ಲಾಹೋರ್: 2008ರ ಮುಂಬೈ ದಾಳಿಯಲ್ಲಿ ಪಾಕಿಸ್ತಾನದವರು ಭಾಗಿಯಾಗಿದ್ದಾರೆಂದು ಹೇಳಿಕೆ ನೀಡಿದ ಪದಚ್ಯುತ ಪ್ರಧಾನಿ ನವಾಜ್ ಶರೀಫ್ ವಿರುದ್ಧದ ದೇಶದ್ರೋಹ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಲಾಹೋರ್ ಹೈಕೋರ್ಟ್, ಇದೇ 22ರೊಳಗೆ ಲಿಖಿತ ಪ್ರತಿಕ್ರಿಯೆ ಸಲ್ಲಿಸುವಂತೆ ಪಾಕಿಸ್ತಾನ ಸರ್ಕಾರಕ್ಕೆ ಸೋಮವಾರ ನಿರ್ದೇಶನ ನೀಡಿದೆ.