<p><strong>ಇಸ್ಲಾಮಾಬಾದ್</strong>: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ಯಾರಾ ಮಿಲಿಟರಿ ಪಡೆಯ ನಾಲ್ವರು ಯೋಧರು, ಇಬ್ಬರು ಪೊಲೀಸರು ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ನೂರಕ್ಕೂ ಅಧಿಕ ಯೋಧರು ಗಾಯಗೊಂಡಿದ್ದಾರೆ.</p><p>ಉದ್ರಿಕ್ತ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜಧಾನಿಗೆ ಸೇನೆಯನ್ನು ನಿಯೋಜಿಸಿದ್ದು ಕಂಡಲ್ಲಿ ಗುಂಡಿಕ್ಕಲು ಆದೇಶಿಸಲಾಗಿದೆ.</p><p>ಜೈಲಿನಲ್ಲಿರುವ ಇಮ್ರಾನ್ ಖಾನ್ ಬಿಡುಗಡೆಗೆ ಆಗ್ರಹಿಸಿ ಪಾಕಿಸ್ತಾನ್ ತೆಹ್ರೀಕ್–ಎ–ಇನ್ಸಾಫ್ (ಪಿಟಿಐ) ಪಕ್ಷದ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಹಿಂಸಾಚಾರ ಭುಗಿಲೆದ್ದಿದೆ. </p><p>ಇಸ್ಲಾಮಾಬಾದ್ನ ಶ್ರೀನಗರ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾಕಿಸ್ತಾನದ ನಾಲ್ವರು ರೇಂಜರ್ಸ್ಗಳು ಮೃತಪಟ್ಟಿದ್ದಾರೆ. ಐವರು ರೇಂಜರ್ಸ್ಗಳು ಹಾಗೂ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ರೇಡಿಯೊ ಪಾಕಿಸ್ತಾನ ತಿಳಿಸಿದೆ.</p><p>ಈ ಸ್ಥಳದಿಂದ ಸುಮಾರು ಐದು ಕಿ.ಮೀ. ದೂರದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಹೊಂದಿದ್ದ ದುಷ್ಕರ್ಮಿಗಳು ರೇಂಜರ್ಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.</p><p>ರಾವಲ್ಪಿಂಡಿಯ ಚುಂಗಿ ನಂಬರ್ 26ರಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ರೇಡಿಯೊ ಪಾಕಿಸ್ತಾನ ತಿಳಿಸಿದೆ. ಈ ಘಟನೆಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ. ಆದರೆ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.</p><p>ಇಸ್ಲಾಮಾಬಾದ್ ಹೊರವಲಯದ ಹಕ್ಲಾ ಇಂಟರ್ಚೇಂಜ್ನಲ್ಲಿ ಪ್ರತಿಭಟನಕಾರರೊಂದಿಗೆ ಸೋಮವಾರ ನಡೆದ ಘರ್ಷಣೆಯಲ್ಲಿ ಪೊಲೀಸರೊಬ್ಬರು ಮೃತಪಟ್ಟಿದ್ದಾರೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಆದರೆ, ಮತ್ತೊಬ್ಬ ಪೊಲೀಸ್ ಸಾವಿನ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.</p><p><strong>ಚಿಂತಾಜನಕ</strong>: ‘ಪ್ರತಿಭಟನಕಾರರು ತೂರಿದ ಕಲ್ಲು ಹಿರಿಯ ಪೊಲೀಸ್ ಅಧಿಕಾರಿ ತಲೆಗೆ ತಗುಲಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಗೃಹ ಸಚಿವ ಮೊಹ್ಸಿನ್ ನಖ್ವಿ ತಿಳಿಸಿದ್ದಾರೆ.</p>.<h2>‘ಅಧಿಕಾರಿಗಳಿಂದ ಹಿಂಸಾಚಾರ’</h2><p>‘ತಮ್ಮ ಕಾರ್ಯಕರ್ತರ ವಿರುದ್ಧ ಅಧಿಕಾರಿಗಳು ಹಿಂಸಾಚಾರ ನಡೆಸುತ್ತಿದ್ದಾರೆ’ ಎಂದು ಪಿಟಿಐ ಆರೋಪಿಸಿದೆ. ‘ಕನಿಷ್ಠ ಇಬ್ಬರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ’ ಎಂದು ಪಿಟಿಐ ವಕ್ತಾರರು ಬಿಬಿಸಿ ಉರ್ದುಗೆ ತಿಳಿಸಿದ್ದಾರೆ. ಆದರೆ ಇದು ಇತರ ಮೂಲಗಳಿಂದ ದೃಢಪಟ್ಟಿಲ್ಲ.</p>.<div><blockquote>ಕೆಟ್ಟ ರಾಜಕೀಯ ಕಾರ್ಯಸೂಚಿಗಾಗಿ ರಕ್ತಪಾತವು ಸ್ವೀಕಾರರ್ಹವಲ್ಲ. ರೇಂಜರ್ಸ್ ಪೊಲೀಸರ ಮೇಲಿನ ದಾಳಿ ಖಂಡನೀಯ. </blockquote><span class="attribution">–ಶೆಹಬಾಜ್ ಷರೀಪ್, ಪಾಕಿಸ್ತಾನದ ಪ್ರಧಾನಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ಯಾರಾ ಮಿಲಿಟರಿ ಪಡೆಯ ನಾಲ್ವರು ಯೋಧರು, ಇಬ್ಬರು ಪೊಲೀಸರು ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ನೂರಕ್ಕೂ ಅಧಿಕ ಯೋಧರು ಗಾಯಗೊಂಡಿದ್ದಾರೆ.