<p><strong>ಇಸ್ಲಾಮಾಬಾದ್:</strong> ‘ಕೋವಿಡ್ ಹಿನ್ನೆಲೆಯಲ್ಲಿಮತ್ತೊಮ್ಮೆ ಶಾಲೆ, ಕಾಲೇಜುಗಳನ್ನು ಮುಚ್ಚುವ ಆಲೋಚನೆಯೇ ಇಲ್ಲ’ ಎಂದು ಪಾಕಿಸ್ತಾನದ ಶಿಕ್ಷಣ ಸಚಿವ ಶಫಾಕತ್ ಮಹಮೂದ್ ಗುರುವಾರ ಸ್ಪಷ್ಟಪಡಿಸಿದ್ದಾರೆ.</p>.<p>ಚಳಿಗಾಲದಲ್ಲಿ ವೇಗವಾಗಿ ಸೋಂಕು ಪಸರಿಸುವ ಸಾಧ್ಯತೆ ಇದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ಎಚ್ಚರಿಸಿದ್ದರು.</p>.<p>ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ ಸುಮಾರು ಆರು ತಿಂಗಳ ಕಾಲ ಶಿಕ್ಷಣ ಸಂಸ್ಥೆಗಳಿಗೆ ಬೀಗ ಹಾಕಲಾಗಿತ್ತು. ಹಲವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಳೆದ ತಿಂಗಳು ಶಾಲೆ ಹಾಗೂ ಕಾಲೇಜುಗಳನ್ನು ಪುನರಾರಂಭಿಸುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು.</p>.<p>‘ಅಲ್ಲಾಹುವಿನ ಕೃಪೆಯಿಂದಾಗಿ ನಮ್ಮ ಮಕ್ಕಳನ್ನು ಮತ್ತೆ ಶಾಲೆಗಳಿಗೆ ಕಳುಹಿಸುವಂತಾಗಿದೆ. ಕೊರೊನಾ ಸೋಂಕಿನ ಭೀತಿಯಿಂದಾಗಿ ಶಾಲೆ, ಕಾಲೇಜುಗಳಿಗೆ ಬೀಗ ಹಾಕಲು ತೀರ್ಮಾನಿಸಲಾಗಿತ್ತು. ಅದೊಂದು ಅತ್ಯುತ್ತಮ ನಿರ್ಧಾರ. ಈಗ ಮತ್ತೊಮ್ಮೆ ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚುವ ಆಲೋಚನೆಯೇ ಇಲ್ಲ’ ಎಂದು ಶಫಾಕತ್ ಹೇಳಿದ್ದಾರೆ.</p>.<p>ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು ಸ್ವಲ್ಪ ಏರಿದೆ ಎಂದು ನ್ಯಾಷನಲ್ ಕಮಾಂಡ್ ಆ್ಯಂಡ್ ಆಪರೇಷನ್ ಸೆಂಟರ್ (ಎನ್ಸಿಒಸಿ) ಗುರುವಾರ ಹೇಳಿತ್ತು. ಹೀಗಾಗಿ ಶಾಲೆ, ಕಾಲೇಜುಗಳನ್ನು ಮುಚ್ಚಲಾಗುತ್ತದೆ ಎಂಬ ಸುದ್ದಿ ಹರಿದಾಡಿತ್ತು. ಶಫಾಕತ್ ಅವರು ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ.</p>.<p>‘ಶುಕ್ರವಾರ ಬೆಳಿಗ್ಗೆ ಎಂಟು ಗಂಟೆವರೆಗಿನ ಹಿಂದಿನ 24 ತಾಸುಗಳಲ್ಲಿ ಹೊಸದಾಗಿ 661 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆಯು 3.17 ಲಕ್ಷಕ್ಕೆ ಏರಿದೆ’ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ಮತ್ತೆ ಎಂಟು ಮಂದಿ ಕೋವಿಡ್ಗೆ ಬಲಿಯಾಗಿರುವುದರಿಂದ ಮೃತರ ಸಂಖ್ಯೆ 6,552ಕ್ಕೆ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ‘ಕೋವಿಡ್ ಹಿನ್ನೆಲೆಯಲ್ಲಿಮತ್ತೊಮ್ಮೆ ಶಾಲೆ, ಕಾಲೇಜುಗಳನ್ನು ಮುಚ್ಚುವ ಆಲೋಚನೆಯೇ ಇಲ್ಲ’ ಎಂದು ಪಾಕಿಸ್ತಾನದ ಶಿಕ್ಷಣ ಸಚಿವ ಶಫಾಕತ್ ಮಹಮೂದ್ ಗುರುವಾರ ಸ್ಪಷ್ಟಪಡಿಸಿದ್ದಾರೆ.