<p><strong>ಇಸ್ಲಾಮಾಬಾದ್</strong>: 2023ರ ಮಾರ್ಚ್ 9ರಂದು ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳನ್ನು ಎಸಗಿದ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರೀಕ್–ಎ–ಇನ್ಸಾಫ್ (ಪಿಟಿಐ) ಪಕ್ಷದ ನಾಯಕರು ಹಾಗೂ ಬೆಂಬಲಿಗರು ಸೇರಿ 47 ಮಂದಿಗೆ ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ತಲಾ 10 ವರ್ಷ ಜೈಲು ಹಾಗೂ 5 ಲಕ್ಷ ಪಾಕಿಸ್ತಾನ ರೂಪಾಯಿ ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ. </p>.<p>ಪಕ್ಷದ ಮುಖ್ಯಸ್ಥ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನ ವಿರೋಧಿಸಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಸಾರ್ವಜನಿಕ ಆಸ್ತಿಗಳನ್ನು ಧ್ವಂಸ ಮಾಡಲಾಗಿತ್ತು. ಬೆಂಕಿ ಹಚ್ಚುವುದು, ಮುತ್ತಿಗೆ ಹಾಕುವುದು ಹಾಗೂ ಪೊಲೀಸರ ಮೇಲೆ ದಾಳಿ ಮಾಡುವುದು ಸೇರಿದಂತೆ ಹಲವು ಕೃತ್ಯಗಳನ್ನು ಎಸಗಲಾಗಿತ್ತು. </p>.<p>ರಾವಲ್ಪಿಂಡಿ ನ್ಯಾಯಾಲಯದ ನ್ಯಾಯಧೀಶರಾದ ಅಮ್ಜದ್ ಅಲಿ ಶಾ ಅವರು, ಅಪರಾಧಿಗಳ ಚರ ಮತ್ತು ಸ್ತಿರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ತೀರ್ಪು ಪ್ರಕಟಿಸಿದರು. 47 ಮಂದಿಯನ್ನು ಈಗಾಗಲೇ ಅಪರಾಧಿಗಳೆಂದು ಘೋಷಿಸಲಾಗಿತ್ತು. ದಂಡ ಪಾವತಿಸದಿದ್ದರೆ ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. </p>.<p>ಪ್ರತಿಭಟನೆಯಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಈ 47 ಮಂದಿ ಪಿತೂರಿ ನಡೆಸಿದ್ದಾರೆ ಎಂದು ಜಂಟಿ ತನಿಖಾ ತಂಡವು ವರದಿ ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: 2023ರ ಮಾರ್ಚ್ 9ರಂದು ನಡೆದ ಪ್ರತಿಭಟನೆಯಲ್ಲಿ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳನ್ನು ಎಸಗಿದ ಪ್ರಕರಣದಲ್ಲಿ ಪಾಕಿಸ್ತಾನ ತೆಹ್ರೀಕ್–ಎ–ಇನ್ಸಾಫ್ (ಪಿಟಿಐ) ಪಕ್ಷದ ನಾಯಕರು ಹಾಗೂ ಬೆಂಬಲಿಗರು ಸೇರಿ 47 ಮಂದಿಗೆ ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು ತಲಾ 10 ವರ್ಷ ಜೈಲು ಹಾಗೂ 5 ಲಕ್ಷ ಪಾಕಿಸ್ತಾನ ರೂಪಾಯಿ ದಂಡ ವಿಧಿಸಿ ಶನಿವಾರ ತೀರ್ಪು ನೀಡಿದೆ. </p>.<p>ಪಕ್ಷದ ಮುಖ್ಯಸ್ಥ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಂಧನ ವಿರೋಧಿಸಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ದೇಶದಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಸಾರ್ವಜನಿಕ ಆಸ್ತಿಗಳನ್ನು ಧ್ವಂಸ ಮಾಡಲಾಗಿತ್ತು. ಬೆಂಕಿ ಹಚ್ಚುವುದು, ಮುತ್ತಿಗೆ ಹಾಕುವುದು ಹಾಗೂ ಪೊಲೀಸರ ಮೇಲೆ ದಾಳಿ ಮಾಡುವುದು ಸೇರಿದಂತೆ ಹಲವು ಕೃತ್ಯಗಳನ್ನು ಎಸಗಲಾಗಿತ್ತು. </p>.<p>ರಾವಲ್ಪಿಂಡಿ ನ್ಯಾಯಾಲಯದ ನ್ಯಾಯಧೀಶರಾದ ಅಮ್ಜದ್ ಅಲಿ ಶಾ ಅವರು, ಅಪರಾಧಿಗಳ ಚರ ಮತ್ತು ಸ್ತಿರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ತೀರ್ಪು ಪ್ರಕಟಿಸಿದರು. 47 ಮಂದಿಯನ್ನು ಈಗಾಗಲೇ ಅಪರಾಧಿಗಳೆಂದು ಘೋಷಿಸಲಾಗಿತ್ತು. ದಂಡ ಪಾವತಿಸದಿದ್ದರೆ ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ. </p>.<p>ಪ್ರತಿಭಟನೆಯಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಈ 47 ಮಂದಿ ಪಿತೂರಿ ನಡೆಸಿದ್ದಾರೆ ಎಂದು ಜಂಟಿ ತನಿಖಾ ತಂಡವು ವರದಿ ನೀಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>