<p><strong>ಕರಾಚಿ:</strong> ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಇಂದು (ಗುರುವಾರ) ಬಲೂಚಿಸ್ತಾನ ಪ್ರಾಂತ್ಯಕ್ಕೆ ಭೇಟಿ ನೀಡಿದ್ದಾರೆ.</p>.<p>ಮಂಗಳವಾರ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಜಾಫರ್ ಎಕ್ಸ್ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದ್ದ ಉಗ್ರರು ಒಟ್ಟು 21 ಮಂದಿ ಪ್ರಯಾಣಿಕರನ್ನು ಹಾಗೂ ಅರೆಸೇನಾ ಪಡೆಯ ನಾಲ್ಕು ಮಂದಿಯನ್ನು ಹತ್ಯೆ ಮಾಡಿದ್ದರು. </p>.<p>ಘಟನೆ ನಡೆದ ಒಂದು ದಿನದ ಬಳಿಕ ಬಲೂಚಿಸ್ತಾನ ಪ್ರಾಂತ್ಯಕ್ಕೆ ಭೇಟಿ ನೀಡಿದ ಪ್ರಧಾನಿ, ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಅವರೊಂದಿಗೆ ಉಪ ಪ್ರಧಾನಿ ಮುಹಮ್ಮದ್ ಇಶಾಕ್ ದಾರ್, ಸಚಿವರಾದ ಅತಾವುಲ್ಲಾ ತರಾರ್, ಅಹ್ಸಾನ್ ಇಕ್ಬಾಲ್ ಮತ್ತು ಇತರರು ಇದ್ದರು.</p>.Pakistan Train Attack | 190 ಪ್ರಯಾಣಿಕರ ರಕ್ಷಣೆ, 30 ಉಗ್ರರ ಹತ್ಯೆ.<p>ಜಾಫರ್ ಎಕ್ಸ್ಪ್ರೆಸ್ ಹೆಸರಿನ ರೈಲು ಕ್ವೆಟ್ಟಾದಿಂದ ಪೆಶಾವರ ಕಡೆ ಮಂಗಳವಾರ ತೆರಳುತ್ತಿತ್ತು. ಆಗ ಸ್ಫೋಟಕ ಬಳಸಿ ರೈಲಿನ ಹಳಿ ತಪ್ಪಿಸಿದ್ದ ಉಗ್ರರು ಪ್ರಯಾಣಿಕರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದರು. ರೈಲಿನ ಮೇಲೆ ದಾಳಿ ನಡೆಸಿದ್ದು ತಾನು ಎಂದು ಬಲೂಚಿಸ್ತಾನ ಮುಕ್ತಿ ಸೇನೆ (ಬಿಎಲ್ಎ) ಹೇಳಿಕೊಂಡಿತ್ತು. </p>.<p>ರೈಲು ಪ್ರಯಾಣಿಕರನ್ನು ರಕ್ಷಿಸುವ ಉದ್ದೇಶದಿಂದ ನಡೆಸಿದ ಸೇನಾ ಕಾರ್ಯಾಚರಣೆ ಪೂರ್ಣಗೊಂಡಿದೆ . ಸ್ಥಳದಲ್ಲಿ ಇದ್ದ 33 ಮಂದಿ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪಾಕಿಸ್ತಾನ ಸೇನೆಯ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಶರೀಫ್ ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದರು.</p>.<p>‘ರೈಲಿನಲ್ಲಿ ಒಟ್ಟು 440 ಮಂದಿ ಪ್ರಯಾಣಿಕರಿದ್ದರು. ರಕ್ಷಣಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ಭದ್ರತಾ ಪಡೆಗಳು ಅಪಾರ ಕೌಶಲದೊಂದಿಗೆ ನಡೆಸಿವೆ’ ಎಂದು ಪಾಕಿಸ್ತಾನದ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ.</p> .