<p><strong>ಇಸ್ಲಾಮಾಬಾದ್</strong>: ಜಲ ಸಂಪನ್ಮೂಲ ಹಂಚಿಕೆ ಮತ್ತು ಕಾಶ್ಮೀರ ಸಮಸ್ಯೆ ಸೇರಿದಂತೆ ಉಭಯ ದೇಶಗಳ ನಡುವಿನ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಶಾಂತಿಯುತ ಮಾತುಕತೆಯ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಪಾದಿಸಿದ್ದಾರೆ.</p>.<p>ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಶನಿವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಾದೇಶಿಕ ಶಾಂತಿಯ ಹಿತದೃಷ್ಟಿಯಿಂದ ಭಾರತದೊಂದಿಗಿನ ಒಪ್ಪಂದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾಗಿ ಹೇಳಿದರು. </p>.<p>ಅಣ್ವಸ್ತ್ರಗಳನ್ನು ಹೊಂದಿರುವ ಎರಡು ದೇಶಗಳ ನಡುವಿನ ಉದ್ವಿಗ್ನತೆ ಶಮನಗೊಳಿಸಲು ಅಮೆರಿಕ, ಬ್ರಿಟನ್, ಟರ್ಕಿಯೆ, ಸೌದಿ ಅರೇಬಿಯಾ, ಕತಾರ್, ಯುಎಇ ನಾಯಕರು ಮತ್ತು ವಿಶ್ವಸಂಸ್ಥೆಯ ಮುಖ್ಯಸ್ಥರು ರಾಜತಾಂತ್ರಿಕ ಪ್ರಯತ್ನಗಳನ್ನು ಸಕಾರಾತ್ಮಕವಾಗಿ ನಡೆಸಿದ್ದಾರೆ. ಇದಕ್ಕಾಗಿ ಅವರೆಲ್ಲರಿಗೂ ಕೃತಜ್ಞತೆ ಅರ್ಪಿಸುವುದಾಗಿ ಪ್ರಧಾನಿ ಹೇಳಿದರು.</p>.<p>ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ತನ್ನ ಮಿತ್ರರಾಷ್ಟ್ರವಾದ ಚೀನಾ ಅಗತ್ಯ ಬೆಂಬಲ ಮತ್ತು ಸಹಕಾರ ನೀಡಿದೆ ಎಂದು ಅವರು ವಿವರಿಸಿದರು.</p>.<p>ಪಾಕಿಸ್ತಾನ ಸೇನೆ ಕೈಗೊಂಡಿದ್ದ ಆಪರೇಷನ್ ‘ಬುನ್ಯಾನ್–ಉನ್– ಮರ್ಸೂಸ್‘ ಯಶಸ್ವಿಯಾಗಿದೆ ಎಂದು ಪ್ರಧಾನಿ ಷರೀಫ್ ನೀಡಿರುವ ಹೇಳಿಕೆಯನ್ನು ‘ರೇಡಿಯೊ ಪಾಕಿಸ್ತಾನ’ ಪ್ರಸಾರ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಜಲ ಸಂಪನ್ಮೂಲ ಹಂಚಿಕೆ ಮತ್ತು ಕಾಶ್ಮೀರ ಸಮಸ್ಯೆ ಸೇರಿದಂತೆ ಉಭಯ ದೇಶಗಳ ನಡುವಿನ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಶಾಂತಿಯುತ ಮಾತುಕತೆಯ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಪಾದಿಸಿದ್ದಾರೆ.</p>.<p>ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಶನಿವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಾದೇಶಿಕ ಶಾಂತಿಯ ಹಿತದೃಷ್ಟಿಯಿಂದ ಭಾರತದೊಂದಿಗಿನ ಒಪ್ಪಂದಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾಗಿ ಹೇಳಿದರು. </p>.<p>ಅಣ್ವಸ್ತ್ರಗಳನ್ನು ಹೊಂದಿರುವ ಎರಡು ದೇಶಗಳ ನಡುವಿನ ಉದ್ವಿಗ್ನತೆ ಶಮನಗೊಳಿಸಲು ಅಮೆರಿಕ, ಬ್ರಿಟನ್, ಟರ್ಕಿಯೆ, ಸೌದಿ ಅರೇಬಿಯಾ, ಕತಾರ್, ಯುಎಇ ನಾಯಕರು ಮತ್ತು ವಿಶ್ವಸಂಸ್ಥೆಯ ಮುಖ್ಯಸ್ಥರು ರಾಜತಾಂತ್ರಿಕ ಪ್ರಯತ್ನಗಳನ್ನು ಸಕಾರಾತ್ಮಕವಾಗಿ ನಡೆಸಿದ್ದಾರೆ. ಇದಕ್ಕಾಗಿ ಅವರೆಲ್ಲರಿಗೂ ಕೃತಜ್ಞತೆ ಅರ್ಪಿಸುವುದಾಗಿ ಪ್ರಧಾನಿ ಹೇಳಿದರು.</p>.<p>ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ತನ್ನ ಮಿತ್ರರಾಷ್ಟ್ರವಾದ ಚೀನಾ ಅಗತ್ಯ ಬೆಂಬಲ ಮತ್ತು ಸಹಕಾರ ನೀಡಿದೆ ಎಂದು ಅವರು ವಿವರಿಸಿದರು.</p>.<p>ಪಾಕಿಸ್ತಾನ ಸೇನೆ ಕೈಗೊಂಡಿದ್ದ ಆಪರೇಷನ್ ‘ಬುನ್ಯಾನ್–ಉನ್– ಮರ್ಸೂಸ್‘ ಯಶಸ್ವಿಯಾಗಿದೆ ಎಂದು ಪ್ರಧಾನಿ ಷರೀಫ್ ನೀಡಿರುವ ಹೇಳಿಕೆಯನ್ನು ‘ರೇಡಿಯೊ ಪಾಕಿಸ್ತಾನ’ ಪ್ರಸಾರ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>