</p>.<p>ಚಳಿಗಾಲದಲ್ಲಿ ವೇಗವಾಗಿ ಸೋಂಕು ಪಸರಿಸುವ ಸಾಧ್ಯತೆ ಇದೆ ಎಂದು ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ಎಚ್ಚರಿಸಿದ್ದರು.</p>.<p>ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ ಸುಮಾರು ಆರು ತಿಂಗಳ ಕಾಲ ಶಿಕ್ಷಣ ಸಂಸ್ಥೆಗಳಿಗೆ ಬೀಗ ಹಾಕಲಾಗಿತ್ತು. ಹಲವು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಳೆದ ತಿಂಗಳು ಶಾಲೆ ಹಾಗೂ ಕಾಲೇಜುಗಳನ್ನು ಪುನರಾರಂಭಿಸುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು.</p>.<p>‘ಅಲ್ಲಾಹುವಿನ ಕೃಪೆಯಿಂದಾಗಿ ನಮ್ಮ ಮಕ್ಕಳನ್ನು ಮತ್ತೆ ಶಾಲೆಗಳಿಗೆ ಕಳುಹಿಸುವಂತಾಗಿದೆ. ಕೊರೊನಾ ಸೋಂಕಿನ ಭೀತಿಯಿಂದಾಗಿ ಶಾಲೆ, ಕಾಲೇಜುಗಳಿಗೆ ಬೀಗ ಹಾಕಲು ತೀರ್ಮಾನಿಸಲಾಗಿತ್ತು. ಅದೊಂದು ಅತ್ಯುತ್ತಮ ನಿರ್ಧಾರ. ಈಗ ಮತ್ತೊಮ್ಮೆ ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚುವ ಆಲೋಚನೆಯೇ ಇಲ್ಲ’ ಎಂದು ಶಫಾಕತ್ ಹೇಳಿದ್ದಾರೆ.</p>.<p>ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು ಸ್ವಲ್ಪ ಏರಿದೆ ಎಂದು ನ್ಯಾಷನಲ್ ಕಮಾಂಡ್ ಆ್ಯಂಡ್ ಆಪರೇಷನ್ ಸೆಂಟರ್ (ಎನ್ಸಿಒಸಿ) ಗುರುವಾರ ಹೇಳಿತ್ತು. ಹೀಗಾಗಿ ಶಾಲೆ, ಕಾಲೇಜುಗಳನ್ನು ಮುಚ್ಚಲಾಗುತ್ತದೆ ಎಂಬ ಸುದ್ದಿ ಹರಿದಾಡಿತ್ತು. ಶಫಾಕತ್ ಅವರು ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ.</p>.<p>‘ಶುಕ್ರವಾರ ಬೆಳಿಗ್ಗೆ ಎಂಟು ಗಂಟೆವರೆಗಿನ ಹಿಂದಿನ 24 ತಾಸುಗಳಲ್ಲಿ ಹೊಸದಾಗಿ 661 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದ ಒಟ್ಟು ಸೋಂಕಿತರ ಸಂಖ್ಯೆಯು 3.17 ಲಕ್ಷಕ್ಕೆ ಏರಿದೆ’ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ಮತ್ತೆ ಎಂಟು ಮಂದಿ ಕೋವಿಡ್ಗೆ ಬಲಿಯಾಗಿರುವುದರಿಂದ ಮೃತರ ಸಂಖ್ಯೆ 6,552ಕ್ಕೆ ಹೆಚ್ಚಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>