<p><strong>ಇಸ್ಲಾಮಾಬಾದ್:</strong> ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿಂದಿನ ತನ್ನ ಕೈವಾಡದ ಆರೋಪವನ್ನು ಪಾಕಿಸ್ತಾನ ತಳ್ಳಿ ಹಾಕಿದೆ. </p><p>ಈ ಕುರಿತು ಖಾಸಗಿ ಚಾನಲ್ಗೆ ನೀಡಿರುವ ಸಂದರ್ಶನದಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸೀಫ್ ಆರೋಪವನ್ನು ನಿರಾಕರಿಸಿದ್ದಾರೆ.</p><p>ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ಪಾಕಿಸ್ತಾನಕ್ಕೂ ಯಾವುದೇ ನಂಟು ಇಲ್ಲ. ನಮ್ಮ ಮೇಲೆ ಆರೋಪ ಹೊರಿಸಬೇಡಿ. ಭಯೋತ್ಪಾದನೆಯನ್ನು ನಾವು ಬೆಂಬಲಿಸುವುದಿಲ್ಲ. ಈ ಸಂಬಂಧ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ. </p><p>ಈ ನಡುವೆ ಭಾರತದಲ್ಲೇ ಆಂತರಿಕವಾಗಿ ಅಶಾಂತಿ ಇದೆ ಎಂದು ಅವರು ಬೊಟ್ಟು ಮಾಡಿದ್ದಾರೆ. ಮಣಿಪುರ ಸೇರಿದಂತೆ ನಾಗಾಲ್ಯಾಂಡ್ನಿಂದ ಕಾಶ್ಮೀರದವರೆಗೆ ಭಾರತದ ಸರ್ಕಾರದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ಅವರು ಹೇಳಿದರು. </p>. <p><strong>ಪಾಕ್ ಸಂತಾಪ...</strong></p><p>ಏತನ್ಮಧ್ಯೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗಾಗಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಸಂತಾಪಗಳನ್ನು ಸೂಚಿಸಿದೆ. </p><p>ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಪ್ರವಾಸಿಗರು ಮೃತಪಟ್ಟಿರುವುದು ಅತ್ಯಂತ ಕಳವಳಕಾರಿಯಾಗಿದೆ. ಮೃತರ ಸಂಬಂಧಿಕರಿಗೆ ನಾವು ಸಂತಾಪವನ್ನು ಸೂಚಿಸುತ್ತೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. 2019ರ ಪುಲ್ವಾಮಾದ ಬಳಿಕ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. </p>.Pahalgam Terror Attack: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ.Terror Attack:ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ ಹಿಂದಿನ ತನ್ನ ಕೈವಾಡದ ಆರೋಪವನ್ನು ಪಾಕಿಸ್ತಾನ ತಳ್ಳಿ ಹಾಕಿದೆ. </p><p>ಈ ಕುರಿತು ಖಾಸಗಿ ಚಾನಲ್ಗೆ ನೀಡಿರುವ ಸಂದರ್ಶನದಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸೀಫ್ ಆರೋಪವನ್ನು ನಿರಾಕರಿಸಿದ್ದಾರೆ.</p><p>ಪಹಲ್ಗಾಮ್ ಭಯೋತ್ಪಾದಕ ದಾಳಿ ಹಾಗೂ ಪಾಕಿಸ್ತಾನಕ್ಕೂ ಯಾವುದೇ ನಂಟು ಇಲ್ಲ. ನಮ್ಮ ಮೇಲೆ ಆರೋಪ ಹೊರಿಸಬೇಡಿ. ಭಯೋತ್ಪಾದನೆಯನ್ನು ನಾವು ಬೆಂಬಲಿಸುವುದಿಲ್ಲ. ಈ ಸಂಬಂಧ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ. </p><p>ಈ ನಡುವೆ ಭಾರತದಲ್ಲೇ ಆಂತರಿಕವಾಗಿ ಅಶಾಂತಿ ಇದೆ ಎಂದು ಅವರು ಬೊಟ್ಟು ಮಾಡಿದ್ದಾರೆ. ಮಣಿಪುರ ಸೇರಿದಂತೆ ನಾಗಾಲ್ಯಾಂಡ್ನಿಂದ ಕಾಶ್ಮೀರದವರೆಗೆ ಭಾರತದ ಸರ್ಕಾರದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ಅವರು ಹೇಳಿದರು. </p>. <p><strong>ಪಾಕ್ ಸಂತಾಪ...</strong></p><p>ಏತನ್ಮಧ್ಯೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗಾಗಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಸಂತಾಪಗಳನ್ನು ಸೂಚಿಸಿದೆ. </p><p>ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ದಾಳಿಯಲ್ಲಿ ಪ್ರವಾಸಿಗರು ಮೃತಪಟ್ಟಿರುವುದು ಅತ್ಯಂತ ಕಳವಳಕಾರಿಯಾಗಿದೆ. ಮೃತರ ಸಂಬಂಧಿಕರಿಗೆ ನಾವು ಸಂತಾಪವನ್ನು ಸೂಚಿಸುತ್ತೇವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ. </p><p>ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. 2019ರ ಪುಲ್ವಾಮಾದ ಬಳಿಕ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. </p>.Pahalgam Terror Attack: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ.Terror Attack:ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>