</p><p>ಉದ್ರಿಕ್ತ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜಧಾನಿಗೆ ಸೇನೆಯನ್ನು ನಿಯೋಜಿಸಿದ್ದು ಕಂಡಲ್ಲಿ ಗುಂಡಿಕ್ಕಲು ಆದೇಶಿಸಲಾಗಿದೆ.</p><p>ಜೈಲಿನಲ್ಲಿರುವ ಇಮ್ರಾನ್ ಖಾನ್ ಬಿಡುಗಡೆಗೆ ಆಗ್ರಹಿಸಿ ಪಾಕಿಸ್ತಾನ್ ತೆಹ್ರೀಕ್–ಎ–ಇನ್ಸಾಫ್ (ಪಿಟಿಐ) ಪಕ್ಷದ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಹಿಂಸಾಚಾರ ಭುಗಿಲೆದ್ದಿದೆ. </p><p>ಇಸ್ಲಾಮಾಬಾದ್ನ ಶ್ರೀನಗರ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾಕಿಸ್ತಾನದ ನಾಲ್ವರು ರೇಂಜರ್ಸ್ಗಳು ಮೃತಪಟ್ಟಿದ್ದಾರೆ. ಐವರು ರೇಂಜರ್ಸ್ಗಳು ಹಾಗೂ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ರೇಡಿಯೊ ಪಾಕಿಸ್ತಾನ ತಿಳಿಸಿದೆ.</p><p>ಈ ಸ್ಥಳದಿಂದ ಸುಮಾರು ಐದು ಕಿ.ಮೀ. ದೂರದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಹೊಂದಿದ್ದ ದುಷ್ಕರ್ಮಿಗಳು ರೇಂಜರ್ಸ್ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.</p><p>ರಾವಲ್ಪಿಂಡಿಯ ಚುಂಗಿ ನಂಬರ್ 26ರಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ರೇಡಿಯೊ ಪಾಕಿಸ್ತಾನ ತಿಳಿಸಿದೆ. ಈ ಘಟನೆಯಲ್ಲಿ ಇಬ್ಬರು ಪೊಲೀಸರು ಮೃತಪಟ್ಟಿದ್ದಾರೆ. ಆದರೆ, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.</p><p>ಇಸ್ಲಾಮಾಬಾದ್ ಹೊರವಲಯದ ಹಕ್ಲಾ ಇಂಟರ್ಚೇಂಜ್ನಲ್ಲಿ ಪ್ರತಿಭಟನಕಾರರೊಂದಿಗೆ ಸೋಮವಾರ ನಡೆದ ಘರ್ಷಣೆಯಲ್ಲಿ ಪೊಲೀಸರೊಬ್ಬರು ಮೃತಪಟ್ಟಿದ್ದಾರೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಆದರೆ, ಮತ್ತೊಬ್ಬ ಪೊಲೀಸ್ ಸಾವಿನ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.</p><p><strong>ಚಿಂತಾಜನಕ</strong>: ‘ಪ್ರತಿಭಟನಕಾರರು ತೂರಿದ ಕಲ್ಲು ಹಿರಿಯ ಪೊಲೀಸ್ ಅಧಿಕಾರಿ ತಲೆಗೆ ತಗುಲಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದು ಅವರ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಗೃಹ ಸಚಿವ ಮೊಹ್ಸಿನ್ ನಖ್ವಿ ತಿಳಿಸಿದ್ದಾರೆ.</p>.<h2>‘ಅಧಿಕಾರಿಗಳಿಂದ ಹಿಂಸಾಚಾರ’</h2><p>‘ತಮ್ಮ ಕಾರ್ಯಕರ್ತರ ವಿರುದ್ಧ ಅಧಿಕಾರಿಗಳು ಹಿಂಸಾಚಾರ ನಡೆಸುತ್ತಿದ್ದಾರೆ’ ಎಂದು ಪಿಟಿಐ ಆರೋಪಿಸಿದೆ. ‘ಕನಿಷ್ಠ ಇಬ್ಬರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ’ ಎಂದು ಪಿಟಿಐ ವಕ್ತಾರರು ಬಿಬಿಸಿ ಉರ್ದುಗೆ ತಿಳಿಸಿದ್ದಾರೆ. ಆದರೆ ಇದು ಇತರ ಮೂಲಗಳಿಂದ ದೃಢಪಟ್ಟಿಲ್ಲ.</p>.<div><blockquote>ಕೆಟ್ಟ ರಾಜಕೀಯ ಕಾರ್ಯಸೂಚಿಗಾಗಿ ರಕ್ತಪಾತವು ಸ್ವೀಕಾರರ್ಹವಲ್ಲ. ರೇಂಜರ್ಸ್ ಪೊಲೀಸರ ಮೇಲಿನ ದಾಳಿ ಖಂಡನೀಯ. </blockquote><span class="attribution">–ಶೆಹಬಾಜ್ ಷರೀಪ್, ಪಾಕಿಸ್ತಾನದ ಪ್ರಧಾನಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>