<p><strong>ಇಸ್ಲಾಮಾಬಾದ್:</strong> ಭಾರತ ಕೈಗೊಂಡಿದ್ದ ಆಪರೇಷನ್ ಸಿಂಧೂರ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ವಿವಿಧ ಪಕ್ಷಗಳ ನಾಯಕರು ನೀಡಿರುವ ಹೇಳಿಕೆಗಳನ್ನು ಪಾಕಿಸ್ತಾನ ಬುಧವಾರ ಖಂಡಿಸಿದೆ.</p>.<p>‘ಉಭಯ ದೇಶಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಭಾರತದೊಂದಿಗೆ ಅರ್ಥಪೂರ್ಣ ಮಾತುಕತೆ ನಡೆಸುವುದಕ್ಕೆ ಪಾಕಿಸ್ತಾನ ಬದ್ಧವಾಗಿದೆ’ ಎಂದು ವಿದೆಶಾಂಗ ಕಚೇರಿ ಹೇಳಿದೆ.</p>.<p>‘ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿ ಯಾವುದೇ ವಿಶ್ವಾಸಾರ್ಹ ಅಥವಾ ದೃಢೀಕರಿಸಿದ ಸಾಕ್ಷ್ಯಗಳು ಇಲ್ಲದೆಯೇ ಪಾಕಿಸ್ತಾನದ ವಿರುದ್ಧ ಭಾರತ ವಾಗ್ದಾಳಿ ನಡೆಸಿದೆ’ ಎಂದಿದೆ.</p>.<p>‘ಭಾರತದ ನಾಯಕರು ನೀಡಿರುವ ಹೇಳಿಕೆಗಳು ವಾಸ್ತವಿಕ ಸಂಗತಿಗಳನ್ನು ತಿರುಚುವ ಅಪಾಯಕಾರಿ ಪ್ರವೃತ್ತಿಯನ್ನು ತೋರಿಸುತ್ತವೆ. ಪಹಲ್ಗಾಮ್ನಲ್ಲಿ ದಾಳಿ ನಡೆಸಿದ್ದ ಉಗ್ರರ ಹತ್ಯೆಗಾಗಿ ಭಾರತ ‘ಆಪರೇಷನ್ ಮಹಾದೇವ’ ಕೈಗೊಂಡಿದ್ದು, ಇದು ಕೂಡ ಪಾಕಿಸ್ತಾನದ ಪಾಲಿಗೆ ಮಹತ್ವದ ವಿಚಾರವಲ್ಲ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಭಾರತ ಕೈಗೊಂಡಿದ್ದ ಆಪರೇಷನ್ ಸಿಂಧೂರ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ ವಿವಿಧ ಪಕ್ಷಗಳ ನಾಯಕರು ನೀಡಿರುವ ಹೇಳಿಕೆಗಳನ್ನು ಪಾಕಿಸ್ತಾನ ಬುಧವಾರ ಖಂಡಿಸಿದೆ.</p>.<p>‘ಉಭಯ ದೇಶಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ ಭಾರತದೊಂದಿಗೆ ಅರ್ಥಪೂರ್ಣ ಮಾತುಕತೆ ನಡೆಸುವುದಕ್ಕೆ ಪಾಕಿಸ್ತಾನ ಬದ್ಧವಾಗಿದೆ’ ಎಂದು ವಿದೆಶಾಂಗ ಕಚೇರಿ ಹೇಳಿದೆ.</p>.<p>‘ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಸಂಬಂಧಿಸಿ ಯಾವುದೇ ವಿಶ್ವಾಸಾರ್ಹ ಅಥವಾ ದೃಢೀಕರಿಸಿದ ಸಾಕ್ಷ್ಯಗಳು ಇಲ್ಲದೆಯೇ ಪಾಕಿಸ್ತಾನದ ವಿರುದ್ಧ ಭಾರತ ವಾಗ್ದಾಳಿ ನಡೆಸಿದೆ’ ಎಂದಿದೆ.</p>.<p>‘ಭಾರತದ ನಾಯಕರು ನೀಡಿರುವ ಹೇಳಿಕೆಗಳು ವಾಸ್ತವಿಕ ಸಂಗತಿಗಳನ್ನು ತಿರುಚುವ ಅಪಾಯಕಾರಿ ಪ್ರವೃತ್ತಿಯನ್ನು ತೋರಿಸುತ್ತವೆ. ಪಹಲ್ಗಾಮ್ನಲ್ಲಿ ದಾಳಿ ನಡೆಸಿದ್ದ ಉಗ್ರರ ಹತ್ಯೆಗಾಗಿ ಭಾರತ ‘ಆಪರೇಷನ್ ಮಹಾದೇವ’ ಕೈಗೊಂಡಿದ್ದು, ಇದು ಕೂಡ ಪಾಕಿಸ್ತಾನದ ಪಾಲಿಗೆ ಮಹತ್ವದ ವಿಚಾರವಲ್ಲ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>