<p><strong>ಇಸ್ಲಾಮಾಬಾದ್</strong>: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಇದಕ್ಕೆ ಪರಿಹಾರೋಪಾಯವಾಗಿ ಸಂಧಾನ ಸಮಿತಿ ರಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. </p>.<p>ಪ್ರತಿಭಟನೆ ವೇಳೆ ನಡೆದ ಅಹಿತಕರ ಘಟನೆಗಳ ಕುರಿತು ಪಾರದರ್ಶಕ ತನಿಖೆ ನಡೆಸುವಂತೆ ಮತ್ತು ಪ್ರತಿಭಟನಕಾರರೊಂದಿಗೆ ಸಂಯಮ ಮತ್ತು ತಾಳ್ಮೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ.</p>.<p>ಪಾಕಿಸ್ತಾನದಲ್ಲಿ ನೆಲಸಿರುವ ಕಾಶ್ಮೀರಿ ನಿರಾಶ್ರಿತರಿಗೆ ವಿಧಾನಸಭೆಯಲ್ಲಿ ಮೀಸಲಿಟ್ಟಿರುವ 12 ಸ್ಥಾನ ಸ್ಥಾನಗಳನ್ನು ರದ್ದುಪಡಿಸುವುದು ಸೇರಿದಂತೆ 38 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಮ್ಮು ಕಾಶ್ಮೀರ ಜಂಟಿ ಅವಾಮಿ ಆ್ಯಕ್ಷನ್ ಕಮಿಟಿ (ಜೆಕೆಜೆಎಎಸಿ) ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಪ್ರತಿಭಟನೆ ನಡೆಯುತ್ತಿದೆ.</p>.<p class="title">ಈ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಕನಿಷ್ಠ ಆರು ನಾಗರಿಕರು ಮತ್ತು ಮೂರು ಪೊಲೀಸರು ಮೃತಪಟ್ಟಿದ್ದಾರೆ. 172 ಪೊಲೀಸರಿಗೆ ಗಾಯಗಳಾಗಿದ್ದು, ಅದರಲ್ಲಿ 12 ಜನರ ಸ್ಥಿತಿ ಗಂಭೀರವಾಗಿದೆ ಮತ್ತು ಸುಮಾರು 50 ನಾಗರಿಕರಿಗೆ ಗಾಯಗಳಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಹದಗೆಟ್ಟಿರುವ ಕಾನೂನು ಮತ್ತು ಸುವ್ಯವಸ್ಥೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು, ಇದಕ್ಕೆ ಪರಿಹಾರೋಪಾಯವಾಗಿ ಸಂಧಾನ ಸಮಿತಿ ರಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. </p>.<p>ಪ್ರತಿಭಟನೆ ವೇಳೆ ನಡೆದ ಅಹಿತಕರ ಘಟನೆಗಳ ಕುರಿತು ಪಾರದರ್ಶಕ ತನಿಖೆ ನಡೆಸುವಂತೆ ಮತ್ತು ಪ್ರತಿಭಟನಕಾರರೊಂದಿಗೆ ಸಂಯಮ ಮತ್ತು ತಾಳ್ಮೆಯಿಂದ ವರ್ತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಚೇರಿಯ ಹೇಳಿಕೆ ತಿಳಿಸಿದೆ.</p>.<p>ಪಾಕಿಸ್ತಾನದಲ್ಲಿ ನೆಲಸಿರುವ ಕಾಶ್ಮೀರಿ ನಿರಾಶ್ರಿತರಿಗೆ ವಿಧಾನಸಭೆಯಲ್ಲಿ ಮೀಸಲಿಟ್ಟಿರುವ 12 ಸ್ಥಾನ ಸ್ಥಾನಗಳನ್ನು ರದ್ದುಪಡಿಸುವುದು ಸೇರಿದಂತೆ 38 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಮ್ಮು ಕಾಶ್ಮೀರ ಜಂಟಿ ಅವಾಮಿ ಆ್ಯಕ್ಷನ್ ಕಮಿಟಿ (ಜೆಕೆಜೆಎಎಸಿ) ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಪ್ರತಿಭಟನೆ ನಡೆಯುತ್ತಿದೆ.</p>.<p class="title">ಈ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಕನಿಷ್ಠ ಆರು ನಾಗರಿಕರು ಮತ್ತು ಮೂರು ಪೊಲೀಸರು ಮೃತಪಟ್ಟಿದ್ದಾರೆ. 172 ಪೊಲೀಸರಿಗೆ ಗಾಯಗಳಾಗಿದ್ದು, ಅದರಲ್ಲಿ 12 ಜನರ ಸ್ಥಿತಿ ಗಂಭೀರವಾಗಿದೆ ಮತ್ತು ಸುಮಾರು 50 ನಾಗರಿಕರಿಗೆ ಗಾಯಗಳಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>