<p><strong>ಪೆಶಾವರ:</strong> ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿದ್ದ ಭಯೋತ್ಪಾದಕರ ಅಡಗುದಾಣಗಳ ಮೇಲೆ ಸೇನೆ ನಡೆಸಿದ ಡ್ರೋನ್ ದಾಳಿಯಲ್ಲಿ 12ಕ್ಕೂ ಅಧಿಕ ಉಗ್ರರು ಹಾಗೂ ಕೆಲವು ನಾಗರಿಕರು ಸಾವಿಗೀಡಾಗಿದ್ದಾರೆ.</p><p>ಮರ್ಡನ್ ಜಿಲ್ಲೆಯ ಕಟ್ಲಂಗ್ ಎನ್ನುವ ಗುಡ್ಡ ಪ್ರದೇಶದಲ್ಲಿ ಉಗ್ರರ ಅಡಗುದಾಣಗಳನ್ನು ಗುರಿಯಾಗಿಸಿಕೊಂಡು ಶನಿವಾರ ಬೆಳಿಗ್ಗೆ ಉಗ್ರರ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಪ್ರಾಂತೀಯ ಸರ್ಕಾರ ಬಿಡಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.</p>.ಪೆಶಾವರ: ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಸ್ಫೋಟ; ನಾಲ್ವರಿಗೆ ಗಾಯ.<p>ಕಾರ್ಯಾಚರಣೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿ ನಾಗರಿಕರು ಸಾವಿಗೀಡಾಗಿದ್ದಾರೆ. 12 ಉಗ್ರರು ಮೃತಪಟ್ಟಿದ್ದಾರೆ ಎಂದು ಆಡಳಿತ ತಿಳಿಸಿದೆ.</p><p>ಈ ಸ್ಥಳವನ್ನು ಶಸ್ತ್ರಸಜ್ಜಿತ ಉಗ್ರರು ಅಡಗುದಾಣ ಹಾಗೂ ಸಾಗಣೆ ತಾಣವನ್ನಾಗಿ ಮಾಡಿಕೊಂಡಿದ್ದಾರೆ ಎನ್ನುವ ಖಚಿತ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪ್ರದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಪ್ರಮುಖರನ್ನು ಕೊಲ್ಲಲಾಗಿದೆ ಎಂದು ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.ಪೆಶಾವರ: ಒಂದೇ ಕುಟುಂಬದ 10 ಮಂದಿ ಕೊಲೆ.<p>ಕಾರ್ಯಾಚರಣೆಯಲ್ಲಿ ನಾಗರಿಕರ ಸಾವು ಖಂಡನಾರ್ಹ ಹಾಗೂ ದುರಂತ ಎಂದು ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮಿನ್ ಗಂದಾಪುರ ತಿಳಿಸಿದ್ದಾರೆ.</p><p>ಘಟನೆಯಲ್ಲಿ ಗಾಯಗೊಂಡ ನಾಗರಿಕರಿಗೆ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.</p> .ಪೆಶಾವರ ಆತ್ಮಾಹುತಿ ದಾಳಿ: ಮೃತರ ಸಂಖ್ಯೆ 100ಕ್ಕೆ ಏರಿಕೆ, ಉಗ್ರನ ರುಂಡ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಶಾವರ:</strong> ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿದ್ದ ಭಯೋತ್ಪಾದಕರ ಅಡಗುದಾಣಗಳ ಮೇಲೆ ಸೇನೆ ನಡೆಸಿದ ಡ್ರೋನ್ ದಾಳಿಯಲ್ಲಿ 12ಕ್ಕೂ ಅಧಿಕ ಉಗ್ರರು ಹಾಗೂ ಕೆಲವು ನಾಗರಿಕರು ಸಾವಿಗೀಡಾಗಿದ್ದಾರೆ.</p><p>ಮರ್ಡನ್ ಜಿಲ್ಲೆಯ ಕಟ್ಲಂಗ್ ಎನ್ನುವ ಗುಡ್ಡ ಪ್ರದೇಶದಲ್ಲಿ ಉಗ್ರರ ಅಡಗುದಾಣಗಳನ್ನು ಗುರಿಯಾಗಿಸಿಕೊಂಡು ಶನಿವಾರ ಬೆಳಿಗ್ಗೆ ಉಗ್ರರ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಪ್ರಾಂತೀಯ ಸರ್ಕಾರ ಬಿಡಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.</p>.ಪೆಶಾವರ: ಶುಕ್ರವಾರದ ಪ್ರಾರ್ಥನೆ ವೇಳೆ ಮಸೀದಿಯಲ್ಲಿ ಸ್ಫೋಟ; ನಾಲ್ವರಿಗೆ ಗಾಯ.<p>ಕಾರ್ಯಾಚರಣೆಯಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿ ನಾಗರಿಕರು ಸಾವಿಗೀಡಾಗಿದ್ದಾರೆ. 12 ಉಗ್ರರು ಮೃತಪಟ್ಟಿದ್ದಾರೆ ಎಂದು ಆಡಳಿತ ತಿಳಿಸಿದೆ.</p><p>ಈ ಸ್ಥಳವನ್ನು ಶಸ್ತ್ರಸಜ್ಜಿತ ಉಗ್ರರು ಅಡಗುದಾಣ ಹಾಗೂ ಸಾಗಣೆ ತಾಣವನ್ನಾಗಿ ಮಾಡಿಕೊಂಡಿದ್ದಾರೆ ಎನ್ನುವ ಖಚಿತ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪ್ರದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಪ್ರೇರೇಪಿಸುತ್ತಿದ್ದ ಪ್ರಮುಖರನ್ನು ಕೊಲ್ಲಲಾಗಿದೆ ಎಂದು ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.ಪೆಶಾವರ: ಒಂದೇ ಕುಟುಂಬದ 10 ಮಂದಿ ಕೊಲೆ.<p>ಕಾರ್ಯಾಚರಣೆಯಲ್ಲಿ ನಾಗರಿಕರ ಸಾವು ಖಂಡನಾರ್ಹ ಹಾಗೂ ದುರಂತ ಎಂದು ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮಿನ್ ಗಂದಾಪುರ ತಿಳಿಸಿದ್ದಾರೆ.</p><p>ಘಟನೆಯಲ್ಲಿ ಗಾಯಗೊಂಡ ನಾಗರಿಕರಿಗೆ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.</p> .ಪೆಶಾವರ ಆತ್ಮಾಹುತಿ ದಾಳಿ: ಮೃತರ ಸಂಖ್ಯೆ 100ಕ್ಕೆ ಏರಿಕೆ, ಉಗ್ರನ ರುಂಡ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>