<p><strong>ಇಸ್ಲಾಮಾಬಾದ್ :</strong> ‘ಭಾರತವು ತನ್ನ ವೈಫಲ್ಯವನ್ನು ಮರೆಮಾಚಲು ಪ್ರಾದೇಶಿಕ ಅಸ್ಥಿರತೆ ಉಂಟುಮಾಡುವ ಹೇಳಿಕೆಗಳನ್ನು ನೀಡುತ್ತಿದೆ’ ಎಂದು ಪಾಕಿಸ್ತಾನ ಶನಿವಾರ ಟೀಕಿಸಿದೆ.</p>.<p>‘ಭಾರತದ ಬೇಜವಾಬ್ದಾರಿ ಹೇಳಿಕೆಗಳನ್ನು ಪಾಕಿಸ್ತಾನವು ತಿರಸ್ಕರಿಸಲಿದೆ’ ಎಂದು ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಅವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಸಿಂಧೂ ಜಲ ಒಪ್ಪಂದವು (ಐಡಬ್ಲ್ಯುಟಿ) ಅಚಲ ನಂಬಿಕೆಯಿಂದ ತೀರ್ಮಾನಿಸಲಾದ ಅಂತರರಾಷ್ಟ್ರೀಯ ಒಪ್ಪಂದವಾಗಿದೆ. ಯಾವುದೇ ಏಕಪಕ್ಷೀಯ ಉಲ್ಲಂಘನೆಯು ಪ್ರಾದೇಶಿಕ ಸ್ಥಿರತೆಯನ್ನು ಹಾಳು ಮಾಡುತ್ತದೆ ಎಂದು ಅವರು ಹೇಳಿದರು.</p>.<p>ಈ ಒಪ್ಪಂದದ ಅಡಿಯಲ್ಲೇ ಪಾಕಿಸ್ತಾನವು ತನ್ನ ಕಾನೂನುಬದ್ಧ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.</p>.<p>ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಕಿಸ್ತಾನದ ಹೆಸರು ಪ್ರಸ್ತಾಪಿಸಿದೆ, ‘ನೆರೆಹೊರೆಯ ದುಷ್ಟ ದೇಶ’ ಎಂದು ಶುಕ್ರವಾರ ಟೀಕಿಸಿದ್ದರು. ದೇಶದೊಳಗೆ ಭಯೋತ್ಪಾದನಾ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿರುವ ಪಕ್ಕದ ದುಷ್ಟ ರಾಷ್ಟ್ರವು ನಮ್ಮೊಂದಿಗೆ ನೀರು ಹಂಚಿಕೊಳ್ಳಿ ಎಂದು ಕೇಳುವಂತಿಲ್ಲ ಎಂದೂ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್ :</strong> ‘ಭಾರತವು ತನ್ನ ವೈಫಲ್ಯವನ್ನು ಮರೆಮಾಚಲು ಪ್ರಾದೇಶಿಕ ಅಸ್ಥಿರತೆ ಉಂಟುಮಾಡುವ ಹೇಳಿಕೆಗಳನ್ನು ನೀಡುತ್ತಿದೆ’ ಎಂದು ಪಾಕಿಸ್ತಾನ ಶನಿವಾರ ಟೀಕಿಸಿದೆ.</p>.<p>‘ಭಾರತದ ಬೇಜವಾಬ್ದಾರಿ ಹೇಳಿಕೆಗಳನ್ನು ಪಾಕಿಸ್ತಾನವು ತಿರಸ್ಕರಿಸಲಿದೆ’ ಎಂದು ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಅವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಸಿಂಧೂ ಜಲ ಒಪ್ಪಂದವು (ಐಡಬ್ಲ್ಯುಟಿ) ಅಚಲ ನಂಬಿಕೆಯಿಂದ ತೀರ್ಮಾನಿಸಲಾದ ಅಂತರರಾಷ್ಟ್ರೀಯ ಒಪ್ಪಂದವಾಗಿದೆ. ಯಾವುದೇ ಏಕಪಕ್ಷೀಯ ಉಲ್ಲಂಘನೆಯು ಪ್ರಾದೇಶಿಕ ಸ್ಥಿರತೆಯನ್ನು ಹಾಳು ಮಾಡುತ್ತದೆ ಎಂದು ಅವರು ಹೇಳಿದರು.</p>.<p>ಈ ಒಪ್ಪಂದದ ಅಡಿಯಲ್ಲೇ ಪಾಕಿಸ್ತಾನವು ತನ್ನ ಕಾನೂನುಬದ್ಧ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.</p>.<p>ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಕಿಸ್ತಾನದ ಹೆಸರು ಪ್ರಸ್ತಾಪಿಸಿದೆ, ‘ನೆರೆಹೊರೆಯ ದುಷ್ಟ ದೇಶ’ ಎಂದು ಶುಕ್ರವಾರ ಟೀಕಿಸಿದ್ದರು. ದೇಶದೊಳಗೆ ಭಯೋತ್ಪಾದನಾ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿರುವ ಪಕ್ಕದ ದುಷ್ಟ ರಾಷ್ಟ್ರವು ನಮ್ಮೊಂದಿಗೆ ನೀರು ಹಂಚಿಕೊಳ್ಳಿ ಎಂದು ಕೇಳುವಂತಿಲ್ಲ ಎಂದೂ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>