ಟಿ.ವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದರ ವಿರುದ್ಧ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಅವಹೇಳನಕಾರಿ ಹೇಳಿಕೆ ನೀಡಿರುವುದು ಮತ್ತು ದೆಹಲಿ ಬಿಜೆಪಿ ಘಟಕದ ಮಾಧ್ಯಮ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಇರಾನ್, ಕುವೈತ್, ಕತಾರ್ನಿಂದ ಆಕ್ಷೇಪ ವ್ಯಕ್ತವಾಗಿದೆ. ಇದರ ನಡುವೆಯೇ ಪಾಕಿಸ್ತಾನದ ಪ್ರಧಾನಿಯೂ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.