ಪಾಕ್: ಒತ್ತೆಯಾಳುಗಳ ರಕ್ಷಣೆ, 33 ಉಗ್ರರ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕರಾಚಿ:</strong> ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಇಂದು (ಗುರುವಾರ) ಬಲೂಚಿಸ್ತಾನ ಪ್ರಾಂತ್ಯಕ್ಕೆ ಭೇಟಿ ನೀಡಿದ್ದಾರೆ.</p>.<p>ಮಂಗಳವಾರ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಜಾಫರ್ ಎಕ್ಸ್ಪ್ರೆಸ್ ರೈಲಿನ ಮೇಲೆ ದಾಳಿ ನಡೆಸಿದ್ದ ಉಗ್ರರು ಒಟ್ಟು 21 ಮಂದಿ ಪ್ರಯಾಣಿಕರನ್ನು ಹಾಗೂ ಅರೆಸೇನಾ ಪಡೆಯ ನಾಲ್ಕು ಮಂದಿಯನ್ನು ಹತ್ಯೆ ಮಾಡಿದ್ದರು. </p>.<p>ಘಟನೆ ನಡೆದ ಒಂದು ದಿನದ ಬಳಿಕ ಬಲೂಚಿಸ್ತಾನ ಪ್ರಾಂತ್ಯಕ್ಕೆ ಭೇಟಿ ನೀಡಿದ ಪ್ರಧಾನಿ, ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ. ಅವರೊಂದಿಗೆ ಉಪ ಪ್ರಧಾನಿ ಮುಹಮ್ಮದ್ ಇಶಾಕ್ ದಾರ್, ಸಚಿವರಾದ ಅತಾವುಲ್ಲಾ ತರಾರ್, ಅಹ್ಸಾನ್ ಇಕ್ಬಾಲ್ ಮತ್ತು ಇತರರು ಇದ್ದರು.</p>.Pakistan Train Attack | 190 ಪ್ರಯಾಣಿಕರ ರಕ್ಷಣೆ, 30 ಉಗ್ರರ ಹತ್ಯೆ.<p>ಜಾಫರ್ ಎಕ್ಸ್ಪ್ರೆಸ್ ಹೆಸರಿನ ರೈಲು ಕ್ವೆಟ್ಟಾದಿಂದ ಪೆಶಾವರ ಕಡೆ ಮಂಗಳವಾರ ತೆರಳುತ್ತಿತ್ತು. ಆಗ ಸ್ಫೋಟಕ ಬಳಸಿ ರೈಲಿನ ಹಳಿ ತಪ್ಪಿಸಿದ್ದ ಉಗ್ರರು ಪ್ರಯಾಣಿಕರನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದರು. ರೈಲಿನ ಮೇಲೆ ದಾಳಿ ನಡೆಸಿದ್ದು ತಾನು ಎಂದು ಬಲೂಚಿಸ್ತಾನ ಮುಕ್ತಿ ಸೇನೆ (ಬಿಎಲ್ಎ) ಹೇಳಿಕೊಂಡಿತ್ತು. </p>.<p>ರೈಲು ಪ್ರಯಾಣಿಕರನ್ನು ರಕ್ಷಿಸುವ ಉದ್ದೇಶದಿಂದ ನಡೆಸಿದ ಸೇನಾ ಕಾರ್ಯಾಚರಣೆ ಪೂರ್ಣಗೊಂಡಿದೆ . ಸ್ಥಳದಲ್ಲಿ ಇದ್ದ 33 ಮಂದಿ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪಾಕಿಸ್ತಾನ ಸೇನೆಯ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಶರೀಫ್ ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದರು.</p>.<p>‘ರೈಲಿನಲ್ಲಿ ಒಟ್ಟು 440 ಮಂದಿ ಪ್ರಯಾಣಿಕರಿದ್ದರು. ರಕ್ಷಣಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ಭದ್ರತಾ ಪಡೆಗಳು ಅಪಾರ ಕೌಶಲದೊಂದಿಗೆ ನಡೆಸಿವೆ’ ಎಂದು ಪಾಕಿಸ್ತಾನದ ಸಚಿವ ಅತಾವುಲ್ಲಾ ತರಾರ್ ಹೇಳಿದ್ದಾರೆ.</p> .ಪಾಕ್: ಒತ್ತೆಯಾಳುಗಳ ರಕ್ಷಣೆ, 33 ಉಗ್ರರ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>