<p><strong>ಇಸ್ಲಾಮಾಬಾದ್:</strong> ‘ಪಾಕಿಸ್ತಾನ ನೆಲದಲ್ಲಿ ಭಾರತ ಭಯೋತ್ಪಾದನೆ ಹರಡುತ್ತಿದೆ. ಬಲೂಚಿಸ್ತಾನ ಅಸ್ಥಿರತೆಯಲ್ಲಿ ದೆಹಲಿಯ ಕೈವಾಡವಿರುವುದು ಸ್ಪಷ್ಟವಾಗಿದೆ’ ಎಂದು ಪಾಕಿಸ್ತಾನ ಗುರುವಾರ ಆರೋಪಿಸಿದೆ.</p><p>ವಿದೇಶಾಂಗ ಸಚಿವಾಲಯದ ವಕ್ತಾರ ಶಫಾಖತ್ ಅಲಿ ಖಾನ್ ಮಾತನಾಡಿ, ‘ಭಾರತವು ತನ್ನ ಪ್ರಾಯೋಜಿತ ಜಾಗತಿಕ ಹತ್ಯೆ ಅಭಿಯಾನವನ್ನು ಆರಂಭಿಸಿದೆ’ ಎಂದು ಆರೋಪಿಸಿದ್ದಾರೆ.</p><p>‘ಪಾಕಿಸ್ತಾನದಲ್ಲಿ ಭಯೋತ್ಪಾದನೆ ಹರಡುತ್ತಿರುವುದರಲ್ಲಿ ಭಾರತದ ಕೈವಾಡ ಸಾಬೀತಾಗಿದೆ. ಭಾರತದ ಕೃತ್ಯ ಪಾಕಿಸ್ತಾನದಲ್ಲಿ ಮಾತ್ರವಲ್ಲ, ಇಡೀ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲೇ ವ್ಯಾಪಕವಾಗಿದೆ. ಪಾಕಿಸ್ತಾನದ ವಿಷಯದಲ್ಲೂ ಬಲೂಚಿಸ್ತಾನವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಲೇ ಬಂದಿದೆ’ ಎಂದಿದ್ದಾರೆ.</p><p>ಮಾರ್ಚ್ 11ರಂದು ಬಲೂಚಿಸ್ತಾನದ ಬೊಲಾನ್ ಜಿಲ್ಲೆಯಲ್ಲಿ ಜಾಫರ್ ಎಕ್ಸ್ಪ್ರೆಸ್ ರೈಲಿನ ಹಳಿ ತಪ್ಪಿಸಿ ದಾಳಿ ಮಾಡಿದ ಬಲೂಚಿಸ್ತಾನ ಲಿಬರೇಷನ್ ಆರ್ಮಿ (ಬಿಎಲ್ಎ) ಕೃತ್ಯದ ನಂತರ ಪಾಕಿಸ್ತಾನ ಈ ಆರೋಪ ಮಾಡಿದೆ. ಘಟನೆಯಲ್ಲಿ 21 ಪ್ರಯಾಣಿಕರನ್ನು ಹಾಗೂ ನಾಲ್ವರು ಅರೆಸೇನಾ ಪಡೆ ಭಯೋತ್ಪಾದಕರು ಕೊಂದಿದ್ದರು. ಇದಕ್ಕೂ ಪೂರ್ವದಲ್ಲಿ 33 ಭಯೋತ್ಪಾದಕರನ್ನು ಪಾಕಿಸ್ತಾನ ಸೇನೆ ಹೊಡೆದುರುಳಿಸಿತ್ತು.</p><p>‘ಜಾಫರ್ ಎಕ್ಸ್ಪ್ರೆಸ್ ಮೇಲಿನ ದಾಳಿಯನ್ನು ಭಾರತ ಎಂದೂ ಖಂಡಿಸಿಲ್ಲ’ ಎಂದು ಜಾಫರ್ ಆರೋಪಿಸಿದ್ದಾರೆ. ಕಳೆದ ವಾರ ಪಾಕಿಸ್ತಾನದ ಇಂಥದ್ದೇ ಆರೋಪಕ್ಕೆ ನವದೆಹಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿತ್ತು.</p><p>‘ಭಯೋತ್ಪಾದನೆಯ ಮುಖ್ಯ ಕೇಂದ್ರ ಎಲ್ಲಿದೆ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಇತರರ ವಿರುದ್ಧ ಆರೋಪ ಮಾಡುವ ಮೊದಲು ಪಾಕಿಸ್ತಾನ ತನ್ನನ್ನು ತಾನು ಅವಲೋಕಿಸಿಕೊಳ್ಳುವುದು ಉತ್ತಮ’ ಎಂದು ಭಾರತ ವಿದೇಶಾಂಗ ಇಲಾಖೆ ವಕ್ತಾರ ರಣದೀರ್ ಜೈಸ್ವಾಲ್ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ‘ಪಾಕಿಸ್ತಾನ ನೆಲದಲ್ಲಿ ಭಾರತ ಭಯೋತ್ಪಾದನೆ ಹರಡುತ್ತಿದೆ. ಬಲೂಚಿಸ್ತಾನ ಅಸ್ಥಿರತೆಯಲ್ಲಿ ದೆಹಲಿಯ ಕೈವಾಡವಿರುವುದು ಸ್ಪಷ್ಟವಾಗಿದೆ’ ಎಂದು ಪಾಕಿಸ್ತಾನ ಗುರುವಾರ ಆರೋಪಿಸಿದೆ.