<p><strong>ಇಸ್ಲಾಮಾಬಾದ್</strong>: ತಮ್ಮ ನಡುವಿನ ವಿವಾದಾತ್ಮಕ ವಿಷಯಗಳನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ಮುಂದಾಗಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಡಾರ್ ಕರೆ ನೀಡಿದ್ದಾರೆ. </p>.<p>ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಭಯೋತ್ಪಾದನೆಯ ವಿಷಯದ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಾಗಿ ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.</p>.<p class="bodytext">ಪಾಕಿಸ್ತಾನದ ಸೆನೆಟ್ ಅನ್ನು ಉದ್ದೇಶಿಸಿ ಮಾತನಾಡಿದ ಡಾರ್, ‘ಭಾರತದ ಜತೆ ಮಾತುಕತೆ ನಡೆಸುತ್ತೇವೆ ಎಂದು ನಾವು ಜಗತ್ತಿಗೆ ತಿಳಿಸಿದ್ದೇವೆ’ ಎಂದರು. </p>.<p class="bodytext">ಉಭಯ ದೇಶಗಳ ನಡುವೆ ಸಮಸ್ಯೆಗೆ ಕಾರಣವಾಗಿರುವ ಎಂಟು ವಿಷಯಗಳ ಕುರಿತ ‘ಸಂಯುಕ್ತ ಮಾತುಕತೆ’ಯನ್ನು ಪರ್ವೇಜ್ ಮುಷರಫ್ ಅವರು ಅಧಿಕಾರದಲ್ಲಿದ್ದಾಗ 2003ರಲ್ಲಿ ಆರಂಭಿಸಿದ್ದರು. ಆದರೆ 2008ರ ಮುಂಬೈ ಮೇಲಿನ ದಾಳಿಯ ಬಳಿಕ ಈ ಮಾತುಕತೆ ಹಳಿತಪ್ಪಿತ್ತು. ಆ ಬಳಿಕ ಮಾತುಕತೆಯನ್ನು ಪೂರ್ಣ ಪ್ರಮಾಣದಲ್ಲಿ ಪುನರಾರಂಭಿಸಲು ಆಗಿಲ್ಲ.</p>.<p>‘ಭಾರತದ ಜತೆಗಿನ ಕದನ ವಿರಾಮವನ್ನು ಮೇ 18ರವರೆಗೆ ವಿಸ್ತರಿಸಲಾಗಿದೆ. ಉಭಯ ದೇಶಗಳ ನಡುವಿನ ವಿವಾದ ಬಗೆಹರಿಯಬೇಕಾದರೆ ರಾಜಕೀಯ ಮಾತುಕತೆ ನಡೆಯಬೇಕು’ ಎಂದು ಪಾಕಿಸ್ತಾನದ ಉಪ ಪ್ರಧಾನಿಯೂ ಆಗಿರುವ ಅವರು ಹೇಳಿದರು.</p>.<p>ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕರು (ಡಿಜಿಎಂಒ) ಕದನ ವಿರಾಮ ಒಪ್ಪಂದ ಕುರಿತು ಮೇ 18ರಂದು ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದರು.</p>.<p class="bodytext">ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿರಿಸಿ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ತಡೆದರೆ ಅದನ್ನು ‘ಯುದ್ಧಕ್ಕೆ ಸಮನಾದ ಕೃತ್ಯ’ಎಂದು ಪರಿಗಣಿಸುವುದಾಗಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ತಮ್ಮ ನಡುವಿನ ವಿವಾದಾತ್ಮಕ ವಿಷಯಗಳನ್ನು ಬಗೆಹರಿಸಲು ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ಮುಂದಾಗಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ಡಾರ್ ಕರೆ ನೀಡಿದ್ದಾರೆ. </p>.<p>ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಭಯೋತ್ಪಾದನೆಯ ವಿಷಯದ ಬಗ್ಗೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಾಗಿ ಭಾರತ ಈಗಾಗಲೇ ಸ್ಪಷ್ಟಪಡಿಸಿದೆ.</p>.<p class="bodytext">ಪಾಕಿಸ್ತಾನದ ಸೆನೆಟ್ ಅನ್ನು ಉದ್ದೇಶಿಸಿ ಮಾತನಾಡಿದ ಡಾರ್, ‘ಭಾರತದ ಜತೆ ಮಾತುಕತೆ ನಡೆಸುತ್ತೇವೆ ಎಂದು ನಾವು ಜಗತ್ತಿಗೆ ತಿಳಿಸಿದ್ದೇವೆ’ ಎಂದರು. </p>.<p class="bodytext">ಉಭಯ ದೇಶಗಳ ನಡುವೆ ಸಮಸ್ಯೆಗೆ ಕಾರಣವಾಗಿರುವ ಎಂಟು ವಿಷಯಗಳ ಕುರಿತ ‘ಸಂಯುಕ್ತ ಮಾತುಕತೆ’ಯನ್ನು ಪರ್ವೇಜ್ ಮುಷರಫ್ ಅವರು ಅಧಿಕಾರದಲ್ಲಿದ್ದಾಗ 2003ರಲ್ಲಿ ಆರಂಭಿಸಿದ್ದರು. ಆದರೆ 2008ರ ಮುಂಬೈ ಮೇಲಿನ ದಾಳಿಯ ಬಳಿಕ ಈ ಮಾತುಕತೆ ಹಳಿತಪ್ಪಿತ್ತು. ಆ ಬಳಿಕ ಮಾತುಕತೆಯನ್ನು ಪೂರ್ಣ ಪ್ರಮಾಣದಲ್ಲಿ ಪುನರಾರಂಭಿಸಲು ಆಗಿಲ್ಲ.</p>.<p>‘ಭಾರತದ ಜತೆಗಿನ ಕದನ ವಿರಾಮವನ್ನು ಮೇ 18ರವರೆಗೆ ವಿಸ್ತರಿಸಲಾಗಿದೆ. ಉಭಯ ದೇಶಗಳ ನಡುವಿನ ವಿವಾದ ಬಗೆಹರಿಯಬೇಕಾದರೆ ರಾಜಕೀಯ ಮಾತುಕತೆ ನಡೆಯಬೇಕು’ ಎಂದು ಪಾಕಿಸ್ತಾನದ ಉಪ ಪ್ರಧಾನಿಯೂ ಆಗಿರುವ ಅವರು ಹೇಳಿದರು.</p>.<p>ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕರು (ಡಿಜಿಎಂಒ) ಕದನ ವಿರಾಮ ಒಪ್ಪಂದ ಕುರಿತು ಮೇ 18ರಂದು ಮತ್ತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದರು.</p>.<p class="bodytext">ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿರಿಸಿ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ತಡೆದರೆ ಅದನ್ನು ‘ಯುದ್ಧಕ್ಕೆ ಸಮನಾದ ಕೃತ್ಯ’ಎಂದು ಪರಿಗಣಿಸುವುದಾಗಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>