<p><strong>ವಿಶ್ವಸಂಸ್ಥೆ</strong>: ಮ್ಯಾನ್ಮಾರ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವಿನ ಬಗ್ಗೆ ವಿಶ್ವಸಂಸ್ಥೆಯ ವಿಶೇಷ ವರದಿಗಾರರು ಮಾಡಿರುವ ವರದಿಯನ್ನು ಭಾರತ ಖಂಡಿಸಿದೆ. ಅಲ್ಲದೇ, ‘ಈ ವರದಿಯು ಏಕಪಕ್ಷೀಯ ಹಾಗೂ ಪಕ್ಷಪಾತದಿಂದ ಕೂಡಿದೆ’ ಎಂದು ಆರೋಪಿಸಿದೆ. </p>.<p>ಮ್ಯಾನ್ಮಾರ್ನಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೂರನೇ ಸಮಿತಿಯಲ್ಲಿ ಮಂಗಳವಾರ ಚರ್ಚೆ ನಡೆಯಿತು. ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸದಸ್ಯ ದಿಲೀಪ್ ಸೈಕಿಯಾ ಅವರು ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<p>ಈ ವೇಳೆ ಮಾತನಾಡಿದ ಅವರು, ‘ಮ್ಯಾನ್ಮಾರ್ನಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೈಗೊಂಡ ಎಲ್ಲಾ ಉಪಕ್ರಮಗಳಿಗೂ ಭಾರತ ಬೆಂಬಲ ನೀಡಿದೆ. ಹಿಂಸಾಚಾರವನ್ನು ಕೊನೆಗೊಳಿಸಿ, ಮಾನವೀಯ ನೆರವು ಒದಗಿಸಲು ಅವಕಾಶ ನೀಡಬೇಕು ಎಂದು ಭಾರತ ಪ್ರತಿಪಾದಿಸುತ್ತಲೇ ಇದೆ’ ಎಂದಿದ್ದಾರೆ. </p>.<p class="title">ಅಲ್ಲದೇ,‘ಭಾರತ ಇಷ್ಟೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದರೂ 2025ರ ಏಪ್ರಿಲ್ನಲ್ಲಿ ನಡೆದ ಪಹಲ್ಗಾಮ್ ದಾಳಿ ಘಟನೆಗೂ ಮ್ಯಾನ್ಮಾರ್ ನಿರಾಶ್ರಿತರಿಗೂ ತಳಕುಹಾಕಿ ವಿಶ್ವಸಂಸ್ಥೆಯ ವರದಿಗಾರರು ವರದಿ ರೂಪಿಸಿರುವುದು ದುರದೃಷ್ಟಕರ. ಈ ವರದಿ ಆಧಾರರಹಿತವಾದದು ಮಾತ್ರವಲ್ಲದೇ ಪಕ್ಷಪಾತದ ನಿಲುವನ್ನು ಬಿಂಬಿಸುತ್ತದೆ. ಇಂಥ ಅನಧಿಕೃತ ವರದಿಗಳನ್ನು ವಿಶ್ವಸಂಸ್ಥೆಯ ತಜ್ಞರು ಪರಿಗಣಿಸಬಾರದು’ ಎಂದೂ ಹೇಳಿದ್ದಾರೆ. </p>.<p class="title">ಪಹಲ್ಗಾಮ್ ದಾಳಿಯ ಬಳಿಕ ಭಾರತ ಸರ್ಕಾರ ಮ್ಯಾನ್ಮಾರ್ನ ರೋಹಿಂಗ್ಯಾ ನಿರಾಶ್ರಿತರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ವಿಶ್ವಸಂಸ್ಥೆಯ ವಿಶೇಷ ವರದಿಗಾರರು ತಮ್ಮ ವರದಿಯಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ</strong>: ಮ್ಯಾನ್ಮಾರ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವಿನ ಬಗ್ಗೆ ವಿಶ್ವಸಂಸ್ಥೆಯ ವಿಶೇಷ ವರದಿಗಾರರು ಮಾಡಿರುವ ವರದಿಯನ್ನು ಭಾರತ ಖಂಡಿಸಿದೆ. ಅಲ್ಲದೇ, ‘ಈ ವರದಿಯು ಏಕಪಕ್ಷೀಯ ಹಾಗೂ ಪಕ್ಷಪಾತದಿಂದ ಕೂಡಿದೆ’ ಎಂದು ಆರೋಪಿಸಿದೆ. </p>.<p>ಮ್ಯಾನ್ಮಾರ್ನಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೂರನೇ ಸಮಿತಿಯಲ್ಲಿ ಮಂಗಳವಾರ ಚರ್ಚೆ ನಡೆಯಿತು. ಭಾರತದ ಪ್ರತಿನಿಧಿಯಾಗಿ ಲೋಕಸಭಾ ಸದಸ್ಯ ದಿಲೀಪ್ ಸೈಕಿಯಾ ಅವರು ಚರ್ಚೆಯಲ್ಲಿ ಭಾಗವಹಿಸಿದ್ದರು.</p>.<p>ಈ ವೇಳೆ ಮಾತನಾಡಿದ ಅವರು, ‘ಮ್ಯಾನ್ಮಾರ್ನಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೈಗೊಂಡ ಎಲ್ಲಾ ಉಪಕ್ರಮಗಳಿಗೂ ಭಾರತ ಬೆಂಬಲ ನೀಡಿದೆ. ಹಿಂಸಾಚಾರವನ್ನು ಕೊನೆಗೊಳಿಸಿ, ಮಾನವೀಯ ನೆರವು ಒದಗಿಸಲು ಅವಕಾಶ ನೀಡಬೇಕು ಎಂದು ಭಾರತ ಪ್ರತಿಪಾದಿಸುತ್ತಲೇ ಇದೆ’ ಎಂದಿದ್ದಾರೆ. </p>.<p class="title">ಅಲ್ಲದೇ,‘ಭಾರತ ಇಷ್ಟೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದರೂ 2025ರ ಏಪ್ರಿಲ್ನಲ್ಲಿ ನಡೆದ ಪಹಲ್ಗಾಮ್ ದಾಳಿ ಘಟನೆಗೂ ಮ್ಯಾನ್ಮಾರ್ ನಿರಾಶ್ರಿತರಿಗೂ ತಳಕುಹಾಕಿ ವಿಶ್ವಸಂಸ್ಥೆಯ ವರದಿಗಾರರು ವರದಿ ರೂಪಿಸಿರುವುದು ದುರದೃಷ್ಟಕರ. ಈ ವರದಿ ಆಧಾರರಹಿತವಾದದು ಮಾತ್ರವಲ್ಲದೇ ಪಕ್ಷಪಾತದ ನಿಲುವನ್ನು ಬಿಂಬಿಸುತ್ತದೆ. ಇಂಥ ಅನಧಿಕೃತ ವರದಿಗಳನ್ನು ವಿಶ್ವಸಂಸ್ಥೆಯ ತಜ್ಞರು ಪರಿಗಣಿಸಬಾರದು’ ಎಂದೂ ಹೇಳಿದ್ದಾರೆ. </p>.<p class="title">ಪಹಲ್ಗಾಮ್ ದಾಳಿಯ ಬಳಿಕ ಭಾರತ ಸರ್ಕಾರ ಮ್ಯಾನ್ಮಾರ್ನ ರೋಹಿಂಗ್ಯಾ ನಿರಾಶ್ರಿತರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ವಿಶ್ವಸಂಸ್ಥೆಯ ವಿಶೇಷ ವರದಿಗಾರರು ತಮ್ಮ ವರದಿಯಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>