಡೆಯು ಭಾರತದೊಳಗೆ ತೆರಳಲು ಸಾಧ್ಯವಿಲ್ಲ. ಪಾಕಿಸ್ತಾನ ವಾಯುಪಡೆಯ ಯಾವುದೇ ವಸ್ತುಗಳಿಗೆ ಹಾನಿಯಾಗಿಲ್ಲ ಎಂದು ಪಾಕಿಸ್ತಾನ ಸೇನೆಯ ವಕ್ತಾರ ಲೆ. ಜನರಲ್ ಅಹಮದ್ ಶರೀಫ್ ಚೌದರಿ ತಿಳಿಸಿದರು.</p><p>ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಪಾಕಿಸ್ತಾನದಲ್ಲಿನ ಉಗ್ರನೆಲೆಗಳ ಮೇಲೆ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ನಡೆಸಿದ ಬಳಿಕ, ಪಾಕ್ನ ಭದ್ರತಾ ವ್ಯವಸ್ಥೆಯನ್ನು ತಿಳಿದುಕೊಳ್ಳಲು, ಪಾಕಿಸ್ತಾನದಲ್ಲಿ ಉನ್ನತ ಮಟ್ಟದ ರಕ್ಷಣಾ ಸಭೆಯನ್ನು ನಡೆಸಲಾಗಿದೆ.</p><p>‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಉಗ್ರನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿಮಾಡಲಾಗಿತ್ತು. </p><p>ಎರಡೂ ಗಂಟೆಗಳಿಗೂ ಅಧಿಕ ವೇಳೆ ಜರುಗಿದ ಪಾಕ್ನ ರಾಷ್ಟ್ರೀಯ ಭದ್ರತಾ ಮಂಡಳಿ(ಎನ್ಎಸ್ಸಿ) ಸಭೆಯಲ್ಲಿ ಪ್ರಧಾನಿ ಶಹಬಾಜ್ ಷರೀಫ್, ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸೇನಾ ಮುಖ್ಯಸ್ಥರು, ದೇಶದ ಭದ್ರತಾ ವ್ಯವಸ್ಥೆಯ ಬಗ್ಗೆ ವಿಸ್ತ್ರುತ ಚರ್ಚೆ ನಡೆಸಿದ್ದಾರೆ. </p><p>ಸಭೆಯಲ್ಲಿ ಯಾವುದೇ ಮಹತ್ವದ ನಿರ್ಧಾರವನ್ನು ಕೈಗೊಂಡಿಲ್ಲ. ಆದರೆ, ಇಂದು 3.30ಕ್ಕೆ ಮಂತ್ರಿಮಂಡಳ ಸಭೆಯನ್ನು ಕರೆಯಲಾಗಿದ್ದು, ನಂತರ ಸಂಸತ್ತಿನಲ್ಲಿ ಪಾಕ್ನ ಮುಂದಿನ ನಡೆಯ ಕುರಿತು ಮಹತ್ವದ ನಿರ್ಧಾರವಾಗುವ ಸಾಧ್ಯತೆಯಿದೆ ಎಂದು ಪಾಕ್ ಅಧಿಕಾರಿಗಳು ತಿಳಿಸಿದ್ದಾರೆ.</p><p>ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರನೆಲೆಗಳ ಮೇಲಿನ ದಾಳಿಯಲ್ಲಿ 26ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 46ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ. </p><p>ಭಾರತೀಯ ವಾಯುಪಡೆಯು ಪಾಕಿಸ್ತಾನದೊಳಗೆ ಹಾಗೂ ಪಾಕ್ ವಾಯುಪಡೆಯು ಭಾರತದೊಳಗೆ ತೆರಳಲು ಸಾಧ್ಯವಿಲ್ಲ. ಪಾಕಿಸ್ತಾನ ವಾಯುಪಡೆಯ ಯಾವುದೇ ವಸ್ತುಗಳಿಗೆ ಹಾನಿಯಾಗಿಲ್ಲ ಎಂದು ಪಾಕಿಸ್ತಾನ ಸೇನೆಯ ವಕ್ತಾರ ಲೆ. ಜನರಲ್ ಅಹಮದ್ ಶರೀಫ್ ಚೌದರಿ ತಿಳಿಸಿದರು.</p><p>ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>