<p><strong>ಇಸ್ಲಾಮಾಬಾದ್</strong>: ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು ಹಾಗೂ ನಮ್ಮೊಂದಿಗೆ ಸಹಬಾಳ್ವೆಯಿಂದ ಇರುವುದನ್ನು ಕಲಿಯಬೇಕು ಎಂದು ಪಾಕಿಸ್ತಾನ ಸೇನೆ ಹೇಳಿದೆ.</p>.<p>ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರ ಇತ್ತೀಚಿನ ಹೇಳಿಕೆಗಳನ್ನು ಟೀಕಿಸಿರುವ ಸೇನೆಯು, ‘ಪಾಕಿಸ್ತಾನವನ್ನು ಗುರಿಯಾಗಿಸುವ ಯಾವುದೇ ಕ್ರಮ ಕೈಗೊಂಡಲ್ಲಿ, ಪರಿಣಾಮವನ್ನು ಎದುರಿಸಬೇಕಾಗುತ್ತದೆ’ ಎಂದೂ ಹೇಳಿದೆ.</p>.<p>ಪಾಕಿಸ್ತಾನವು ಭಯೋತ್ಪಾದಕರಿಗೆ ಆಶ್ರಯ ನೀಡಿ, ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ಅದು ಭೂಗೋಳದ ಭಾಗವಾಗಿರಬೇಕೇ ಅಥವಾ ಇತಿಹಾಸದಲ್ಲಿ ಉಳಿಯಬೇಕೇ? ಬೇಡವೇ ಎಂಬುದನ್ನು ನಿರ್ಧರಿಸಲಿದ್ದೇವೆ’ ಎಂದು ದ್ವಿವೇದಿ ಅವರು ಎಚ್ಚರಿಕೆ ನೀಡಿದ್ದರು.</p>.ಪಾಕಿಸ್ತಾನ ಇತಿಹಾಸ ಸೇರಬೇಕೇ? ದ್ವಿವೇದಿ ಪ್ರಶ್ನೆ.<p>ಇದಕ್ಕೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಸೇನೆಯು, ‘ದ್ವಿವೇದಿ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಅಣ್ವಸ್ತ್ರ ಹೊಂದಿರುವ ದೇಶಗಳು ಜವಾಬ್ದಾರಿಯುತವಾಗಿ ಮತ್ತು ಸಂಯಮದಿಂದ ವರ್ತಿಸಬೇಕು. ಅಣ್ವಸ್ತ್ರ ಹೊಂದಿರುವ ನೆರೆಯ ದೇಶವನ್ನು ಭೌಗೋಳಿಕವಾಗಿ ನಾಶ ಮಾಡುವ ಬೆದರಿಕೆ ಹಾಕುವುದು ಅರಿವಿನ ಕೊರತೆಯಾಗಿದೆ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಾರತವು ಪಾಕಿಸ್ತಾನವನ್ನು ಗೌರವಿಸಬೇಕು ಹಾಗೂ ನಮ್ಮೊಂದಿಗೆ ಸಹಬಾಳ್ವೆಯಿಂದ ಇರುವುದನ್ನು ಕಲಿಯಬೇಕು ಎಂದು ಪಾಕಿಸ್ತಾನ ಸೇನೆ ಹೇಳಿದೆ.</p>.<p>ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರ ಇತ್ತೀಚಿನ ಹೇಳಿಕೆಗಳನ್ನು ಟೀಕಿಸಿರುವ ಸೇನೆಯು, ‘ಪಾಕಿಸ್ತಾನವನ್ನು ಗುರಿಯಾಗಿಸುವ ಯಾವುದೇ ಕ್ರಮ ಕೈಗೊಂಡಲ್ಲಿ, ಪರಿಣಾಮವನ್ನು ಎದುರಿಸಬೇಕಾಗುತ್ತದೆ’ ಎಂದೂ ಹೇಳಿದೆ.</p>.<p>ಪಾಕಿಸ್ತಾನವು ಭಯೋತ್ಪಾದಕರಿಗೆ ಆಶ್ರಯ ನೀಡಿ, ಭಾರತದ ವಿರುದ್ಧ ಕಾರ್ಯಾಚರಣೆ ನಡೆಸುವುದನ್ನು ಮುಂದುವರಿಸಿದರೆ, ಅದು ಭೂಗೋಳದ ಭಾಗವಾಗಿರಬೇಕೇ ಅಥವಾ ಇತಿಹಾಸದಲ್ಲಿ ಉಳಿಯಬೇಕೇ? ಬೇಡವೇ ಎಂಬುದನ್ನು ನಿರ್ಧರಿಸಲಿದ್ದೇವೆ’ ಎಂದು ದ್ವಿವೇದಿ ಅವರು ಎಚ್ಚರಿಕೆ ನೀಡಿದ್ದರು.</p>.ಪಾಕಿಸ್ತಾನ ಇತಿಹಾಸ ಸೇರಬೇಕೇ? ದ್ವಿವೇದಿ ಪ್ರಶ್ನೆ.<p>ಇದಕ್ಕೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಸೇನೆಯು, ‘ದ್ವಿವೇದಿ ಹೇಳಿಕೆ ಪ್ರಚೋದನಕಾರಿಯಾಗಿದ್ದು, ಅಣ್ವಸ್ತ್ರ ಹೊಂದಿರುವ ದೇಶಗಳು ಜವಾಬ್ದಾರಿಯುತವಾಗಿ ಮತ್ತು ಸಂಯಮದಿಂದ ವರ್ತಿಸಬೇಕು. ಅಣ್ವಸ್ತ್ರ ಹೊಂದಿರುವ ನೆರೆಯ ದೇಶವನ್ನು ಭೌಗೋಳಿಕವಾಗಿ ನಾಶ ಮಾಡುವ ಬೆದರಿಕೆ ಹಾಕುವುದು ಅರಿವಿನ ಕೊರತೆಯಾಗಿದೆ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>