<p><strong>ನ್ಯೂಯಾರ್ಕ್</strong>: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ವಿಚಾರವು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಈ ಕುರಿತು ಮಂಡಳಿಯ ಸದಸ್ಯ ರಾಷ್ಟ್ರಗಳು ಕಠಿಣ ಪ್ರಶ್ನೆಗಳನ್ನು ಕೇಳುವ ಮೂಲಕ ಪಾಕಿಸ್ತಾನವನ್ಜು ತರಾಟೆಗೆ ತೆಗೆದುಕೊಂಡಿವೆ.</p>.<p>26 ಜನರನ್ನು ಬಲಿ ತೆಗೆದುಕೊಂಡ ಈ ದಾಳಿಗೆ ಜಾಗತಿಕವಾಗಿ ಖಂಡನೆ ವ್ಯಕ್ತವಾಗಿರುವ ಜೊತೆಗೆ, ಈಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕೂಡ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿರುವುದು ಗಮನಾರ್ಹ.</p>.<p>ಮುಖ್ಯ ಸಭಾಂಗಣದ ಬದಲಾಗಿ ಸಮಾಲೋಚನೆಗೆ ಮೀಸಲಾದ ಕೊಠಡಿಯೊಂದರಲ್ಲಿ ಮಂಡಳಿಯ ಸಭೆ ನಡೆದಿದೆ. ಪಹಲ್ಗಾಮ್ನಲ್ಲಿ ನಡೆದ ದಾಳಿಗೆ ಸಂಬಂಧಿಸಿ ಮಂಡಳಿಯ ಸದಸ್ಯ ರಾಷ್ಟ್ರಗಳು ತನಗೆ ಅನುಕೂಲಕರವಾದ ನಿಲುವು ಪ್ರಕಟಿಸಬೇಕು ಎಂಬ ದೃಷ್ಟಿಯಿಂದ ಪಾಕಿಸ್ತಾನ ನಡೆಸಿದ ಪ್ರಯತ್ನವು ಫಲ ನೀಡಿಲ್ಲ.</p>.<p>ಸಭೆ ಬಳಿಕ ಭದ್ರತಾ ಮಂಡಳಿಯು ಈ ವಿಚಾರವಾಗಿ ಹೇಳಿಕೆ ಬಿಡುಗಡೆ ಮಾಡಲು ನಿರಾಕರಿಸಿತು. ಆದರೆ, ತನ್ನ ಉದ್ದೇಶ ಈಡೇರಿದಂತಾಗಿದೆ ಎಂದು ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ.</p>.<p>15 ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳಾಗಿವೆ. ಪಾಕಿಸ್ತಾನವು ಮಂಡಳಿಯ ಕಾಯಂ ಅಲ್ಲದ ಸದಸ್ಯ ರಾಷ್ಟ್ರ.</p>.<p>ಮೇ ತಿಂಗಳಿಗೆ ಸಂಬಂಧಿಸಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನವನ್ನು ಗ್ರೀಸ್ ದೇಶ ವಹಿಸಿಕೊಂಡಿದೆ. ಪಾಕಿಸ್ತಾನದ ಮನವಿ ಮೇರೆಗೆ ಗ್ರೀಸ್ ಈ ಸಭೆ ಕರೆದಿತ್ತು.</p>.<p>‘ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಸಭೆಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಯಿತು. ಈ ದುಷ್ಕೃತ್ಯಕ್ಕೆ ಸಂಬಂಧಿಸಿ ಹೊಣೆಗಾರಿಕೆ ನಿಗದಿ ಮಾಡಬೇಕು ಎನ್ನುವ ಅಭಿಪ್ರಾಯವೂ ವ್ಯಕ್ತವಾಯಿತು’ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.</p>.<p>‘ಈ ಔಪಚಾರಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಪಾಕಿಸ್ತಾನಕ್ಕೆ ಹಲವು ಕಠಿಣ ಪ್ರಶ್ನೆಗಳನ್ನು ಕೇಳಿದರು. ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದರು’ ಎಂದು ಈ ಮೂಲಗಳು ಹೇಳಿವೆ.</p>.<p>ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಂತರ ಉದ್ಭವಿಸಿರುವ ಪರಿಸ್ಥಿತಿ ಕುರಿತು ಟುನಿಷಿಯಾದ ಖಾಲಿದ್ ಮೊಹಮದ್ ಖಿಯಾರಿ ಅವರು ಭದ್ರತಾ ಮಂಡಳಿ ಸಭೆಗೆ ಮಾಹಿತಿ ನೀಡಿದರು.</p>.<p>ಖಿಯಾರಿ ಅವರು ಮಧ್ಯಪ್ರಾಚ್ಯ, ಏಷ್ಯಾ ಹಾಗೂ ಪೆಸಿಫಿಕ್ ರಾಷ್ಟ್ರಗಳಿಗೆ ಸಂಬಂಧಿಸಿದ ರಾಜಕೀಯ ಹಾಗೂ ಶಾಂತಿಸ್ಥಾಪನೆ ಕುರಿತ ಕಾರ್ಯಾಚರಣೆ ವಿಭಾಗದ ಸಹಾಯಕ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.</p>.<p>ಸಭೆ ಬಳಿಕ ಮಾತನಾಡಿದ ಅವರು, ‘ಈ ಬಿಕ್ಕಟ್ಟನ್ನು ಮಾತುಕತೆ ಹಾಗೂ ಶಾಂತಿಯುತ ಮಾರ್ಗದ ಮೂಲಕ ಬಗೆಹರಿಸಿಕೊಳ್ಳುವಂತೆ ಭಾರತ ಮತ್ತು ಪಾಕಿಸ್ತಾನಕ್ಕೆ ಸಲಹೆ ನೀಡಲಾಗಿದೆ. ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್</strong>: ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ವಿಚಾರವು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಈ ಕುರಿತು ಮಂಡಳಿಯ ಸದಸ್ಯ ರಾಷ್ಟ್ರಗಳು ಕಠಿಣ ಪ್ರಶ್ನೆಗಳನ್ನು ಕೇಳುವ ಮೂಲಕ ಪಾಕಿಸ್ತಾನವನ್ಜು ತರಾಟೆಗೆ ತೆಗೆದುಕೊಂಡಿವೆ.</p>.<p>26 ಜನರನ್ನು ಬಲಿ ತೆಗೆದುಕೊಂಡ ಈ ದಾಳಿಗೆ ಜಾಗತಿಕವಾಗಿ ಖಂಡನೆ ವ್ಯಕ್ತವಾಗಿರುವ ಜೊತೆಗೆ, ಈಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕೂಡ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿರುವುದು ಗಮನಾರ್ಹ.</p>.<p>ಮುಖ್ಯ ಸಭಾಂಗಣದ ಬದಲಾಗಿ ಸಮಾಲೋಚನೆಗೆ ಮೀಸಲಾದ ಕೊಠಡಿಯೊಂದರಲ್ಲಿ ಮಂಡಳಿಯ ಸಭೆ ನಡೆದಿದೆ. ಪಹಲ್ಗಾಮ್ನಲ್ಲಿ ನಡೆದ ದಾಳಿಗೆ ಸಂಬಂಧಿಸಿ ಮಂಡಳಿಯ ಸದಸ್ಯ ರಾಷ್ಟ್ರಗಳು ತನಗೆ ಅನುಕೂಲಕರವಾದ ನಿಲುವು ಪ್ರಕಟಿಸಬೇಕು ಎಂಬ ದೃಷ್ಟಿಯಿಂದ ಪಾಕಿಸ್ತಾನ ನಡೆಸಿದ ಪ್ರಯತ್ನವು ಫಲ ನೀಡಿಲ್ಲ.</p>.<p>ಸಭೆ ಬಳಿಕ ಭದ್ರತಾ ಮಂಡಳಿಯು ಈ ವಿಚಾರವಾಗಿ ಹೇಳಿಕೆ ಬಿಡುಗಡೆ ಮಾಡಲು ನಿರಾಕರಿಸಿತು. ಆದರೆ, ತನ್ನ ಉದ್ದೇಶ ಈಡೇರಿದಂತಾಗಿದೆ ಎಂದು ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ.</p>.<p>15 ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳಾಗಿವೆ. ಪಾಕಿಸ್ತಾನವು ಮಂಡಳಿಯ ಕಾಯಂ ಅಲ್ಲದ ಸದಸ್ಯ ರಾಷ್ಟ್ರ.</p>.<p>ಮೇ ತಿಂಗಳಿಗೆ ಸಂಬಂಧಿಸಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನವನ್ನು ಗ್ರೀಸ್ ದೇಶ ವಹಿಸಿಕೊಂಡಿದೆ. ಪಾಕಿಸ್ತಾನದ ಮನವಿ ಮೇರೆಗೆ ಗ್ರೀಸ್ ಈ ಸಭೆ ಕರೆದಿತ್ತು.</p>.<p>‘ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಸಭೆಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಯಿತು. ಈ ದುಷ್ಕೃತ್ಯಕ್ಕೆ ಸಂಬಂಧಿಸಿ ಹೊಣೆಗಾರಿಕೆ ನಿಗದಿ ಮಾಡಬೇಕು ಎನ್ನುವ ಅಭಿಪ್ರಾಯವೂ ವ್ಯಕ್ತವಾಯಿತು’ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.</p>.<p>‘ಈ ಔಪಚಾರಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಪಾಕಿಸ್ತಾನಕ್ಕೆ ಹಲವು ಕಠಿಣ ಪ್ರಶ್ನೆಗಳನ್ನು ಕೇಳಿದರು. ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದರು’ ಎಂದು ಈ ಮೂಲಗಳು ಹೇಳಿವೆ.</p>.<p>ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಂತರ ಉದ್ಭವಿಸಿರುವ ಪರಿಸ್ಥಿತಿ ಕುರಿತು ಟುನಿಷಿಯಾದ ಖಾಲಿದ್ ಮೊಹಮದ್ ಖಿಯಾರಿ ಅವರು ಭದ್ರತಾ ಮಂಡಳಿ ಸಭೆಗೆ ಮಾಹಿತಿ ನೀಡಿದರು.</p>.<p>ಖಿಯಾರಿ ಅವರು ಮಧ್ಯಪ್ರಾಚ್ಯ, ಏಷ್ಯಾ ಹಾಗೂ ಪೆಸಿಫಿಕ್ ರಾಷ್ಟ್ರಗಳಿಗೆ ಸಂಬಂಧಿಸಿದ ರಾಜಕೀಯ ಹಾಗೂ ಶಾಂತಿಸ್ಥಾಪನೆ ಕುರಿತ ಕಾರ್ಯಾಚರಣೆ ವಿಭಾಗದ ಸಹಾಯಕ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.</p>.<p>ಸಭೆ ಬಳಿಕ ಮಾತನಾಡಿದ ಅವರು, ‘ಈ ಬಿಕ್ಕಟ್ಟನ್ನು ಮಾತುಕತೆ ಹಾಗೂ ಶಾಂತಿಯುತ ಮಾರ್ಗದ ಮೂಲಕ ಬಗೆಹರಿಸಿಕೊಳ್ಳುವಂತೆ ಭಾರತ ಮತ್ತು ಪಾಕಿಸ್ತಾನಕ್ಕೆ ಸಲಹೆ ನೀಡಲಾಗಿದೆ. ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ಇದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>