<p><strong>ಇಸ್ಲಾಮಾಬಾದ್ (ಪಿಟಿಐ)</strong>: ಬಂಧನದಲ್ಲಿರುವ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರ ವಿರುದ್ಧ ಅಲ್–ಖಾದಿರ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಅಕೌಂಟೆಬಿಲಿಟಿ ಬ್ಯುರೊ(ಎನ್ಎಬಿ) ನ್ಯಾಯಾಲಯವು ದೋಷಾರೋಪ ನಿಗದಿ ಮಾಡಿದೆ.</p>.<p>ಇಮ್ರಾನ್ ಖಾನ್ ಇರುವ ರಾವಲ್ಪಿಂಡಿಯ ಆಡಿಯಾಲ ಕಾರಾಗೃಹದಲ್ಲಿಯೇ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ವಿಚಾರಣೆ ನಡೆಸಿದರು. ನಂತರ ದಂಪತಿ ಸಮಕ್ಷಮದಲ್ಲಿ ದೋಷಾರೋಪ ಪಟ್ಟಿ ಓದಿದರು.</p>.<p>ಖಾನ್ ಮತ್ತು ಅವರ ಪತ್ನಿ ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದರು. ನಂತರ ಪ್ರಕರಣದ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಲಾಯಿತು.</p>.<p>ಇಮ್ರಾನ್ ಖಾನ್ ಮತ್ತು ಅವರ ಮೂರನೇ ಪತ್ನಿ ಬುಶ್ರಾ ಬೀಬಿ ಅವರು 2018ರಲ್ಲಿ ಸ್ಥಾಪಿಸಿದ್ದ ಅಲ್–ಖಾದಿರ್ ಸರ್ಕಾರೇತರ ಸಂಸ್ಥೆಯು ರಿಯಲ್ ಎಸ್ಟೇಟ್ ಡೆವಲಪರ್ ಮಲಿಕ್ ರಿಯಾಜ್ ಹುಸೇನ್ ಅವರಿಂದ 60 ಎಕರೆ ಭೂಮಿಯನ್ನು ಲಂಚವಾಗಿ ಪಡೆದಿದೆ. ಆ ಸಂದರ್ಭದಲ್ಲಿ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ (ಪಿಟಿಐ)</strong>: ಬಂಧನದಲ್ಲಿರುವ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರ ವಿರುದ್ಧ ಅಲ್–ಖಾದಿರ್ ಟ್ರಸ್ಟ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಅಕೌಂಟೆಬಿಲಿಟಿ ಬ್ಯುರೊ(ಎನ್ಎಬಿ) ನ್ಯಾಯಾಲಯವು ದೋಷಾರೋಪ ನಿಗದಿ ಮಾಡಿದೆ.</p>.<p>ಇಮ್ರಾನ್ ಖಾನ್ ಇರುವ ರಾವಲ್ಪಿಂಡಿಯ ಆಡಿಯಾಲ ಕಾರಾಗೃಹದಲ್ಲಿಯೇ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ವಿಚಾರಣೆ ನಡೆಸಿದರು. ನಂತರ ದಂಪತಿ ಸಮಕ್ಷಮದಲ್ಲಿ ದೋಷಾರೋಪ ಪಟ್ಟಿ ಓದಿದರು.</p>.<p>ಖಾನ್ ಮತ್ತು ಅವರ ಪತ್ನಿ ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದರು. ನಂತರ ಪ್ರಕರಣದ ವಿಚಾರಣೆಯನ್ನು ಮಾ.6ಕ್ಕೆ ಮುಂದೂಡಲಾಯಿತು.</p>.<p>ಇಮ್ರಾನ್ ಖಾನ್ ಮತ್ತು ಅವರ ಮೂರನೇ ಪತ್ನಿ ಬುಶ್ರಾ ಬೀಬಿ ಅವರು 2018ರಲ್ಲಿ ಸ್ಥಾಪಿಸಿದ್ದ ಅಲ್–ಖಾದಿರ್ ಸರ್ಕಾರೇತರ ಸಂಸ್ಥೆಯು ರಿಯಲ್ ಎಸ್ಟೇಟ್ ಡೆವಲಪರ್ ಮಲಿಕ್ ರಿಯಾಜ್ ಹುಸೇನ್ ಅವರಿಂದ 60 ಎಕರೆ ಭೂಮಿಯನ್ನು ಲಂಚವಾಗಿ ಪಡೆದಿದೆ. ಆ ಸಂದರ್ಭದಲ್ಲಿ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅವರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>