<p><strong>ಇಸ್ಲಾಮಾಬಾದ್:</strong> ಜಮ್ಮು–ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ‘ಕಾನೂನುಬದ್ಧ ಹೋರಾಟ’ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಬಣ್ಣಿಸಿದ್ದಾರೆ. ಅಲ್ಲದೇ, ಪಾಕಿಸ್ತಾನ ಎಂದಿಗೂ ಕಣಿವೆಯ ಜನರ ಪರವಾಗಿರಲಿದೆ ಎಂದೂ ಪ್ರತಿಪಾದಿಸಿದ್ದಾರೆ. </p>.<p>ಕರಾಚಿಯಲ್ಲಿರುವ ಪಾಕಿಸ್ತಾನದ ನೌಕಾಪಡೆ ಅಕಾಡೆಮಿಯ ಕಾರ್ಯಕ್ರಮವೊಂದರಲ್ಲಿ ಮುನೀರ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿ, ‘ಭಾರತ ಯಾವುದನ್ನು ಭಯೋತ್ಪಾದನೆ ಎಂದು ಹೇಳುತ್ತಿದೆಯೋ ವಾಸ್ತವದಲ್ಲಿ ಅದು ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ ಕಾನೂನುಬದ್ಧ ಹೋರಾಟವಾಗಿದೆ. ಕಾಶ್ಮೀರದ ಜನರ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿರುವವರೇ ಈ ಹೋರಾಟ ಮತ್ತಷ್ಟು ಉಲ್ಬಣಗೊಳ್ಳಲು ಕಾರಣರಾಗಿದ್ದಾರೆ’ ಎಂದು ಹೇಳಿದ್ದಾರೆ. </p>.<p class="title">ಅಲ್ಲದೇ, ಕಾಶ್ಮೀರವನ್ನು ಪಾಕಿಸ್ತಾನದ ಜೀವನಾಡಿ ಎಂದು ಬಣ್ಣಿಸಿರುವ ಮುನೀರ್, ‘ಭಾರತ ಭವಿಷ್ಯದಲ್ಲಿ ಪಾಕಿಸ್ತಾನದ ವಿರುದ್ಧ ಯಾವುದೇ ದಾಳಿ ನಡೆಸಿದರೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ಜಮ್ಮು–ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ‘ಕಾನೂನುಬದ್ಧ ಹೋರಾಟ’ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಬಣ್ಣಿಸಿದ್ದಾರೆ. ಅಲ್ಲದೇ, ಪಾಕಿಸ್ತಾನ ಎಂದಿಗೂ ಕಣಿವೆಯ ಜನರ ಪರವಾಗಿರಲಿದೆ ಎಂದೂ ಪ್ರತಿಪಾದಿಸಿದ್ದಾರೆ. </p>.<p>ಕರಾಚಿಯಲ್ಲಿರುವ ಪಾಕಿಸ್ತಾನದ ನೌಕಾಪಡೆ ಅಕಾಡೆಮಿಯ ಕಾರ್ಯಕ್ರಮವೊಂದರಲ್ಲಿ ಮುನೀರ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿ, ‘ಭಾರತ ಯಾವುದನ್ನು ಭಯೋತ್ಪಾದನೆ ಎಂದು ಹೇಳುತ್ತಿದೆಯೋ ವಾಸ್ತವದಲ್ಲಿ ಅದು ಸ್ವಾತಂತ್ರ್ಯಕ್ಕಾಗಿ ನಡೆಯುತ್ತಿರುವ ಕಾನೂನುಬದ್ಧ ಹೋರಾಟವಾಗಿದೆ. ಕಾಶ್ಮೀರದ ಜನರ ಧ್ವನಿ ಹತ್ತಿಕ್ಕಲು ಪ್ರಯತ್ನಿಸುತ್ತಿರುವವರೇ ಈ ಹೋರಾಟ ಮತ್ತಷ್ಟು ಉಲ್ಬಣಗೊಳ್ಳಲು ಕಾರಣರಾಗಿದ್ದಾರೆ’ ಎಂದು ಹೇಳಿದ್ದಾರೆ. </p>.<p class="title">ಅಲ್ಲದೇ, ಕಾಶ್ಮೀರವನ್ನು ಪಾಕಿಸ್ತಾನದ ಜೀವನಾಡಿ ಎಂದು ಬಣ್ಣಿಸಿರುವ ಮುನೀರ್, ‘ಭಾರತ ಭವಿಷ್ಯದಲ್ಲಿ ಪಾಕಿಸ್ತಾನದ ವಿರುದ್ಧ ಯಾವುದೇ ದಾಳಿ ನಡೆಸಿದರೂ ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>