</p><p>ವಿದೇಶಾಂಗ ಸಚಿವಾಲಯದ ವಕ್ತಾರ ಶಫಾಖತ್ ಅಲಿ ಖಾನ್ ಮಾತನಾಡಿ, ‘ಭಾರತವು ತನ್ನ ಪ್ರಾಯೋಜಿತ ಜಾಗತಿಕ ಹತ್ಯೆ ಅಭಿಯಾನವನ್ನು ಆರಂಭಿಸಿದೆ’ ಎಂದು ಆರೋಪಿಸಿದ್ದಾರೆ.</p><p>‘ಪಾಕಿಸ್ತಾನದಲ್ಲಿ ಭಯೋತ್ಪಾದನೆ ಹರಡುತ್ತಿರುವುದರಲ್ಲಿ ಭಾರತದ ಕೈವಾಡ ಸಾಬೀತಾಗಿದೆ. ಭಾರತದ ಕೃತ್ಯ ಪಾಕಿಸ್ತಾನದಲ್ಲಿ ಮಾತ್ರವಲ್ಲ, ಇಡೀ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲೇ ವ್ಯಾಪಕವಾಗಿದೆ. ಪಾಕಿಸ್ತಾನದ ವಿಷಯದಲ್ಲೂ ಬಲೂಚಿಸ್ತಾನವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಲೇ ಬಂದಿದೆ’ ಎಂದಿದ್ದಾರೆ.</p><p>ಮಾರ್ಚ್ 11ರಂದು ಬಲೂಚಿಸ್ತಾನದ ಬೊಲಾನ್ ಜಿಲ್ಲೆಯಲ್ಲಿ ಜಾಫರ್ ಎಕ್ಸ್ಪ್ರೆಸ್ ರೈಲಿನ ಹಳಿ ತಪ್ಪಿಸಿ ದಾಳಿ ಮಾಡಿದ ಬಲೂಚಿಸ್ತಾನ ಲಿಬರೇಷನ್ ಆರ್ಮಿ (ಬಿಎಲ್ಎ) ಕೃತ್ಯದ ನಂತರ ಪಾಕಿಸ್ತಾನ ಈ ಆರೋಪ ಮಾಡಿದೆ. ಘಟನೆಯಲ್ಲಿ 21 ಪ್ರಯಾಣಿಕರನ್ನು ಹಾಗೂ ನಾಲ್ವರು ಅರೆಸೇನಾ ಪಡೆ ಭಯೋತ್ಪಾದಕರು ಕೊಂದಿದ್ದರು. ಇದಕ್ಕೂ ಪೂರ್ವದಲ್ಲಿ 33 ಭಯೋತ್ಪಾದಕರನ್ನು ಪಾಕಿಸ್ತಾನ ಸೇನೆ ಹೊಡೆದುರುಳಿಸಿತ್ತು.</p><p>‘ಜಾಫರ್ ಎಕ್ಸ್ಪ್ರೆಸ್ ಮೇಲಿನ ದಾಳಿಯನ್ನು ಭಾರತ ಎಂದೂ ಖಂಡಿಸಿಲ್ಲ’ ಎಂದು ಜಾಫರ್ ಆರೋಪಿಸಿದ್ದಾರೆ. ಕಳೆದ ವಾರ ಪಾಕಿಸ್ತಾನದ ಇಂಥದ್ದೇ ಆರೋಪಕ್ಕೆ ನವದೆಹಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿತ್ತು.</p><p>‘ಭಯೋತ್ಪಾದನೆಯ ಮುಖ್ಯ ಕೇಂದ್ರ ಎಲ್ಲಿದೆ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಇತರರ ವಿರುದ್ಧ ಆರೋಪ ಮಾಡುವ ಮೊದಲು ಪಾಕಿಸ್ತಾನ ತನ್ನನ್ನು ತಾನು ಅವಲೋಕಿಸಿಕೊಳ್ಳುವುದು ಉತ್ತಮ’ ಎಂದು ಭಾರತ ವಿದೇಶಾಂಗ ಇಲಾಖೆ ವಕ್ತಾರ ರಣದೀರ್ ಜೈಸ್ವಾಲ್ ಪಾಕಿಸ್ತಾನಕ್ಕೆ ತಿರುಗೇಟು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>