<p><strong>ಇಸ್ಲಾಮಾಬಾದ್ :</strong> ‘ಪಾಕಿಸ್ತಾನದಲ್ಲಿ ಉಗ್ರ ಹಾಗೂ ಜಿಹಾದಿ ಚಟುವಟಿಕೆಗಳು ನಡೆಯುತ್ತಿರುವುದು ಸತ್ಯ’ ಎಂದು ಪಾಕಿಸ್ತಾನ ಸೇನೆ ಸೋಮವಾರ ಒಪ್ಪಿಕೊಂಡಿದೆ.</p>.<p>‘ಭಯೋತ್ಪಾದಕ ಸಂಘಟನೆ ಮತ್ತು ಜಿಹಾದಿ ಗುಂಪುಗಳನ್ನು ನಾವು ನಿಷೇಧಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದೇವೆ’ ಎಂದು ಪಾಕಿಸ್ತಾನ ಸೇನೆಯ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಇಸ್ಲಾಮಾಬಾದ್ನಲ್ಲಿ ಭಯೋತ್ಪಾದನೆಯಿಂದ ಸಾಕಷ್ಟು ನಷ್ಟಗಳಾಗಿವೆ. ಹಿಂದಿನ ಸರ್ಕಾರ ಭಯೋತ್ಪಾದನೆಯನ್ನು ನಿಗ್ರಹಿಸಲು ವಿಫಲವಾಗಿದೆ. ಅದರಿಂದ ಲಕ್ಷಗಟ್ಟಲೇ ಹಣ ಕಳೆದುಕೊಂಡಿದ್ದೇವೆ. ಉಗ್ರವಾದವನ್ನು ನಾಶಪಡಿಸಲು ಇನ್ನೂ ಅನೇಕ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ’ ಎಂದು ಗಫೂರ್ ಹೇಳಿದರು.</p>.<p>‘ಉಗ್ರರ ಅನಿರೀಕ್ಷಿತ ದಾಳಿಗಳನ್ನು ಮಾಡುವಲ್ಲಿಯಷ್ಟೇ ದೇಶ ನಿರತವಾಗಿದೆ. ಎಲ್ಲಾ ಕಾನೂನು ಜಾರಿ ಸಂಸ್ಥೆಗಳೂ ಅದಲ್ಲಿಯೇ ತೊಡಗಿಸಿಕೊಂಡಿವೆ. ಹೀಗಾಗಿ ಇಷ್ಟು ದಿನಗಳು ಭಯೋತ್ಪಾದನಾ ಸಂಘಟನೆಗಳ ವಿರುದ್ಧ ತಂತ್ರಗಾರಿಕೆ ರೂಪಿಸಲು ಸಾಧ್ಯವಾಗಿಲ್ಲ’ ಎಂದು ಒಪ್ಪಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ :</strong> ‘ಪಾಕಿಸ್ತಾನದಲ್ಲಿ ಉಗ್ರ ಹಾಗೂ ಜಿಹಾದಿ ಚಟುವಟಿಕೆಗಳು ನಡೆಯುತ್ತಿರುವುದು ಸತ್ಯ’ ಎಂದು ಪಾಕಿಸ್ತಾನ ಸೇನೆ ಸೋಮವಾರ ಒಪ್ಪಿಕೊಂಡಿದೆ.</p>.<p>‘ಭಯೋತ್ಪಾದಕ ಸಂಘಟನೆ ಮತ್ತು ಜಿಹಾದಿ ಗುಂಪುಗಳನ್ನು ನಾವು ನಿಷೇಧಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದೇವೆ’ ಎಂದು ಪಾಕಿಸ್ತಾನ ಸೇನೆಯ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಇಸ್ಲಾಮಾಬಾದ್ನಲ್ಲಿ ಭಯೋತ್ಪಾದನೆಯಿಂದ ಸಾಕಷ್ಟು ನಷ್ಟಗಳಾಗಿವೆ. ಹಿಂದಿನ ಸರ್ಕಾರ ಭಯೋತ್ಪಾದನೆಯನ್ನು ನಿಗ್ರಹಿಸಲು ವಿಫಲವಾಗಿದೆ. ಅದರಿಂದ ಲಕ್ಷಗಟ್ಟಲೇ ಹಣ ಕಳೆದುಕೊಂಡಿದ್ದೇವೆ. ಉಗ್ರವಾದವನ್ನು ನಾಶಪಡಿಸಲು ಇನ್ನೂ ಅನೇಕ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ’ ಎಂದು ಗಫೂರ್ ಹೇಳಿದರು.</p>.<p>‘ಉಗ್ರರ ಅನಿರೀಕ್ಷಿತ ದಾಳಿಗಳನ್ನು ಮಾಡುವಲ್ಲಿಯಷ್ಟೇ ದೇಶ ನಿರತವಾಗಿದೆ. ಎಲ್ಲಾ ಕಾನೂನು ಜಾರಿ ಸಂಸ್ಥೆಗಳೂ ಅದಲ್ಲಿಯೇ ತೊಡಗಿಸಿಕೊಂಡಿವೆ. ಹೀಗಾಗಿ ಇಷ್ಟು ದಿನಗಳು ಭಯೋತ್ಪಾದನಾ ಸಂಘಟನೆಗಳ ವಿರುದ್ಧ ತಂತ್ರಗಾರಿಕೆ ರೂಪಿಸಲು ಸಾಧ್ಯವಾಗಿಲ್ಲ’ ಎಂದು ಒಪ್ಪಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>