<p><strong>ಇಸ್ಲಾಮಾಬಾದ್</strong>: ಕಳೆದ ವರ್ಷ ಮೇ 9ರಂದು ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಲ್ಲಿಯ ಕೋರ್ಟೊಂದು ಸಾಕ್ಷ್ಯಗಳ ಕೊರತೆಯ ಕಾರಣದಿಂದಾಗಿ ಈಚೆಗೆ ಖುಲಾಸೆಗೊಳಿಸಿದೆ. </p>.<p>ಪಾಕಿಸ್ತಾನ್–ಎ–ಇಸ್ಸಾಫ್ (ಪಿಟಿಐ) ಪಕ್ಷದ ಸಂಸ್ಥಾಪಕರೂ ಆದ ಇಮ್ರಾನ್ ಖಾನ್ ಅವರ ಬಂಬಲಿಗರು ಸಾರ್ವಜನಿಕ ಸ್ವತ್ತುಗಳಿಗೆ ಹಾನಿ ಮಾಡಿದ್ದರು. ಜೊತೆಗೆ, ಸ್ಥಳದಲ್ಲಿ ಜಮಾವಣೆಗೊಂಡಿದ್ದ ಸೇನಾ ತುಕಡಿಗಳಿಗೂ ತೊಂದರೆ ಉಂಟುಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶೆಹಜಾದ್ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಈ ದೂರುಗಳನ್ನು ಪ್ರಶ್ನಿಸಿ ಇಮ್ರಾನ್ ಅವರು ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸಾಹಿಬ್ ಬಿಲಾಲ್ ಅವರು ಈ ಆದೇಶ ಹೊರಡಿಸಿದ್ದಾರೆ.</p>.<p>ಸದ್ಯ ಇಮ್ರಾನ್ ಖಾನ್ ಅವರು ರಾವಲ್ಪಿಂಡಿಯ ಅಡಿಡಾಲ್ ಜೈಲಿನಲ್ಲಿದ್ದಾರೆ. ಅವರು ಬಂಧನಕ್ಕೊಳಗಾದ ವೇಳೆ ಆಕ್ರೋಶಭರಿತರಾದ ಬೆಂಬಲಿಗರು ಹಲವಾರು ಸಾರ್ವಜನಿಕ ಸ್ವತ್ತುಗಳಿಗೆ ಹಾನಿಯುಂಟು ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಕಳೆದ ವರ್ಷ ಮೇ 9ರಂದು ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಲ್ಲಿಯ ಕೋರ್ಟೊಂದು ಸಾಕ್ಷ್ಯಗಳ ಕೊರತೆಯ ಕಾರಣದಿಂದಾಗಿ ಈಚೆಗೆ ಖುಲಾಸೆಗೊಳಿಸಿದೆ. </p>.<p>ಪಾಕಿಸ್ತಾನ್–ಎ–ಇಸ್ಸಾಫ್ (ಪಿಟಿಐ) ಪಕ್ಷದ ಸಂಸ್ಥಾಪಕರೂ ಆದ ಇಮ್ರಾನ್ ಖಾನ್ ಅವರ ಬಂಬಲಿಗರು ಸಾರ್ವಜನಿಕ ಸ್ವತ್ತುಗಳಿಗೆ ಹಾನಿ ಮಾಡಿದ್ದರು. ಜೊತೆಗೆ, ಸ್ಥಳದಲ್ಲಿ ಜಮಾವಣೆಗೊಂಡಿದ್ದ ಸೇನಾ ತುಕಡಿಗಳಿಗೂ ತೊಂದರೆ ಉಂಟುಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶೆಹಜಾದ್ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿದ್ದವು. ಈ ದೂರುಗಳನ್ನು ಪ್ರಶ್ನಿಸಿ ಇಮ್ರಾನ್ ಅವರು ಅರ್ಜಿ ಸಲ್ಲಿಸಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಸಾಹಿಬ್ ಬಿಲಾಲ್ ಅವರು ಈ ಆದೇಶ ಹೊರಡಿಸಿದ್ದಾರೆ.</p>.<p>ಸದ್ಯ ಇಮ್ರಾನ್ ಖಾನ್ ಅವರು ರಾವಲ್ಪಿಂಡಿಯ ಅಡಿಡಾಲ್ ಜೈಲಿನಲ್ಲಿದ್ದಾರೆ. ಅವರು ಬಂಧನಕ್ಕೊಳಗಾದ ವೇಳೆ ಆಕ್ರೋಶಭರಿತರಾದ ಬೆಂಬಲಿಗರು ಹಲವಾರು ಸಾರ್ವಜನಿಕ ಸ್ವತ್ತುಗಳಿಗೆ ಹಾನಿಯುಂಟು ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>