<p><strong>ಕಠ್ಮಂಡು (ನೇಪಾಳ):</strong> ಭಾರತದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ 'ನಾಗರಿಕ ಯುವ ಶಕ್ತಿ ನೇಪಾಳ' ಸಂಘಟನೆ ಕಠ್ಮಂಡುವಿನಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿ ಹೊರಗೆ ಶನಿವಾರ ಪ್ರತಿಭಟನೆ ನಡೆಸಿದೆ.</p><p>ದಾಳಿ ವೇಳೆ ಮೃತಪಟ್ಟ ಸುದೀಪ್ ನ್ಯೂಪನೆ (27) ಅವರ ಭಾವಚಿತ್ರ ಹಾಗೂ 'ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿ', 'ಉಗ್ರರನ್ನು ಶಿಕ್ಷಿಸಿ' ಹಾಗೂ 'ಹಿಂದೂಗಳ ಹತ್ಯೆ ನಿಲ್ಲಿಸಿ' ಎಂಬಿತ್ಯಾದಿ ಬರಹಗಳಿದ್ದ ಪೋಸ್ಟರ್ಗಳನ್ನು ಹಿಡಿದಿದ್ದ ಹಲವು ಯುವಕರು ದಾಳಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ್ದಾರೆ.</p><p>ಸುದೀಪ್ ಅವರು ಪಶ್ಚಿಮ ನೇಪಾಳದ ಬುಟವಾಲ್ ನಗರದವರು.</p>.Pahalgam Terror Attack: ಮತ್ತೆ ಮೂವರು ಶಂಕಿತ ಉಗ್ರರ ಮನೆಗಳು ಧ್ವಂಸ.Terror Attack | ಪಾಕಿಸ್ತಾನಿ ಪ್ರಜೆಗಳ ವಾಪಸ್ಗೆ ಕ್ರಮ: ಸಿಎಂ ಸಿದ್ದರಾಮಯ್ಯ.<p>ಅವರ ಹತ್ಯೆಯನ್ನು ಖಂಡಿಸಿ, ರಾಷ್ಟ್ರೀಯ ಪ್ರಜಾತಂತ್ರ ಪಕ್ಷ ಸಹ ಪಾಕಿಸ್ತಾನ ರಾಯಭಾರ ಕಚೇರಿ ಎದುರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದೆ.</p><p>ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ (ಏಪ್ರಿಲ್ 22ರಂದು) ಗುಂಡಿನ ದಾಳಿ ನಡೆಸಿದ್ದರು. 26 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು (ನೇಪಾಳ):</strong> ಭಾರತದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ 'ನಾಗರಿಕ ಯುವ ಶಕ್ತಿ ನೇಪಾಳ' ಸಂಘಟನೆ ಕಠ್ಮಂಡುವಿನಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿ ಹೊರಗೆ ಶನಿವಾರ ಪ್ರತಿಭಟನೆ ನಡೆಸಿದೆ.</p><p>ದಾಳಿ ವೇಳೆ ಮೃತಪಟ್ಟ ಸುದೀಪ್ ನ್ಯೂಪನೆ (27) ಅವರ ಭಾವಚಿತ್ರ ಹಾಗೂ 'ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿ', 'ಉಗ್ರರನ್ನು ಶಿಕ್ಷಿಸಿ' ಹಾಗೂ 'ಹಿಂದೂಗಳ ಹತ್ಯೆ ನಿಲ್ಲಿಸಿ' ಎಂಬಿತ್ಯಾದಿ ಬರಹಗಳಿದ್ದ ಪೋಸ್ಟರ್ಗಳನ್ನು ಹಿಡಿದಿದ್ದ ಹಲವು ಯುವಕರು ದಾಳಿಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ್ದಾರೆ.</p><p>ಸುದೀಪ್ ಅವರು ಪಶ್ಚಿಮ ನೇಪಾಳದ ಬುಟವಾಲ್ ನಗರದವರು.</p>.Pahalgam Terror Attack: ಮತ್ತೆ ಮೂವರು ಶಂಕಿತ ಉಗ್ರರ ಮನೆಗಳು ಧ್ವಂಸ.Terror Attack | ಪಾಕಿಸ್ತಾನಿ ಪ್ರಜೆಗಳ ವಾಪಸ್ಗೆ ಕ್ರಮ: ಸಿಎಂ ಸಿದ್ದರಾಮಯ್ಯ.<p>ಅವರ ಹತ್ಯೆಯನ್ನು ಖಂಡಿಸಿ, ರಾಷ್ಟ್ರೀಯ ಪ್ರಜಾತಂತ್ರ ಪಕ್ಷ ಸಹ ಪಾಕಿಸ್ತಾನ ರಾಯಭಾರ ಕಚೇರಿ ಎದುರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದೆ.</p><p>ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ (ಏಪ್ರಿಲ್ 22ರಂದು) ಗುಂಡಿನ ದಾಳಿ ನಡೆಸಿದ್ದರು. 26 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>